Homeಮುಖಪುಟಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

- Advertisement -
- Advertisement -

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿರುವುದನ್ನು ಪ್ರತಿಭಟಿಸಿ ಬುಧವಾರ ಕರೆ ನೀಡಲಾಗಿದ್ದ ಬಂದ್ ವೇಳೆ ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಪರ್ಭಾನಿ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, 40 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಅಂಗಡಿಗಳ ಮೇಲೆ ಕಲ್ಲು ತೂರಿದರು. ಪೊಲೀಸರು ಅಶ್ರುವಾಯು ಸಿಡಿಸಿದರು. ಅಧಿಕಾರಿಗಳು ಭಾರತೀಯ ನಾಗ್ರಿಕ್ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದ್ದಾರೆ. ಕೆಲವು ಗಂಟೆಗಳಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತಂದರೂ ಮುನ್ನೆಚ್ಚರಿಕೆಯಾಗಿ ರಾಜ್ಯ ಮೀಸಲು ಪೊಲೀಸ್ ಪಡೆಯ ಎರಡು ತುಕಡಿಗಳನ್ನು ಕರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಪರ್ಭಾನಿ ತಹಸಿಲ್‌ನ ಮುರ್ತಿಜಾಪುರ ಗ್ರಾಮದ ನಿವಾಸಿ ಸೋಪಾನ್ ಪವಾರ್ ಅವರು ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಬೇಡ್ಕರ್ ಪ್ರತಿಮೆ ಬಳಿ ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದ್ದ ಸಂವಿಧಾನದ ಸಿಮೆಂಟ್ ಪ್ರತಿಕೃತಿಯನ್ನು ಧ್ವಂಸಗೊಳಿಸಿದ್ದರಿಂದ ಅಶಾಂತಿ ಪ್ರಾರಂಭವಾಯಿತು. ಸ್ಥಳೀಯ ಕಾರ್ಯಕರ್ತರು ಪವಾರ್ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಗಳವಾರ ಸಂಜೆ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು ಕೆಲವು ವಾಹನಗಳನ್ನು ಧ್ವಂಸಗೊಳಿಸಿದ್ದರಿಂದ ಘಟನೆಯು ಕೋಲಾಹಲಕ್ಕೆ ಕಾರಣವಾಯಿತು. ಬುಧವಾರ ಬಂದ್‌ಗೆ ಕರೆ ನೀಡಿದ್ದರು. ಬುಧವಾರ ಮಧ್ಯಾಹ್ನದವರೆಗೂ ಬಂದ್ ಬಹುತೇಕ ಶಾಂತಿಯುತವಾಗಿಯೇ ಇದ್ದಾಗ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಿಂಸಾಚಾರ ಭುಗಿಲೆದ್ದಿತು. ಗುಂಪು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿತು ಮತ್ತು ಅಂಗಡಿಗಳ ಹೊರಗೆ ವಾಹನಗಳು, ಪಿವಿಸಿ ಪೈಪ್‌ಗಳಿಗೆ ಬೆಂಕಿ ಹಚ್ಚಿತು. ಟ್ರಕ್‌ಗಳು, ನಾಲ್ಕು ಚಕ್ರಗಳು ಮತ್ತು ದ್ವಿಚಕ್ರ ವಾಹನಗಳು ಸೇರಿದಂತೆ 15 ಕ್ಕೂ ಹೆಚ್ಚು ವಾಹನಗಳಿಗೆ ಗುಂಪು ಹಾನಿಗೊಳಿಸಿತು.

ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಮೂಲಕ ಸಿಡಿಸಿದರೆ, ಜಿಲ್ಲಾಧಿಕಾರಿ ರಘುನಾಥ್ ಗಾವಡೆ ಅವರು ಸಾರ್ವಜನಿಕ ಸಭೆಗಳನ್ನು ನಿಷೇಧಿಸಲು ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ಅನ್ನು ವಿಧಿಸಿ, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದರು. ಶಾಂತಿ-ಪುನಃಸ್ಥಾಪನೆ ಕ್ರಮಗಳ ಬಗ್ಗೆ ಚರ್ಚಿಸಲು ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಭೆಯನ್ನು ಕರೆದರು. ಆದರೆ, 50ಕ್ಕೂ ಹೆಚ್ಚು ಮಹಿಳಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಧ್ವಂಸಗೊಳಿಸಿದರು.

