Homeಕರ್ನಾಟಕಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

ಶ್ರೀರಾಮಸೇನೆ ನಿಷೇಧಿಸಿ, ಮುತಾಲಿಕ್‌ರನ್ನು ಗಡಿಪಾರು ಮಾಡಿ: ಸರ್ಕಾರಕ್ಕೆ ಭಾಸ್ಕರ್ ಪ್ರಸಾದ್ ಆಗ್ರಹ

- Advertisement -
- Advertisement -

ಕೋಮುವಾದಿ ಸಂಘಟನೆಗಳು ದಲಿತ ಯುವಕರನ್ನು ದಾರಿ ತಪ್ಪಿಸಿ, ದುರ್ಬಳಕೆ ಮಾಡಿಕೊಳ್ಳುತ್ತಿವೆ, ಹಾಗಾಗಿ ಶ್ರೀರಾಮಸೇನೆ ಸಂಘಟನೆಯನ್ನು ನಿಷೇಧ ಮಾಡಬೇಕು ಮತ್ತು ಆ ಸಂಘಟನೆಯ ರಾಜ್ಯಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡಬೇಕು ಎಂದು ದಲಿತ ಸಂಘಟನೆ ಮುಖಂಡ ಭಾಸ್ಕರ್‌ ಪ್ರಸಾದ್ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಗೋವುಗಳನ್ನು ಸಾಗಿಸುವವರ ಮೇಲೆ ದಾಳಿ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದಲಿತ ಸಂಘಟನೆಗಳು ಸಭೆ ನಡೆಸಿದ ಬಳಿಕ ದೊಡ್ಡಬಳ್ಳಾಪುರ ಪೊಲೀಸರಿಗೆ ದೂರು ನೀಡಿದ್ದಾರೆ.

”ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯನ್ನು ನಿಷೇಧ ಮಾಡಲು ಕ್ರಮ ವಹಿಸಬೇಕು. ಸಂಘಟನೆಯ ವಿರುದ್ದ SC/ST ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

”ದಿನಾಂಕ 24/9/2023ರಂದು ರಂದು ದೊಡ್ಡಬಳ್ಳಾಪುರದಲ್ಲಿ ಶ್ರೀರಾಮ ಸೇನೆ ಸಂಘಟನೆಯು ಮಾಡಿರುವ ದುಷ್ಕೃತ್ಯದ ಕುರಿತು ಈಗಾಗಲೇ ನಿಮ್ಮ ಠಾಣೆಯಲ್ಲಿ ದೂರು ದಾಖಲಾಗಿದ್ದು ತಪ್ಪಿತಸ್ಥರನ್ನು ದಸ್ತಗಿರಿ ಮಾಡಿರುವುದು ಶ್ಲಾಘನೀಯ. ಆದರೆ ಮುಂದೆ ಈ ರೀತಿಯ ಘಟನೆಗಳು ಮರುಕಳಿಸಿ ಸಮಾಜದ ಶಾಂತಿಗೆ ದಕ್ಕೆಯಾಗದಿರಲು ಮುಂಜಾಗ್ರತ ಕ್ರಮವನ್ನು ವಹಿಸುವ ಸಲುವಾಗಿ ನಾವು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಾ ಈ ದೂರು ನೀಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

”ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗು ಭಯೋತ್ಪಾದಕ ಸಂಘಟನೆಯಾಗಿದ್ದು. ಈ ಸಂಘಟನೆಯನ್ನು ನಿಷೇಧಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಕೋರುತ್ತೇವೆ. ತಪ್ಪಿತಸ್ಥರ ವಿರುದ್ಧ UAPA ಮತ್ತು NIA ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ದಲಿತ ಯುವಕರನ್ನು ದಾರಿ ತಪ್ಪಿಸಿ ಕೋಮುವಾದಿ ಸಂಘಟನೆಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಯಬೇಕು. ದಲಿತ ಯುವಕರು ಕೋಮುವಾದಿಗಳಾಗಿ ಬೆಳೆಯುವಲ್ಲಿ ಪ್ರಚೋದನೆ ಮಾಡುತ್ತಿರುವ ಶ್ರೀರಾಮ ಸೇನೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಭಯೋತ್ಪಾದಕ ಮತ್ತು ಕೋಮುವಾದಿ ಸಂಘಟನೆಯಾದ ಶ್ರೀ ರಾಮ ಸೇನೆಯ ರಾಜ್ಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧವೂ ಪ್ರಕರಣವನ್ನು ದಾಖಲಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

