Homeಮುಖಪುಟ13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಸಾಮಾಜಿಕ ಮಾಧ್ಯಮಗಳನ್ನು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಎ.ಜಿ. ಮಸಿಹ್ ಅವರ ಪೀಠವು ಅರ್ಜಿಯನ್ನು ವಜಾ ಮಾಡಿದೆ. 13 ವರ್ಷದೊಳಗಿನ ಮಕ್ಕಳಿಗೆ

ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರ್ಕಾರದ ವ್ಯಾಪ್ತಿಯ ವಿಚಾರವಾಗಿದ್ದು, ಈ ವಿಷಯದ ಬಗ್ಗೆ ನಿರ್ದೇಶನಗಳನ್ನು ನೀಡಲು ಪೀಠವು ನಿರಾಕರಿಸಿತು. ಕಾನೂನು ಜಾರಿಗೆ ತರಲು ಸಂಸತ್ತನ್ನು ಕೇಳುವಂತೆ ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಅರ್ಜಿಯಲ್ಲಿ ಒತ್ತಿ ಹೇಳಲಾದ ವಿಷಯಗಳ ಕುರಿತು ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ನ್ಯಾಯಾಲಯವು ಅರ್ಜಿದಾರರಿಗೆ ಅವಕಾಶ ನೀಡಿತು.

ಸಾಮಾಜಿಕ ಮಾಧ್ಯಮಗಳಿಗೆ ಅನಿಯಂತ್ರಿತವಾಗಿ ಪ್ರವೇಶಿಸಲು ಸಾಧ್ಯವಾಗುತ್ತಿರುವುದರಂದ ಆರೋಗ್ಯ ಮತ್ತು ಘನತೆಯ ಹಕ್ಕು ಸೇರಿದಂತೆ ಬದುಕುವ ಹಕ್ಕನ್ನು ಖಾತರಿಪಡಿಸುವ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಮಕ್ಕಳ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆಯಾಗುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು.

“ಅರ್ಥಪೂರ್ಣ ನಿಯಂತ್ರಕ ಮೇಲ್ವಿಚಾರಣೆಯ ಕೊರತೆಯು ಸಾಮಾಜಿಕ ಮಾಧ್ಯಮವನ್ನು ಒಂದು ನಿಯಂತ್ರಣರಹಿತ ಮಾನಸಿಕ ಯುದ್ಧಭೂಮಿಯಾಗಿ ಪರಿವರ್ತಿಸಿದೆ. ಅಲ್ಲಿ ಅಪ್ರಾಪ್ತ ವಯಸ್ಸಿನವರು ದುರುಪಯೋಗಿ ಅಲ್ಗಾರಿದಮ್‌ಗಳಿಗೆ, ಅವಾಸ್ತವಿಕ ತುಲನೆಗಳಿಗೆ ಮತ್ತು ತೀವ್ರವಾಗಿ ಹಾನಿಕಾರಕ ವಿಷಯಗಳಿಗೆ ಒಡ್ಡಿಕೊಳ್ಳುತ್ತಿದ್ದಾರೆ,” ಎಂದು ಅರ್ಜಿಯ ಉಲ್ಲೇಖಿಸಿದೆ.

3 ರಿಂದ 18 ವಯಸ್ಸಿನ ಮಕ್ಕಳಿಗಾಗಿ ರಿಯಲ್-ಟೈಮ್ ಮೇಲ್ವಿಚಾರಣಾ ಸಾಧನಗಳು, ಕಠಿಣ ವಯಸ್ಸಿನ ಪರಿಶೀಲನೆ ಮತ್ತು ವಿಷಯ ನಿರ್ಬಂಧಗಳಂತಹ ಕಡ್ಡಾಯ ಪೋಷಕರ ನಿಯಂತ್ರಣ ಕ್ರಮಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಈ ನಿಯಮಗಳನ್ನು ಪಾಲಿಸಲು ವಿಫಲರಾದ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಕಠಿಣ ದಂಡ ವಿಧಿಸಬೇಕೆಂದು ಸಹ ಅದು ಕೇಳಿಕೊಂಡಿತ್ತು.

ಹೆಚ್ಚುವರಿಯಾಗಿ, ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆಯ ಅಪಾಯಗಳ ಬಗ್ಗೆ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿ ಡಿಜಿಟಲ್ ಸಾಕ್ಷರತಾ ಅಭಿಯಾನವನ್ನು ಪ್ರಾರಂಭಿಸಲು ಅರ್ಜಿಯು ಸರ್ಕಾರವನ್ನು ವಿನಂತಿಸಿತ್ತು.

ಜನವರಿ 3 ರಂದು, ಕೇಂದ್ರ ಸರ್ಕಾರವು ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳನ್ನು ಬಿಡುಗಡೆ ಮಾಡಿತ್ತು. ಇದು ಮಕ್ಕಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಖಾತೆಗಳನ್ನು ರಚಿಸಲು ಪರಿಶೀಲಿಸಬಹುದಾದ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾಪವನ್ನು ಹೊಂದಿದೆ. ಸಾರ್ವಜನಿಕ ಸಮಾಲೋಚನೆಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಕಟಿಸಿದ ಕರಡು ನಿಯಮಗಳಲ್ಲಿ ಪೋಷಕರು ಅಥವಾ ಕಾನೂನುಬದ್ಧ ಪೋಷಕರು ನೀಡುವ ಒಪ್ಪಿಗೆಯನ್ನು ಸರ್ಕಾರದಿಂದ ಅನುಮೋದಿತ ಗುರುತಿನ ಪುರಾವೆಯ ಮೂಲಕ ಸ್ವಯಂಪ್ರೇರಣೆಯಿಂದ ಮೌಲ್ಯೀಕರಿಸಬೇಕು ಎಂದು ಹೇಳಿದೆ. 13 ವರ್ಷದೊಳಗಿನ ಮಕ್ಕಳಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...