Homeಕರ್ನಾಟಕಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

- Advertisement -
- Advertisement -

ಘನತೆಯುತ ಬದುಕು, ಗೌರವ, ಕನಿಷ್ಠ ವೇತನ, ಮಕ್ಕಳ ಶಿಕ್ಷಣ, ತಮ್ಮ ಹಕ್ಕುಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಪೌರಕಾರ್ಮಿಕರು 15 ದಿನಗಳ ಪೌರಕಾರ್ಮಿಕರ ಜಾಥಾ ನಡೆಸುತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, AICCTU ಕರ್ನಾಟಕ ಮತ್ತು CPIML ಕರ್ನಾಟಕ ಸಂಘಟನೆಗಳು ಜಂಟಿಯಾಗಿ ಈ ಜಾಥಾಗೆ ಕರೆ ನೀಡಿದೆ. ಅಕ್ಟೋಬರ್‌ 9 ರಿಂದ ಕೆ.ಆರ್.ಪುರಂ ಮಾರುಕಟ್ಟೆಯಿಂದ ಆರಂಭವಾಗಿರುವ ಜಾಥಾ ಮುಂದಿನ 15 ದಿನಗಳು ನಡೆಯಲಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿ ದಿನ ನಡೆಯಲಿದೆ.

Image

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಜಾಥಾವು ಬೆಂಗಳೂರಿನಾದ್ಯಂತ ನಡೆಯಲಿದ್ದು ಪೌರಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಮತ್ತು ಅವರ ಮನೆಗಳಿಗೆ ತೆರಳುತ್ತದೆ. ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಲ್ಲಾರ ಗಮನಕ್ಕೆ ತರಲಾಗುತ್ತದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಮತ್ತು ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ತಕ್ಷಣ ಕ್ರಮಕೈಗೊಳ್ಳುವಂತೆ ಹಾಗೂ ಅವರ ಎಲ್ಲಾ ಹಕ್ಕುಗಳಿಗಾಗಿ ಒತ್ತಾಯಿಸಲಾಗುವುದು ಎಂದು AICCTU ಕರ್ನಾಟಕ ತಿಳಿಸಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ  ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾ “ಪೌರ ಕಾರ್ಮಿಕರಿಗೆ ಕಳೆದ ಆರು ವರ್ಷಗಳಿಂದ ವೇತನ ಹೆಚ್ಚು ಮಾಡಿಲ್ಲ. 35 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಕೇಳುತ್ತಿದ್ದೇವೆ ಅದಿನ್ನು ಆಗಿಲ್ಲ. ಪೌರಕಾರ್ಮಿರರಿಗೆ ಕೆಲಸ ಖಾಯಂ ಮಾಡಬೇಕು. ಅವರಿಗೆ ವಸತಿ ನೀಡಬೇಕು. ಅವರ ಮಕ್ಕಳಿಗೆ ಉಚಿತ ಉತ್ತಮ ಶಿಕ್ಷಣ ನೀಡಬೇಕು. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಉತ್ತಮ ಊಟ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಾದ್ಯಂತ ಜಾಥಾ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದುವರಿದು, “ಪೌರಕಾರ್ಮಿಕರಿಗೆ ಗೌರವ ನೀಡಬೇಕು. ನಗರ ಸ್ವಚ್ಛಗೊಳಿಸಿ, ಆರೋಗ್ಯ ಕಾಪಾಡುವ ಅವರಿಗೆ ಗೌರವ ಸಿಗುತ್ತಿಲ್ಲ. ಕೆಲಸ ಮಾಡುವ ಸ್ಥಳಗಳಲ್ಲಿ ಕುಡಿಯುವ ನೀರು ಕೇಳಿದರೆ ಶೌಚಾಲಯದ ಜಗ್ಗುಗಳಲ್ಲಿ ನೀರು ನೀಡಲಾಗುತ್ತದೆ. ಈ ವಲಯದಲ್ಲಿ ಹೆಚ್ಚಿನ ಜನ ಹೆಣ್ಣುಮಕ್ಕಳು, ದಲಿತರು ಇರುವ ಕಾರಣ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮೇಸ್ತ್ರಿಗಳು ಮಹಿಳೆಯರಿಗೆ ಮರ್ಯಾದೆ ನೀಡುತ್ತಿಲ್ಲ. ನಮಗೂ ಎಲಲ್ರಂತೆ ಬದುಕುವ ಹಕ್ಕಿಲ್ಲವೇ..?” ಎಂದು ಪ್ರಶ್ನಿಸಿದ್ದಾರೆ.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಒಂದೊಂದು ಏರಿಯಾಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಮಾಡುತ್ತಿದ್ದೇವೆ. ಕಾರ್ಮಿಕರು ಕೆಲಸ ಮಾಡುತ್ತಲೇ ಜಾಥಾದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿದಿನ 5 ರಿಂದ 6 ಜನ ರಜೆ ಹಾಕಿಕೊಂಡು ಜಾಥಾ ಮಾಡುತ್ತಾರೆ. ಸಮಸ್ಯೆಗಳು, ಹಕ್ಕುಗಳು, ಬೇಡಿಕೆಗಳ ಬಗ್ಗೆ ಕರ ಪತ್ರಗಳನ್ನು ಮಾಡಿ ಹಂಚಲಾಗುತ್ತಿದೆ. 15 ದಿನದ ಬಳಿಕ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

“ಮನೆಯ ಮಾಲೀಕರು ಮನೆ ಬಾಗಿಲಿಗೆ ನೀರು ಹಾಖುತ್ತಾರೋ ಇಲ್ಲವೋ, ಆದರೆ, ನಾವು ರಸ್ತೆಗಳನ್ನು ಗುಡಿಸುತ್ತೇವೆ. ಆದರೂ ನಮಗೆ ಸಮಾನತೆ, ಘನತೆ, ಸಮಯಕ್ಕೆ ಪಾವತಿ ಕೂಡ ಇಲ್ಲ. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಕುಳಿತು ಊಟ ಮಾಡಲು ಸರಿಯಾದ ಸ್ಥಳ ಕೂಡ ಇಲ್ಲ. ಇನ್ನು ಹೆಚ್ಚಿನ ಮಹಿಳೆಯರೇ ಇರುವ ನಮಗೆ, ನಮ್ಮದೆ ಆದ ಸಮಸ್ಯೆಗಳಿಗೆ ಆದರೆ, ಕೆಲಸದ ಸ್ಥಳಗಳಲ್ಲಿ ಶೌಚಾಲಯ ಇಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ನಾವು ಕೂಡ ಬಯಸುತ್ತೇವೆ. ನಮಗೂ ವಸತಿ ಸಮುಚ್ಛಯ ಬೇಕು. ಸಮಾನತೆಗಾಗಿ ನಾವು ಹೋರಾಡುತ್ತಲೇ ಇರುತ್ತೇವೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ರತ್ನಮ್ಮ ಹೇಳಿದ್ದಾರೆ.

Image

 


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...