Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...