Homeಚಳವಳಿಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನೂ ಪಾಠ ಆರಂಭಿಸದ ಮುಸ್ಲಿಂ ಸಂಸ್ಕೃತ ಪ್ರೊಫೆಸರ್ ವಿರುದ್ಧ ಬನಾರಸ್ ಹಿಂದೂ ವಿ.ವಿ.ಯಲ್ಲಿ ಪ್ರತಿಭಟನೆ!!!! ಇದು ಎಬಿವಿಪಿ-ಆರೆಸ್ಸೆಸ್‌ನ ಕೋಮುವಾದಿ ಪ್ರಹಸನ!

- Advertisement -
- Advertisement -

ಕೃಪೆ: ದಿ ಕ್ವಿಂಟ್‌

ಐಶ್ವರ್ಯ ಎಸ್. ಅಯ್ಯರ್

ಅನುವಾದ: ನಿಖಿಲ್ ಕೋಲ್ಪೆ

ಇದನ್ನು ಪಕ್ಕಾ ರಾಜಕೀಯ ಪ್ರೇರಿತ ಕೋಮುವಾದ ಎನ್ನದೇ ಬೇರೆ ದಾರಿಯೇ ಇಲ್ಲ. ಇನ್ನೂ ಪಾಠವನ್ನೇ ಮಾಡದ, ಪರಿಚಯವೇ ಆಗದ ಹೊಸ ಸಂಸ್ಕೃತ ಪ್ರಾಧ್ಯಾಪಕರೊಬ್ಬರ ವಿರುದ್ಧ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರಣ ಅವರು ಮುಸ್ಲಿಂ ಎಂಬುದು ಮಾತ್ರ!

“ನೀವು ನನಗೊಂದು ಅವಕಾಶ ಕೊಡಿ. ಆಗ ನಿಮ್ಮ ಪ್ರತಿಭಟನೆಗೆ ಅಗತ್ಯವೇ ಇಲ್ಲವೆಂದು ನಿಮಗೆ ತಿಳಿಯಲೂ ಬಹುದು” ಹೀಗೆಂದು ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್‌ಯು)ದ ವಿದ್ಯಾರ್ಥಿಗಳಿಗೆ ಮನವಿ ಮಾಡಿದವರು ರಾಜಸ್ಥಾನದ ಜೈಪುರ ಜಿಲ್ಲೆಯವರಾದ 28ರ ಹರೆಯದ ಫಿರೋಜ್ ಖಾನ್.

ಅವರು ನವೆಂಬರ್ 7ರಂದು ಇಲ್ಲಿ ಬಂದಿಳಿದಿದ್ದರು. ಆದರೆ, ಹಿಂದಿನ ದಿನವೇ ಅವರ ಇಮೇಲ್ ಬಾಕ್ಸಿಗೆ ಅವರನ್ನು ಬಿಎಚ್‌ಯುವಿನ ಸಹಾಯಕ ಸಂಸ್ಕೃತ ಪ್ರಾಧ್ಯಾಪಕರಾಗಿ ನಿಯುಕ್ತಿಗೊಳಿಸಿದ ಪತ್ರ ತಲಪಿತ್ತು. ಆಗಲೇ ಬಿಜೆಪಿಯ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು. ಆದುದರಿಂದ, ದೇಶದ ಪ್ರತಿಷ್ಟಿತ ಮತ್ತು ಹಳೆಯ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುವ ಅವರ ಕಾತರವು ತಕ್ಷಣವೇ ಆತಂಕವಾಗಿ ಬದಲಾಯಿತು.

ಈ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು ಗೊತ್ತೆ? “ಹಿಂದೂವೊಬ್ಬ ಹೇಗೆ ಮದರಸದಲ್ಲಿ ಪಾಠ ಮಾಡಲು ಸಾಧ್ಯವಿಲ್ಲವೋ, ಹಾಗೆಯೇ ಮುಸ್ಲಿಮನೊಬ್ಬ ‘ಗುರುಕುಲ’ದಲ್ಲಿ ಪಾಠಮಾಡಲು ಸಾಧ್ಯವಿಲ್ಲ ಎಂಬುದು!(ವಿಶ್ವವಿದ್ಯಾಲಯವೊಂದು ‘ಗುರುಕುಲ’ವಾದದ್ದು ಯಾವಾಗ ಎಂದು ಅವರೇ ಬಲ್ಲರು!). ಈಗ, ಸಂಸ್ಕೃತ ವಿಭಾಗಕ್ಕೇ ಬೀಗ ಜಡಿಯಲಾಗಿದ್ದು, ಖಾನ್ ಅವರು ಒಂದೇ ಒಂದು ಪಾಠವನ್ನೂ ಮಾಡಿಲ್ಲ. ಆದರೂ, ಅವರು ಪರಿಸ್ಥಿತಿ ಸುಧಾರಿಸಿ, ತಿಳಿಯಾಗುವ ಬಗ್ಗೆ ವಿಶ್ವಾಸ ಕಳೆದುಕೊಂಡಿಲ್ಲ.

