Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...