Homeಅಂತರಾಷ್ಟ್ರೀಯವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗೆ ನಿಷೇಧ | ಇಸ್ರೇಲ್ ನಿರ್ಧಾರಕ್ಕೆ ಜಾಗತಿಕ ಖಂಡನೆ; ಹೊರಗುಳಿದ ಭಾರತ!

- Advertisement -
- Advertisement -

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರನ್ನು ಇಸ್ರೇಲ್ ಭೂಪ್ರದೇಶದಿಂದ ನಿಷೇಧಿಸುವ ಇಸ್ರೇಲ್ ಕ್ರಮವನ್ನು ಖಂಡಿಸುವ ಪತ್ರಕ್ಕೆ ಸಹಿ ಹಾಕುವುದರಿಂದ ದೂರವಿರಲು ಭಾರತ ನಿರ್ಧಾರಿಸಿದೆ. ಭಾರತ ಸರ್ಕಾರದ ಈ ಕ್ರಮವನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಭಾನುವಾರ ಕಟುವಾಗಿ ಪ್ರಶ್ನಿಸಿದ್ದಾರೆ. ವಿಶ್ವಸಂಸ್ಥೆ ಕಾರ್ಯದರ್ಶಿಗೆ ಇಸ್ರೇಲ್ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚಿದಂಬರಂ ಅವರು ಭಾರತದ ನಿಲುವು “ವಿವರಿಸಲಾಗದ ವಿಚಾರ” ಎಂದು ಬಣ್ಣಿಸಿದ್ದು, ಭಾರತವು BRICSನ ದೇಶಗಳಾದ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ಹಾಗೂ ಹೆಚ್ಚಿನ ಜಾಗತಿಕ ದಕ್ಷಿಣದ ದೇಶಗಳ ನಿಲುವುಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.  

ಇದನ್ನೂ ಓದಿ: ಮತಾಂಧತೆ ಪ್ರಚೋದಿಸುವ ಘಟನೆ ದೇಶದಲ್ಲಿ ಹೆಚ್ಚುತ್ತಿವೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್

“ಬ್ರಿಕ್ಸ್‌ನ ದೇಶಗಳಾದ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಭಾರತವು ತನ್ನ ರ‍್ಯಾಂಕ್‌ಗಳನ್ನು ಮುರಿದುಕೊಂಡಿದೆ. ಭಾರತವು ಸೌಹಾರ್ದ ಮತ್ತು ಸ್ನೇಹಯುತ ಸಂಬಂಧವನ್ನು ಹೊಂದಿರುವ ದಕ್ಷಿಣ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಹಲವು ದೇಶಗಳೊಂದಿಗಿನ ರ‍್ಯಾಂಕ್‌ಗಳನ್ನು ಮುರಿದಿದೆ” ಎಂದು ಚಿದಂಬರಂ ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ. ವಿಶ್ವಸಂಸ್ಥೆ ಕಾರ್ಯದರ್ಶಿಗೆ ಇಸ್ರೇಲ್ ನಿಷೇಧ

ವಿಶ್ವಸಂಸ್ಥೆಯ ಮುಖ್ಯಸ್ಥರ ಕಚೇರಿಯ ನಿಷ್ಪಕ್ಷಪಾತತೆಯನ್ನು ಒತ್ತಿ ಹೇಳಿದ ಚಿದಂಬರಂ, “ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪಕ್ಷಾತೀತ ಕಚೇರಿಯಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೊರಹಾಕಲು ವಿಶ್ವಸಂಸ್ಥೆ ಏಕೈಕ ಅಂತರರಾಷ್ಟ್ರೀಯ ವೇದಿಕೆಯಾಗಿದೆ. ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಅನ್ನು ಇಸ್ರೇಲ್ ಪ್ರವೇಶಿಸದಂತೆ ತಡೆಯುವಲ್ಲಿ ಮಾಡಿರುವ ಇಸ್ರೇಲ್‌ನ ನಿರ್ಧಾರ ಸಂಪೂರ್ಣವಾಗಿ ತಪ್ಪಾಗಿದೆ” ಎಂದು ಹೇಳಿದ್ದಾರೆ.

