Homeಚಳವಳಿಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು...

ಮ್ಯಾನ್ ಹೋಲ್ ನಲ್ಲಿ ಸತ್ತವರ ಪರವಾಗಿ ಟ್ವೀಟ್ ಮಾಡಿದ ಉದ್ಯಮಿ, ಯಂತ್ರಗಳಿಗಾಗಿ ಹಣ ಸಹಾಯ ಮಾಡಲು ಮುಂದೆ ಬಂದ ಆನಂದ್ ಮಹೀಂದ್ರ

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು. 

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುಜರಾತಿನ ವಡೋದರಾದ ಫಾರ್ತಿಕುಯಿ ಎಂಬ ಊರಿನ ಹೊಟೆಲ್ ಒಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಬ್ರಿಜೇಶ್ ಹರಿಜನ್ (23), ಮಹೇಶ್ ಹರಿಜನ್ (25), ವಿಜಯ್ ಚೌಧುರಿ (22), ಸಹದೇವ್ ವಾಸವಾ (22), ಅಜಯ್ ವಾಸವಾ (22), ಮಹೇಶ್ ಪಟಾನ್‍ವಾಡಿಯಾ (47), ಅಶೋಕ್ ಹರಿಜನ್ (45) ಎನ್ನುವ ನಾಲ್ಕು ಮಂದಿ ಪೌರಕಾರ್ಮಿಕರು ಮತ್ತು 3 ಜನ ಹೊಟೇಲ್ ಸಿಬ್ಬಂದಿ ಸೇರಿ ಒಟ್ಟು 7 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿರುವುದು ದುರಂತದ ಸಂಗತಿ.

ಈ ದುರಂತದ ನಂತರ ಘಟನೆಯನ್ನು ಖಂಡಿಸಿ, ಈ ರೀತಿಯ ಮ್ಯಾನುವಲ್ ಸ್ಕ್ಯಾವೆಜಿಂಗ್ ಬಿಟ್ಟು ಸಂಪೂರ್ಣ ಯಾಂತ್ರಿಕೃತ ವ್ಯವಸ್ಥೆ ಜಾರಿಗೆ ಬರಬೇಕೇಂದು ಹಲವರು ದನಿಯೆತ್ತಿದ್ದರೆ, ಆನಂದ್ ಮಹಿಂದ್ರ, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಆನಂದ್ ಮಹಿಂದ್ರ “ಮಾನವ ಜೀವನದ ಈ ಅಧಃಪತನ ಸಾಕು, ಯುವ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಸ್ಕ್ಯಾವೆಂಜಿಂಗ್ ಯಂತ್ರ-ಬ್ಯಾಂಡಿಕೂಟ್ ಬಗ್ಗೆ ನಾನು ಈ ಹಿಂದೆ ಬಹಳಷ್ಟು ಸಲ ಹೇಳಿದ್ದೇನೆ. ಅವುಗಳನ್ನು ವ್ಯಾಪಕ ಪ್ರಮಾಣದಲ್ಲಿ ತಯಾರಿಸುವುದಾದರೆ ಹಣದ ವಿಷಯದಲ್ಲಿ ನನ್ನನ್ನು ಪರಿಗಣಿಸಿ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಬಾಲಿವುಟ್  ನಟ ಅಮಿತಾಬ್ ಬಚ್ಚನ್ “ಆನಂದ್ .. ನಾನು ಬಿಎಂಸಿಗೆ 25 ಯಂತ್ರಗಳನ್ನು ಮತ್ತು ಅವರಿಗೆ ಒಂದು ಟ್ರಕ್ ಅನ್ನು ಉಡುಗೊರೆಯಾಗಿ ನೀಡಿದ್ದೇನೆ .. ಯಂತ್ರಗಳನ್ನು ವ್ಯಕ್ತಿಗಳಿಗೆ, ಟ್ರಕ್ ಅನ್ನು ಬಿಎಂಸಿಗೆ ನೀಡಲಾಯಿತು. ರಂಗಾಬಾದ್‌ನ ಒಂದು ಕಂಪನಿಯು ಅವುಗಳನ್ನು ಮಾಡುತ್ತದೆ.” ಎಂದು ರೀಟ್ವೀಟ್ ಮಾಡಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ಈ ರೀತಿಯ ಪೌರಕಾರ್ಮಿಕರ ಸಾವುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು 200 ಯಂತ್ರಗಳನ್ನು ಅಲ್ಲಿನ ಪೌರಕಾರ್ಮಿಕರಿಗೆ ಹಸ್ತಾಂತರಿಸಿದ್ದರು. ಈ ಮೊದಲು ಕೇರಳದಲ್ಲಿಯೂ ಸಹ ಅಲ್ಲಿನ ಸಿಪಿಎಂನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ಮ್ಯಾನ್ ಹೋಲ್ ಕ್ಲೀನ್ ಮಾಡಲು ರೋಬೋಟ್ ಒಂದನ್ನು ಅನ್ವೇಷಣೆ ಮಾಡಲು ಪ್ರೇರಣೆ ನೀಡಿ ಮಾಡಿಸಿದ್ದರು.