ಅವರು ಬಹಿರಂಗಪಡಿಸಲು ಇಚ್ಚಿಸದ ಸ್ಥಳವೊಂದರಲ್ಲಿ ‘ದಿ ಕ್ವಿಂಟ್’ ಜೊತೆ ಮುಕ್ತವಾಗಿ ಮಾತನಾಡಿ, “ಬಹುಶಃ ನಾನು ಬಿಎಚ್‌ಯು ವಿದ್ಯಾರ್ಥಿಗಳ ಯೋಚನಾ ರೀತಿಯನ್ನು ಬದಲಿಸಲೂ ಸಾಧ್ಯವಾಗಬಹುದು. ಇದನ್ನು ಹೇಗೆ ಮಾಡುವುದು ಎಂದು ನನಗೆ ಗೊತ್ತಿಲ್ಲ. ಅವರು ನನ್ನನ್ನು ಸರಿಯಾಗಿ ತಿಳಿದುಕೊಂಡರೆ, ನನ್ನನ್ನು ಮೆಚ್ಚಿಕೊಳ್ಳಬಹುದು” ಎಂದರು.

ಫಿರೋಜ್ ಜೈಪುರ ಜಿಲ್ಲೆಯ ಬಗ್ರು ಎಂಬ ಪಟ್ಟಣದಲ್ಲಿ ಜನಿಸಿದವರು. ನಾಲ್ವರು ಗಂಡುಮಕ್ಕಳಲ್ಲಿ ಮೂರನೆಯವರು. ಅವರು ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ್‌ನಿಂಧ ಸಂಸ್ಕೃತ ಸಾಹಿತ್ಯದಲ್ಲಿ ಬಿ.ಎಡ್. ಮತ್ತು ಸ್ನಾತಕೊತ್ತರ ಪದವಿ ಪಡೆದಿದ್ದಾರೆ. ಅಲ್ಲಿ ಅವರು ಅತಿಥಿ ಉಪನ್ಯಾಸಕರಾಗಿಯೂ ಕೆಲಸ ಮಾಡಿದ್ದಾರೆ. ಬಾಲ್ಯದಲ್ಲಿಯೇ ಅವರನ್ನು ಸಂಸ್ಕೃತ ಶಾಲೆಗೆ ಸೇರಿಸಲಾಗಿತ್ತು.

ತನ್ನ ಅಜ್ಜ ಮತ್ತು ತಂದೆಯ ಬಗ್ಗೆ ಮಾತನಾಡುತ್ತಾ, ಪಿರೋಜ್ ಹೇಳುತ್ತಾರೆ: “ನನ್ನ ಅಜ್ಜ ಹಿಂದೂ ಭಕ್ತಿಗೀತೆಗಳನ್ನು ಹಾಡುತ್ತಿದ್ದರು. ಅವರೀಗ ಇಲ್ಲ. ಆದರೆ, ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವುದೇ ಕಾರ್ಯಕ್ರಮ ಇದ್ದರೂ, ಅಜ್ಜನನ್ನು ಹಾಡಲು ಕರೆಯುತ್ತಿದ್ದರು. ತಂದೆಯವರು ಅವರಿಂದ ಕಲಿತರು. ನಮ್ಮ ಮನೆಯಿಂದ 2-3 ಕಿ.ಮೀ. ದೂದದಲ್ಲಿ ಒಂದು ಹಸುಗಳ ಹಟ್ಟಿಯಿದೆ. ಅದನ್ನು ರಾಮದೇವ್ ಗೋಶಾಲೆ ಎಂದು ಕರೆಯುತ್ತಾರೆ. ನನ್ನ ತಂದೆಯವರು ಪ್ರತೀ ದಿನ ಅಲ್ಲಿಗೆ ಹೋಗಿ ಹಿಂದೂ ಭಕ್ತಿಗೀತೆಗಳನ್ನು ಹಾಡುತ್ತಾರೆ”.