ಇಸ್ರೇಲ್ ನಿರ್ಧಾರವನ್ನು ಖಂಡಿಸುವ ಪತ್ರಕ್ಕೆ ಚಿಲಿ ಸಹಿಹಾಕಿದ್ದು, ಜೊತೆಗೆ ಯುರೋಪಿಯನ್ ಮತ್ತು ಆಫ್ರಿಕನ್ ರಾಷ್ಟ್ರಗಳು ಸೇರಿದಂತೆ 104 ದೇಶಗಳು ಕೂಡಾ ಸಹಿ ಹಾಕಿದೆ. ಈ ಪತ್ರಕ್ಕೆ ಸಹಿ ಹಾಕಿದ ಮೊದಲ ಪಟ್ಟಿಯಲ್ಲಿ ಭಾರತವೂ ಸೇರಿರಬೇಕು ಎಂದು ಚಿದಂಬರಂ ವಾದಿಸಿದ್ದಾರೆ. ಇಸ್ರೇಲ್ ಅನ್ನು ಟೀಕಿಸುವ ನಿರ್ಣಯಗಳ ಮೇಲೆ ಭಾರತವು ಈ ಹಿಂದೆ ಕೂಡಾ ಗೈರುಹಾಜರಾಗಿದ್ದು, ಈ ಪ್ರಕರಣ ತೀರಾ ಇತ್ತೀಚಿನದಗಿದೆ.

ಇದನ್ನೂ ಓದಿ: ಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಇಸ್ರೇಲ್‌ನ ನಿರ್ಧಾರವನ್ನು ಖಂಡಿಸಿರು ಪತ್ರವು, ಅಂತಹ ಕ್ರಮಗಳು ಸಂಘರ್ಷಗಳಿಗೆ ಮಧ್ಯಸ್ಥಿಕೆ ವಹಿಸುವ ಮತ್ತು ಮಾನವೀಯ ನೆರವು ನೀಡುವ ವಿಶ್ವಸಂಸ್ಥೆಯ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಪ್ರತಿಪಾದಿಸಿದೆ.

ಇತ್ತೀಚೆಗೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು “ನಿಸ್ಸಂದಿಗ್ಧವಾಗಿ ಖಂಡಿಸಲು” ವಿಶ್ವಸಂಸ್ಥೆ ವಿಫಲವಾಗಿದೆ ಎಂದು ಉಲ್ಲೇಖಿಸಿ ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಅವರು ಗುಟೆರಸ್ ಅವರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಹಮಾಸ್ ಮಾಡಿದ ದೌರ್ಜನ್ಯವನ್ನು ಖಂಡಿಸದ ಯುಎನ್ ಮುಖ್ಯಸ್ಥರನ್ನು ಕಾಟ್ಜ್ ಖಂಡಿಸಿದ್ದಾರೆ. “ಇಸ್ರೇಲ್‌ನ ಮೇಲೆ ಇರಾನ್‌ನ ಘೋರ ದಾಳಿಯನ್ನು ನಿಸ್ಸಂದಿಗ್ಧವಾಗಿ ಖಂಡಿಸಲು ಸಾಧ್ಯವಾಗದ ಯಾರಾದರೂ, ಪ್ರಪಂಚದ ಪ್ರತಿಯೊಂದು ದೇಶಗಳು ಮಾಡಿದಂತೆ, ಇಸ್ರೇಲಿ ನೆಲದಲ್ಲಿ ಕಾಲಿಡಲು ಅರ್ಹರಲ್ಲ” ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಿಡಿಯೊ ನೋಡಿ: ರಾಯಚೂರಿನಲ್ಲಿ AIIMS ಸ್ಥಾಪಿಸದೆ ವಂಚನೆ ಮಾಡುತ್ತಿರುವ ಸರ್ಕಾರ: ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಭಟನೆಯ ದನಿ

ವಿಡಿಯೊ ನೋಡಿ: ರಾಯಚೂರಿನಲ್ಲಿ AIIMS ಸ್ಥಾಪಿಸದೆ ವಂಚನೆ ಮಾಡುತ್ತಿರುವ ಸರ್ಕಾರ: ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಭಟನೆಯ ದನಿ

ವಿಡಿಯೊ ನೋಡಿ: ರಾಯಚೂರಿನಲ್ಲಿ AIIMS ಸ್ಥಾಪಿಸದೆ ವಂಚನೆ ಮಾಡುತ್ತಿರುವ ಸರ್ಕಾರ: ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಭಟನೆಯ ದನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...