ನಾಂದೇಡ್ ವಲಯದ ಉಪ ಮಹಾನಿರೀಕ್ಷಕರಾದ ಶಹಾಜಿ ಉಮಾಪ್ ಅವರು ಬುಧವಾರ ಪರ್ಭಾನಿಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸಂಜೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 40 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು.

ಆನಂದರಾಜ್ ಅಂಬೇಡ್ಕರ್ ನೇತೃತ್ವದ ರಿಪಬ್ಲಿಕನ್ ಸೇನೆಯ ಉಪಾಧ್ಯಕ್ಷ ವಿಜಯ್ ವಾಕೋಡೆ, ಆರೋಪಿ ಪವಾರ್ ಅವರನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸುವ ಮೂಲಕ ಪೊಲೀಸರು ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

“ಈ ವಿಷಯಗಳನ್ನು ಪರಿಶೀಲಿಸುವುದು ಮತ್ತು ಪ್ರಮಾಣೀಕರಿಸುವುದು ವೈದ್ಯರ ಕೆಲಸ. ಪೊಲೀಸರು ಯಾಕೆ ಈ ಸರ್ಟಿಫಿಕೇಟ್ ಕೊಡುತ್ತಿದ್ದಾರೆ? ಈ ವಿಷಯವನ್ನು ಮುಚ್ಚಿಹಾಕಲು ಜನರು ಈ ಕ್ರಮದಿಂದ ಕೋಪಗೊಂಡಿದ್ದರು. ಅವರಲ್ಲಿ ಕೆಲವರು ಈ ಅಶಾಂತಿಯನ್ನು ಹಿಂಸೆಯನ್ನು ಹರಡಲು ಬಳಸಿಕೊಂಡರು. ನಗರದಲ್ಲಿ ಶಾಂತಿ ನೆಲೆಸುವಂತೆ ನಾವು ಜನರಿಗೆ ಮನವಿ ಮಾಡಿದ್ದೇವೆ” ಎಂದು ವಾಕೋಡೆ ಹೇಳಿದರು.

“ನಮ್ಮ ಕಾರ್ಯಕರ್ತರು ಅವನನ್ನು ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರಿಂದ, ಅವರು ಮಾನಸಿಕವಾಗಿ ಅಸ್ಥಿರವಾಗಿಲ್ಲ ಎಂದು ನಾವು ಭಾವಿಸುತ್ತೇವೆ. ಅಶಾಂತಿ ಹರಡಲು ಯಾರೋ ಅವನನ್ನು ಕಳುಹಿಸಿದ್ದಾರೆ. ಪೊಲೀಸರು ನಾರ್ಕೋ ಅನಾಲಿಸಿಸ್ ಪರೀಕ್ಷೆ ಮೂಲಕ ಯಾರು ಎಂಬುದನ್ನು ಪತ್ತೆ ಮಾಡಬೇಕು. ನಾವು ಅವರನ್ನು ಸಿವಿಲ್ ಆಸ್ಪತ್ರೆಗೆ ಕಳುಹಿಸಿರುವುದರಿಂದ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿದರು” ಎಂದು ಅವರು ಹೇಳಿದರು.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಮುನ್ನೆಚ್ಚರಿಕೆಯಾಗಿ ರಾಜ್ಯ ಮೀಸಲು ಪೊಲೀಸ್ ಪಡೆಯ (ಎಸ್‌ಆರ್‌ಪಿಎಫ್) ಎರಡು ಹೆಚ್ಚುವರಿ ತುಕಡಿಗಳನ್ನು ಕರೆಸಲಾಗಿದೆ ಎಂದು ಪರ್ಭಾನಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ರಘುನಾಥ್ ಗಾವಡೆ ತಿಳಿಸಿದ್ದಾರೆ.

“ಪ್ರಾಥಮಿಕವಾಗಿ, ಆರೋಪಿಯು ಕುಡಿದು ಮಾನಸಿಕವಾಗಿ ಅಸ್ಥಿರನಾಗಿದ್ದನು. ಆದರೆ, ಸಿವಿಲ್ ಆಸ್ಪತ್ರೆಯಲ್ಲಿ ವೈದ್ಯರು ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ” ಎಂದು ಗಾವಡೆ ಹೇಳಿದರು.

ಇದನ್ನೂ ಓದಿ; ರಾಜಸ್ಥಾನ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದು 5 ವರ್ಷದ ಬಾಲಕ ಸಾವು, 56 ಗಂಟೆಗಳ ಕಾರ್ಯಾಚರಣೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...