ಈ ರೀತಿ ಮ್ಯಾನ್ ಹೋಲ್ ನಲ್ಲಿ ಇಳಿದು ಸಾವನಪ್ಪುವ ಪೌರ ಕಾರ್ಮಿಕರ ಪರವಾಗಿ ದಶಕಗಳಿಂದ ಹೋರಾಡುತ್ತಾ ಬಂದಿರುವ ಬೆಜವಾಡ ವಿಲ್ಸನ್ ರವರು ದಶಕಗಳಿಂದಲೂ ಈ ರೀತಿಯ ಯಂತ್ರಗಳನ್ನು ತಯಾರಿಸಿ ನೀಡಬೇಕೆಂದು ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಹಲವು ಹೋರಾಟಗಳನ್ನು ಮಾಡಿಸಿದ್ದಾರೆ. ಆದರೆ ಆಳುವ ಸರ್ಕಾರಗಳು ತಮ್ಮ ಇದಕ್ಕೆ ಗಮನಹರಿಸಿಲ್ಲ.

ಕೇರಳದಲ್ಲಿನ ರೋಬೋಟ್

ಚುನಾವಣೆಗೆ ಮುನ್ನ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಐವರು ಪೌರಕಾರ್ಮಿಕರ ಪಾದ ತೊಳೆಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಅವರ ಬದುಕನ್ನು ಹಸನು ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಬೆಜವಾಡ ವಿಲ್ಸನ್ ರವರು ಕಿಡಿಕಾರಿದ್ದರು.

ಇದನ್ನೂ ಓದಿ: ಸ್ವಚ್ಛ ಭಾರತ – ಎಲ್ಲರೂ ಉತ್ತರದಾಯಿಗಳೇ

ಚಂದ್ರಯಾನ ಮಾಡಿದ್ದೇವೆ, ಬಾಹ್ಯಕಾಶದಲ್ಲಿ ನಿಲ್ದಾಣ ಸ್ಥಾಪಿಸುತ್ತೇವೆ ಎಂದೆಲ್ಲಾ ನಾವು ಹೆಮ್ಮೆಯಿಂದ ಕೊಚ್ಚಿಕೊಳ್ಳುವ ದೇಶದಲ್ಲಿ ಇಂದಿಗೂ ಒಂದೂವರೆ ಲಕ್ಷದಷ್ಟು ಜನ ಮಲ ಹೋರುವ ಅನಿಷ್ಟ ಕೆಲಸವನ್ನು ಮಾಡುತ್ತಿರುವುದು ನಮಗೆ ನಾಚಿಕೆಯೆನಿಸಬೇಕಲ್ಲವೇ? ಈ ಕುರಿತು ನಾವು ಮಾತಾಡಿದ್ದೇವೆಯೇ ಎಂದು ಬೆಜವಾಡರವರು ಪ್ರಶ್ನಿಸುತ್ತಾರೆ.

ಮ್ಯಾನ್ ಹೋಲ್ ಗೆ ಇಳಿಯಬಾರದು, ಆ ರೀತಿ ಕೆಲಸ ಮಾಡಿಸಬಾರದು ಎಂಬು ಕಾಯ್ದೆಯಿದ್ದರೂ ಯಾರು ಅದನ್ನು ಜಾರಿಗೊಳಿಸುತ್ತಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಆರೋಗ್ಯ ಕಾಪಾಡುತ್ತಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಸಮಾಜ ನಿರ್ಲಕ್ಷ್ಯ ವಹಿಸಿರುವುದು ದುರಂತವೇ ಸರಿ.

ಇದನ್ನೂ ಓದಿ: ಗಂಗೆ ತೊಳೆಯಬಲ್ಲಳೇ ಈ ಪಾಪವನ್ನು?

ಇಂತಹ ವಿಷಮ ಪರಿಸ್ಥಿತಿಯಲ್ಲಿಯೂ ಕೆಲ ರಾಜ್ಯಗಳು ಇದರ ಬಗ್ಗೆ ಎಚ್ಚೆತ್ತುಕೊಂಡು ಯಂತ್ರೋಪಕರಣಗಳನ್ನು ಬಳಸುತ್ತಿರುವುದು ಮಾದರಿ ನಡೆ. ಕೆಲ ಆನಂದ್ ಮಹಿಂದ್ರ ಮತ್ತು ಅಮಿತಾಬ್ ಬಚ್ಚನ್ ಸಹಾಯಹಸ್ತ ಚಾಚಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಕೈಗಳು ನೂರು, ಸಾವಿರವಾಗಲಿ. ನಮ್ಮ ತೆರಿಗೆ ಹಣದಿಂದ ನಡೆಯುವ ಸರ್ಕಾರ ಈ ಕುರಿತು ಬೇಗ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...