Homeಕರ್ನಾಟಕಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

ಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

- Advertisement -
- Advertisement -

ಕೋಮುವಾದಿ ಸಂಘಟನೆಗಳು ದಲಿತ ಯುವಕರನ್ನು ದಾರಿ ತಪ್ಪಿಸಿ, ದುರ್ಬಳಕೆ ಮಾಡಿಕೊಳ್ಳುತ್ತಿವೆ, ಹಾಗಾಗಿ ಶ್ರೀರಾಮಸೇನೆ ಸಂಘಟನೆಯನ್ನು ನಿಷೇಧ ಮಾಡಬೇಕು ಮತ್ತು ಆ ಸಂಘಟನೆಯ ರಾಜ್ಯಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡಬೇಕು ಎಂದು ದಲಿತ ಸಂಘಟನೆ ಮುಖಂಡ ಭಾಸ್ಕರ್‌ ಪ್ರಸಾದ್ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಗೋವುಗಳನ್ನು ಸಾಗಿಸುವವರ ಮೇಲೆ ದಾಳಿ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದಲಿತ ಸಂಘಟನೆಗಳು ಸಭೆ ನಡೆಸಿದ ಬಳಿಕ ದೊಡ್ಡಬಳ್ಳಾಪುರ ಪೊಲೀಸರಿಗೆ ದೂರು ನೀಡಿದ್ದಾರೆ.

”ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯನ್ನು ನಿಷೇಧ ಮಾಡಲು ಕ್ರಮ ವಹಿಸಬೇಕು. ಸಂಘಟನೆಯ ವಿರುದ್ದ SC/ST ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

”ದಿನಾಂಕ 24/9/2023ರಂದು ರಂದು ದೊಡ್ಡಬಳ್ಳಾಪುರದಲ್ಲಿ ಶ್ರೀರಾಮ ಸೇನೆ ಸಂಘಟನೆಯು ಮಾಡಿರುವ ದುಷ್ಕೃತ್ಯದ ಕುರಿತು ಈಗಾಗಲೇ ನಿಮ್ಮ ಠಾಣೆಯಲ್ಲಿ ದೂರು ದಾಖಲಾಗಿದ್ದು ತಪ್ಪಿತಸ್ಥರನ್ನು ದಸ್ತಗಿರಿ ಮಾಡಿರುವುದು ಶ್ಲಾಘನೀಯ. ಆದರೆ ಮುಂದೆ ಈ ರೀತಿಯ ಘಟನೆಗಳು ಮರುಕಳಿಸಿ ಸಮಾಜದ ಶಾಂತಿಗೆ ದಕ್ಕೆಯಾಗದಿರಲು ಮುಂಜಾಗ್ರತ ಕ್ರಮವನ್ನು ವಹಿಸುವ ಸಲುವಾಗಿ ನಾವು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಾ ಈ ದೂರು ನೀಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

”ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗು ಭಯೋತ್ಪಾದಕ ಸಂಘಟನೆಯಾಗಿದ್ದು. ಈ ಸಂಘಟನೆಯನ್ನು ನಿಷೇಧಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಕೋರುತ್ತೇವೆ. ತಪ್ಪಿತಸ್ಥರ ವಿರುದ್ಧ UAPA ಮತ್ತು NIA ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ದಲಿತ ಯುವಕರನ್ನು ದಾರಿ ತಪ್ಪಿಸಿ ಕೋಮುವಾದಿ ಸಂಘಟನೆಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಯಬೇಕು. ದಲಿತ ಯುವಕರು ಕೋಮುವಾದಿಗಳಾಗಿ ಬೆಳೆಯುವಲ್ಲಿ ಪ್ರಚೋದನೆ ಮಾಡುತ್ತಿರುವ ಶ್ರೀರಾಮ ಸೇನೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯ ರಾಜ್ಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧವೂ ಪ್ರಕರಣವನ್ನು ದಾಖಲಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

”ಕೋಮುವಾದಿ ಸಂಘಟನೆಗಳಿಂದ ದಲಿತ ಯುವಕರನ್ನು ಆಚೆ ತಂದು ಅವರುಗಳು ಸಂವಿಧಾನದ ಅಡಿಯಲ್ಲಿ ತಮ್ಮ ಹಕ್ಕುಗಳನ್ನು ಹೊಂದಲು ಅಗತ್ಯ ಸಭೆಗಳನ್ನು ನಡೆಸಲು ಮತ್ತು ಅಗತ್ಯ ಸವಲತ್ತುಗಳನ್ನು ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಈ ದೂರಿನೊಂದಿಗೇ ಕೋರುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಅವರು, ”ಇತ್ತೀಚೆಗೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋಸ್ ಮುತಾಲಿಕ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿಯ ದಲಿತ ಯುವಕರಲ್ಲಿ ಕೋಮುವಿಷವನ್ನು ತುಂಬಿದ್ದಾರೆ. ದಲಿತ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

”ದೊಡ್ಡಬಳ್ಳಾಪುರದಲ್ಲಿ ದನಗಳನ್ನು ಹಿಂದಿನಿಂದಲೂ ಸಾಗಿಸಲಾಗುತ್ತದೆ, ಈಗಲೂ ಸಾಗಿಸಲಾಗುತ್ತಿದೆ. ಆದರೆ ಇಷ್ಟುದಿನ ಬಜರಂಗದಳ, ಶ್ರೀರಾಮ ಸೇನೆಯಂತಹ ಸಂಘಟನೆಗಳಿಗೆ ಹಪ್ತಾ ಹೋಗುತ್ತಿದ್ದರಿಂದ ಈವರೆಗೆ ದನಗಳನ್ನು ಸಾಗಿಸಲು ಸಮಸ್ಯೆಯಾಗಿರಲಿಲ್ಲ. ಆದರೆ ಇದೀಗ ಹಪ್ತಾ ನೀಡಿಲ್ಲ ಎನ್ನುವ ಕಾರಣಕ್ಕೆ ದನಗಳನ್ನು ಸಾಗಿಸುವ ಮುಸ್ಲಿಂ ಸಮುದಾಯದವರ ಮೇಲೆ ದಾಳಿ ನಡೆಸಲಾಗುತ್ತಿದೆ. ಈ ದಾಳಿಗೆ ದಲಿತ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

”ದಲಿತ ಯುವಕರಿಗೆ ಉದ್ಯೋಗ ನೀಡುವ ಮೂಲಕ ಕೋಮುವಾದಿ ಸಂಘಟನೆಗಳಿಂದ ದೂರ ಉಳಿಯುವಂತೆ ಮಾಡಬೇಕು ಎಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಜರಂಗದಳ ಸೇರಿದಂತೆ ಅನೇಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿಕೊಂಡಿತ್ತು. ಆದರೆ ಇದೀಗ ಅಧಿಕಾರಕ್ಕೆ ಬಂದಿದ್ದಾರೆ ಆದಷ್ಟು ಬೇಗ ಬಜರಂಗದಳ ಶ್ರೀರಾಮ್ ಸೇನೆಯಂತಹ ಸಂಘಟನೆಗಳನ್ನು ನಿಷೇಧ ಮಾಡಬೇಕು” ಎಂದು ಭಾಸ್ಕರ್ ಪ್ರಸಾದ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ: ಹಿಂದುತ್ವ ನಾಯಕ ಮಿಲಿಂದ್ ಎಕ್ಬೋಟೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...