Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...