Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...