ಫಿರೋಜ್ ಅವರ ತಂದೆ ಸಂಸ್ಕೃತದಲ್ಲಿ ಪರಿಣಿತರಾಗಿದ್ದು, ಶಾಲೆ ಕಲಿಯುವ ಸಮಯದಲ್ಲಿ ಮಗನಿಗೆ ನೆರವಾಗುತ್ತಿದ್ದರಃ. ಫಿರೋಜ್, ಸಂಸ್ಕೃತದಲ್ಲಿ ಪಂಡಿತನಾಗಬೇಕು ಎಂದು ಬಯಸಿದ್ದರು. ಆದರೆ ಈಗ, ತನ್ನ ಮಗ ಒಮ್ಮೆ ಮನೆಗೆ ಹಿಂತಿರುಗಿ ಬರಲಿ ಎಂದು ಕಾತರರಾಗಿದ್ದಾರೆ.

“ನಮ್ಮ ತಂದೆಗೆ ಚಿಂತೆಯಿಂದ ನಿದ್ದೆ ಬರುತ್ತಿಲ್ಲ. ನೀನು ಮರಳಿ ಬಾ. ನಮಗೆ ಇರುವ ಸ್ವಲ್ಪದರಲ್ಲೇ ಬದುಕಬಹುದು. ಮನೆಯಿಂದ ದೂರ ಇರುವ ಅಗತ್ಯ ಇಲ್ಲ ಎಂದು ಅಣ್ಣ ಪಾಪಾಸು ಕರೆಯುತ್ತಾರೆ. ನಾನು ಏನನ್ನೂ ಹೇಳುವುದಿಲ್ಲ. ಆದರೆ, ನಾನಿಲ್ಲಿ ಉಳಿಯಬೇಕೆಂದು ನನ್ನ ನಂಬಿಕೆ” ಎನ್ನುತ್ತಾರೆ ಫಿರೋಜ್.

ಅವರ ನೇಮಕಾತಿ ವಿರುದ್ದ ನೇರವಾಗಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವ ಉದ್ದೇಶ ಇದೆಯೇ ಎಂದು ಕೇಳಿದಾಗ, ತಾನು ಮಾತುಕತೆಗೆ ಮುಕ್ತವಾಗಿದ್ದು, ಆಡಳಿತವು ಬಯಸಿದರೆ ಮಾತುಕತೆಗೆ ಸಿದ್ಧ ಎನ್ನುತ್ತಾರೆ. ಸದ್ಯಕ್ಕೆ ತಾನು ಯಾವಾಗ ಪಾಠ ಮಾಡಲು ಆರಂಭಿಸಬಹುದು ಎಂಬ ಬಗ್ಗೆ ತನಗೇ ಗೊತ್ತಿಲ್ಲ ಎನ್ನುತ್ತಾರೆ.

ಬಿಎಚ್‌ಯುವಿನ ಅವಕಾಶವನ್ನು ಬಿಟ್ಟುಕೊಡಲು ಸಿದ್ಧವಿಲ್ಲದಿರುವುದಕ್ಕೆ ಇನ್ನೊಂದು ಕಾರಣವೂ ಇದೆ. ಅದೆಂದರೆ, ಬಿಎಚ್‌ಯುವಿಗೆ ಅವರು ನೀಡಿದ ಮೊದಲ ಭೇಟಿಯ ನೆನಪುಗಳು. ಹಿಂದಕ್ಕೆ ಹೋಗುತ್ತಾ ಅವರು ಹೇಳುತ್ತಾರೆ: “2017ರಲ್ಲಿ ಬಿಎಚ್‌ಯು ತನ್ನ ಸಂಸ್ಕೃತ ಉತ್ಸವಕ್ಕೆ ನನ್ನನ್ನು ಆಹ್ವಾನಿಸಿತ್ತು. ನಾನು ಓಂಕಾರನಾಥ ಠಾಕೂರ್ ಅಪೇಕ್ಷಾ ಸದನದಲ್ಲಿ ಹಾಡಿದ್ದೆ. ಪ್ರತಿಯೊಂದೂ ಸ್ಮರಣೀಯವಾಗಿತ್ತು. ಅವರು ನನ್ನನ್ನು ತಮ್ಮ ಅತಿಥಿಗೃಹದಲ್ಲಿ ಇರಿಸಿಕೊಂಡು ನನ್ನ ಬೇಕು ಬೇಡಗಳನ್ನೆಲ್ಲಾ ಪೂರೈಸಿ ಸತ್ಕರಿಸಿದ್ದರು. ನನಗೆ ಬಹಳ ಗೌರವ ಕೊಟ್ಟಿದ್ದರು.”

