Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...