Homeಕರ್ನಾಟಕಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

ಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

- Advertisement -
- Advertisement -

ಕೋಮುವಾದಿ ಸಂಘಟನೆಗಳು ದಲಿತ ಯುವಕರನ್ನು ದಾರಿ ತಪ್ಪಿಸಿ, ದುರ್ಬಳಕೆ ಮಾಡಿಕೊಳ್ಳುತ್ತಿವೆ, ಹಾಗಾಗಿ ಶ್ರೀರಾಮಸೇನೆ ಸಂಘಟನೆಯನ್ನು ನಿಷೇಧ ಮಾಡಬೇಕು ಮತ್ತು ಆ ಸಂಘಟನೆಯ ರಾಜ್ಯಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡಬೇಕು ಎಂದು ದಲಿತ ಸಂಘಟನೆ ಮುಖಂಡ ಭಾಸ್ಕರ್‌ ಪ್ರಸಾದ್ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಗೋವುಗಳನ್ನು ಸಾಗಿಸುವವರ ಮೇಲೆ ದಾಳಿ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದಲಿತ ಸಂಘಟನೆಗಳು ಸಭೆ ನಡೆಸಿದ ಬಳಿಕ ದೊಡ್ಡಬಳ್ಳಾಪುರ ಪೊಲೀಸರಿಗೆ ದೂರು ನೀಡಿದ್ದಾರೆ.

”ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯನ್ನು ನಿಷೇಧ ಮಾಡಲು ಕ್ರಮ ವಹಿಸಬೇಕು. ಸಂಘಟನೆಯ ವಿರುದ್ದ SC/ST ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

”ದಿನಾಂಕ 24/9/2023ರಂದು ರಂದು ದೊಡ್ಡಬಳ್ಳಾಪುರದಲ್ಲಿ ಶ್ರೀರಾಮ ಸೇನೆ ಸಂಘಟನೆಯು ಮಾಡಿರುವ ದುಷ್ಕೃತ್ಯದ ಕುರಿತು ಈಗಾಗಲೇ ನಿಮ್ಮ ಠಾಣೆಯಲ್ಲಿ ದೂರು ದಾಖಲಾಗಿದ್ದು ತಪ್ಪಿತಸ್ಥರನ್ನು ದಸ್ತಗಿರಿ ಮಾಡಿರುವುದು ಶ್ಲಾಘನೀಯ. ಆದರೆ ಮುಂದೆ ಈ ರೀತಿಯ ಘಟನೆಗಳು ಮರುಕಳಿಸಿ ಸಮಾಜದ ಶಾಂತಿಗೆ ದಕ್ಕೆಯಾಗದಿರಲು ಮುಂಜಾಗ್ರತ ಕ್ರಮವನ್ನು ವಹಿಸುವ ಸಲುವಾಗಿ ನಾವು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಾ ಈ ದೂರು ನೀಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

”ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗು ಭಯೋತ್ಪಾದಕ ಸಂಘಟನೆಯಾಗಿದ್ದು. ಈ ಸಂಘಟನೆಯನ್ನು ನಿಷೇಧಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಕೋರುತ್ತೇವೆ. ತಪ್ಪಿತಸ್ಥರ ವಿರುದ್ಧ UAPA ಮತ್ತು NIA ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ದಲಿತ ಯುವಕರನ್ನು ದಾರಿ ತಪ್ಪಿಸಿ ಕೋಮುವಾದಿ ಸಂಘಟನೆಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಯಬೇಕು. ದಲಿತ ಯುವಕರು ಕೋಮುವಾದಿಗಳಾಗಿ ಬೆಳೆಯುವಲ್ಲಿ ಪ್ರಚೋದನೆ ಮಾಡುತ್ತಿರುವ ಶ್ರೀರಾಮ ಸೇನೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯ ರಾಜ್ಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧವೂ ಪ್ರಕರಣವನ್ನು ದಾಖಲಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

”ಕೋಮುವಾದಿ ಸಂಘಟನೆಗಳಿಂದ ದಲಿತ ಯುವಕರನ್ನು ಆಚೆ ತಂದು ಅವರುಗಳು ಸಂವಿಧಾನದ ಅಡಿಯಲ್ಲಿ ತಮ್ಮ ಹಕ್ಕುಗಳನ್ನು ಹೊಂದಲು ಅಗತ್ಯ ಸಭೆಗಳನ್ನು ನಡೆಸಲು ಮತ್ತು ಅಗತ್ಯ ಸವಲತ್ತುಗಳನ್ನು ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಈ ದೂರಿನೊಂದಿಗೇ ಕೋರುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಅವರು, ”ಇತ್ತೀಚೆಗೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋಸ್ ಮುತಾಲಿಕ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿಯ ದಲಿತ ಯುವಕರಲ್ಲಿ ಕೋಮುವಿಷವನ್ನು ತುಂಬಿದ್ದಾರೆ. ದಲಿತ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

”ದೊಡ್ಡಬಳ್ಳಾಪುರದಲ್ಲಿ ದನಗಳನ್ನು ಹಿಂದಿನಿಂದಲೂ ಸಾಗಿಸಲಾಗುತ್ತದೆ, ಈಗಲೂ ಸಾಗಿಸಲಾಗುತ್ತಿದೆ. ಆದರೆ ಇಷ್ಟುದಿನ ಬಜರಂಗದಳ, ಶ್ರೀರಾಮ ಸೇನೆಯಂತಹ ಸಂಘಟನೆಗಳಿಗೆ ಹಪ್ತಾ ಹೋಗುತ್ತಿದ್ದರಿಂದ ಈವರೆಗೆ ದನಗಳನ್ನು ಸಾಗಿಸಲು ಸಮಸ್ಯೆಯಾಗಿರಲಿಲ್ಲ. ಆದರೆ ಇದೀಗ ಹಪ್ತಾ ನೀಡಿಲ್ಲ ಎನ್ನುವ ಕಾರಣಕ್ಕೆ ದನಗಳನ್ನು ಸಾಗಿಸುವ ಮುಸ್ಲಿಂ ಸಮುದಾಯದವರ ಮೇಲೆ ದಾಳಿ ನಡೆಸಲಾಗುತ್ತಿದೆ. ಈ ದಾಳಿಗೆ ದಲಿತ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

”ದಲಿತ ಯುವಕರಿಗೆ ಉದ್ಯೋಗ ನೀಡುವ ಮೂಲಕ ಕೋಮುವಾದಿ ಸಂಘಟನೆಗಳಿಂದ ದೂರ ಉಳಿಯುವಂತೆ ಮಾಡಬೇಕು ಎಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಜರಂಗದಳ ಸೇರಿದಂತೆ ಅನೇಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿಕೊಂಡಿತ್ತು. ಆದರೆ ಇದೀಗ ಅಧಿಕಾರಕ್ಕೆ ಬಂದಿದ್ದಾರೆ ಆದಷ್ಟು ಬೇಗ ಬಜರಂಗದಳ ಶ್ರೀರಾಮ್ ಸೇನೆಯಂತಹ ಸಂಘಟನೆಗಳನ್ನು ನಿಷೇಧ ಮಾಡಬೇಕು” ಎಂದು ಭಾಸ್ಕರ್ ಪ್ರಸಾದ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ: ಹಿಂದುತ್ವ ನಾಯಕ ಮಿಲಿಂದ್ ಎಕ್ಬೋಟೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...