ತಾನು ಸಂಸ್ಕೃತ ಕಲಿಯುವುದಕ್ಕಾಗಿ ವಿನಿಯೋಗಿಸಿದ ಇಷ್ಟು ವರ್ಷಗಳನ್ನು ನೆನಪಿಸಿಕೊಂಡ ಅವರು, ಇವತ್ತಿನ ತನಕ ಯಾರೂ ಸಂಸ್ಕೃತ ತನ್ನ ಸ್ವಂತ ಭಾಷೆಯಲ್ಲ ಎಂಬ ಭಾವನೆ ಬರುವಂತೆ ಮಾಡಿರಲಿಲ್ಲ ಎನ್ನುತ್ತಾರೆ. “ನನಗೆ ಯಾವುದೇ ತೊಂದರೆ ಉಂಟಾದಾಗ ಹಿಂದೂಗಳಾಗಿದ್ದ ಗುರುಗಳ ಬಳಿಗೆ ಹೋಗುತ್ತಿದ್ದೆ. ಅವರು ನನಗೆ ತಮ್ಮ ಶಕ್ತಿ ಮೀರಿ ನೆರವಾಗುತ್ತಿದ್ದರು. ನಾನು ಬೇರೆಯವನು ಎಂಬ ಭಾವನೆ ಬರುವಂತೆ ನನ್ನ ಗುರುಗಳು, ನನ್ನ ಮಿತ್ರರು, ನನ್ನ ಶಿಷ್ಯರಾದಿಯಾಗಿ ಯಾರೂ, ಎಂದೂ ಮಾಡಲಿಲ್ಲ. ಆದರೆ, ಈಗೇಕೆ ಹಾಗಾಗುತ್ತಿದೆ?” ಎಂದು ಅವರು ಕೇಳುತ್ತಾರೆ.

ಅವರ ಸಂಸ್ಕೃತ ಎಷ್ಟು ನಿರರ್ಗಳವಾಗಿದೆ ಎಂದು ಕೇಳಿದಾಗ, ತಾನು ನಿಯಮಿತವಾಗಿ ದೂರದರ್ಶನದಲ್ಲಿ ಸುದ್ದಿ ಓದುತ್ತಿದ್ದೆ ಎನ್ನುತ್ತಾರವರು. “ದೂರದರ್ಶನಲ್ಲಿ ಸಂಸ್ಕೃತ ವಾರ್ತಾವಳಿ ಎಂಬ ಕಾರ್ಯಕ್ರಮವಿದೆ. ಅದರಲ್ಲಿ ಬಾಲಿವುಡ್ ಹಾಡುಗಳನ್ನು ಸಂಸ್ಕೃತಕ್ಕೆ ಅನುವಾದಿಸಬೇಕಾಗುತ್ತದೆ. ಅವರು ಹಾಡುಗಳನ್ನು ಅನುವಾದಕ್ಕಾಗಿ ನನಗೆ ಕಳುಹಿಸುತ್ತಿದ್ದರು. ನಾನು ಹಾಡಿದ ಹಾಡುಗಳನ್ನು ಅವರು ಪ್ರಸಾರ ಮಾಡುತ್ತಿದ್ದರು” ಎಂದು ಹೇಳುತ್ತಾರೆ. ಅದಲ್ಲದೇ, 2019ರ ಆಗಸ್ಟ್‌ನಲ್ಲಿ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಂದ ಸಂಸ್ಕೃತ ಯುವ ಪ್ರತಿಭಾ ಪುರಸ್ಕಾರ್ ಎಂಬ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.

ಬಿಎಚ್‌ಯು ಆಡಳಿತವು ಮತ್ತೆ ಮತ್ತೆ ಸ್ಪಷ್ಟನೆ ನೀಡಿದ್ದು, ತಾನು ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದಿಲ್ಲ ಎಂದಿದೆಯಲ್ಲದೆ, ಈ ತನಕ ಫಿರೋಜ್ ಅವರ ಬೆಂಬಲಕ್ಕೆ ನಿಂತಿದೆ. ಅದಲ್ಲದೇ ಹಿಂದೂ, ಮುಸ್ಲಿಮರೆನ್ನದೇ ಬಹುತೇಕ ವಿದ್ಯಾರ್ಥಿಗಳೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಬೇರೆ ಧರ್ಮದವರಿಂದ ಪಾಠ ಕಲಿಯುವುದಿಲ್ಲ ಎಂಬ ಸಂಕುಚಿತ ನಿಲುವಿಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಅವರು, ಪ್ರತಿಭಟನೆ ನಡೆಸುತ್ತಿರುವವರು ಕೇವಲ ಎಬಿವಿಪಿ ಮತ್ತು ಆರೆಸ್ಸೆಸ್‌ಗೆ ಸೇರಿದವರು ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...