Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...