”ಕೋಮುವಾದಿ ಸಂಘಟನೆಗಳಿಂದ ದಲಿತ ಯುವಕರನ್ನು ಆಚೆ ತಂದು ಅವರುಗಳು ಸಂವಿಧಾನದ ಅಡಿಯಲ್ಲಿ ತಮ್ಮ ಹಕ್ಕುಗಳನ್ನು ಹೊಂದಲು ಅಗತ್ಯ ಸಭೆಗಳನ್ನು ನಡೆಸಲು ಮತ್ತು ಅಗತ್ಯ ಸವಲತ್ತುಗಳನ್ನು ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು ಮಾಡಲು ಈ ದೂರಿನೊಂದಿಗೇ ಕೋರುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ದಲಿತ ಮುಖಂಡ ಭಾಸ್ಕರ್ ಪ್ರಸಾದ್ ಅವರು, ”ಇತ್ತೀಚೆಗೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋಸ್ ಮುತಾಲಿಕ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿಯ ದಲಿತ ಯುವಕರಲ್ಲಿ ಕೋಮುವಿಷವನ್ನು ತುಂಬಿದ್ದಾರೆ. ದಲಿತ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

”ದೊಡ್ಡಬಳ್ಳಾಪುರದಲ್ಲಿ ದನಗಳನ್ನು ಹಿಂದಿನಿಂದಲೂ ಸಾಗಿಸಲಾಗುತ್ತದೆ, ಈಗಲೂ ಸಾಗಿಸಲಾಗುತ್ತಿದೆ. ಆದರೆ ಇಷ್ಟುದಿನ ಬಜರಂಗದಳ, ಶ್ರೀರಾಮ ಸೇನೆಯಂತಹ ಸಂಘಟನೆಗಳಿಗೆ ಹಪ್ತಾ ಹೋಗುತ್ತಿದ್ದರಿಂದ ಈವರೆಗೆ ದನಗಳನ್ನು ಸಾಗಿಸಲು ಸಮಸ್ಯೆಯಾಗಿರಲಿಲ್ಲ. ಆದರೆ ಇದೀಗ ಹಪ್ತಾ ನೀಡಿಲ್ಲ ಎನ್ನುವ ಕಾರಣಕ್ಕೆ ದನಗಳನ್ನು ಸಾಗಿಸುವ ಮುಸ್ಲಿಂ ಸಮುದಾಯದವರ ಮೇಲೆ ದಾಳಿ ನಡೆಸಲಾಗುತ್ತಿದೆ. ಈ ದಾಳಿಗೆ ದಲಿತ ಯುವಕರನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

”ದಲಿತ ಯುವಕರಿಗೆ ಉದ್ಯೋಗ ನೀಡುವ ಮೂಲಕ ಕೋಮುವಾದಿ ಸಂಘಟನೆಗಳಿಂದ ದೂರ ಉಳಿಯುವಂತೆ ಮಾಡಬೇಕು ಎಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಜರಂಗದಳ ಸೇರಿದಂತೆ ಅನೇಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿಕೊಂಡಿತ್ತು. ಆದರೆ ಇದೀಗ ಅಧಿಕಾರಕ್ಕೆ ಬಂದಿದ್ದಾರೆ ಆದಷ್ಟು ಬೇಗ ಬಜರಂಗದಳ ಶ್ರೀರಾಮ್ ಸೇನೆಯಂತಹ ಸಂಘಟನೆಗಳನ್ನು ನಿಷೇಧ ಮಾಡಬೇಕು” ಎಂದು ಭಾಸ್ಕರ್ ಪ್ರಸಾದ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ: ಹಿಂದುತ್ವ ನಾಯಕ ಮಿಲಿಂದ್ ಎಕ್ಬೋಟೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...