Homeಕರ್ನಾಟಕಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

- Advertisement -
- Advertisement -

ಘನತೆಯುತ ಬದುಕು, ಗೌರವ, ಕನಿಷ್ಠ ವೇತನ, ಮಕ್ಕಳ ಶಿಕ್ಷಣ, ತಮ್ಮ ಹಕ್ಕುಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಪೌರಕಾರ್ಮಿಕರು 15 ದಿನಗಳ ಪೌರಕಾರ್ಮಿಕರ ಜಾಥಾ ನಡೆಸುತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, AICCTU ಕರ್ನಾಟಕ ಮತ್ತು CPIML ಕರ್ನಾಟಕ ಸಂಘಟನೆಗಳು ಜಂಟಿಯಾಗಿ ಈ ಜಾಥಾಗೆ ಕರೆ ನೀಡಿದೆ. ಅಕ್ಟೋಬರ್‌ 9 ರಿಂದ ಕೆ.ಆರ್.ಪುರಂ ಮಾರುಕಟ್ಟೆಯಿಂದ ಆರಂಭವಾಗಿರುವ ಜಾಥಾ ಮುಂದಿನ 15 ದಿನಗಳು ನಡೆಯಲಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿ ದಿನ ನಡೆಯಲಿದೆ.

Image

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಜಾಥಾವು ಬೆಂಗಳೂರಿನಾದ್ಯಂತ ನಡೆಯಲಿದ್ದು ಪೌರಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಮತ್ತು ಅವರ ಮನೆಗಳಿಗೆ ತೆರಳುತ್ತದೆ. ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಲ್ಲಾರ ಗಮನಕ್ಕೆ ತರಲಾಗುತ್ತದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಮತ್ತು ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ತಕ್ಷಣ ಕ್ರಮಕೈಗೊಳ್ಳುವಂತೆ ಹಾಗೂ ಅವರ ಎಲ್ಲಾ ಹಕ್ಕುಗಳಿಗಾಗಿ ಒತ್ತಾಯಿಸಲಾಗುವುದು ಎಂದು AICCTU ಕರ್ನಾಟಕ ತಿಳಿಸಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ  ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾ “ಪೌರ ಕಾರ್ಮಿಕರಿಗೆ ಕಳೆದ ಆರು ವರ್ಷಗಳಿಂದ ವೇತನ ಹೆಚ್ಚು ಮಾಡಿಲ್ಲ. 35 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಕೇಳುತ್ತಿದ್ದೇವೆ ಅದಿನ್ನು ಆಗಿಲ್ಲ. ಪೌರಕಾರ್ಮಿರರಿಗೆ ಕೆಲಸ ಖಾಯಂ ಮಾಡಬೇಕು. ಅವರಿಗೆ ವಸತಿ ನೀಡಬೇಕು. ಅವರ ಮಕ್ಕಳಿಗೆ ಉಚಿತ ಉತ್ತಮ ಶಿಕ್ಷಣ ನೀಡಬೇಕು. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಉತ್ತಮ ಊಟ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಾದ್ಯಂತ ಜಾಥಾ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದುವರಿದು, “ಪೌರಕಾರ್ಮಿಕರಿಗೆ ಗೌರವ ನೀಡಬೇಕು. ನಗರ ಸ್ವಚ್ಛಗೊಳಿಸಿ, ಆರೋಗ್ಯ ಕಾಪಾಡುವ ಅವರಿಗೆ ಗೌರವ ಸಿಗುತ್ತಿಲ್ಲ. ಕೆಲಸ ಮಾಡುವ ಸ್ಥಳಗಳಲ್ಲಿ ಕುಡಿಯುವ ನೀರು ಕೇಳಿದರೆ ಶೌಚಾಲಯದ ಜಗ್ಗುಗಳಲ್ಲಿ ನೀರು ನೀಡಲಾಗುತ್ತದೆ. ಈ ವಲಯದಲ್ಲಿ ಹೆಚ್ಚಿನ ಜನ ಹೆಣ್ಣುಮಕ್ಕಳು, ದಲಿತರು ಇರುವ ಕಾರಣ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮೇಸ್ತ್ರಿಗಳು ಮಹಿಳೆಯರಿಗೆ ಮರ್ಯಾದೆ ನೀಡುತ್ತಿಲ್ಲ. ನಮಗೂ ಎಲಲ್ರಂತೆ ಬದುಕುವ ಹಕ್ಕಿಲ್ಲವೇ..?” ಎಂದು ಪ್ರಶ್ನಿಸಿದ್ದಾರೆ.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಒಂದೊಂದು ಏರಿಯಾಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಮಾಡುತ್ತಿದ್ದೇವೆ. ಕಾರ್ಮಿಕರು ಕೆಲಸ ಮಾಡುತ್ತಲೇ ಜಾಥಾದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿದಿನ 5 ರಿಂದ 6 ಜನ ರಜೆ ಹಾಕಿಕೊಂಡು ಜಾಥಾ ಮಾಡುತ್ತಾರೆ. ಸಮಸ್ಯೆಗಳು, ಹಕ್ಕುಗಳು, ಬೇಡಿಕೆಗಳ ಬಗ್ಗೆ ಕರ ಪತ್ರಗಳನ್ನು ಮಾಡಿ ಹಂಚಲಾಗುತ್ತಿದೆ. 15 ದಿನದ ಬಳಿಕ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

“ಮನೆಯ ಮಾಲೀಕರು ಮನೆ ಬಾಗಿಲಿಗೆ ನೀರು ಹಾಖುತ್ತಾರೋ ಇಲ್ಲವೋ, ಆದರೆ, ನಾವು ರಸ್ತೆಗಳನ್ನು ಗುಡಿಸುತ್ತೇವೆ. ಆದರೂ ನಮಗೆ ಸಮಾನತೆ, ಘನತೆ, ಸಮಯಕ್ಕೆ ಪಾವತಿ ಕೂಡ ಇಲ್ಲ. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಕುಳಿತು ಊಟ ಮಾಡಲು ಸರಿಯಾದ ಸ್ಥಳ ಕೂಡ ಇಲ್ಲ. ಇನ್ನು ಹೆಚ್ಚಿನ ಮಹಿಳೆಯರೇ ಇರುವ ನಮಗೆ, ನಮ್ಮದೆ ಆದ ಸಮಸ್ಯೆಗಳಿಗೆ ಆದರೆ, ಕೆಲಸದ ಸ್ಥಳಗಳಲ್ಲಿ ಶೌಚಾಲಯ ಇಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ನಾವು ಕೂಡ ಬಯಸುತ್ತೇವೆ. ನಮಗೂ ವಸತಿ ಸಮುಚ್ಛಯ ಬೇಕು. ಸಮಾನತೆಗಾಗಿ ನಾವು ಹೋರಾಡುತ್ತಲೇ ಇರುತ್ತೇವೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ರತ್ನಮ್ಮ ಹೇಳಿದ್ದಾರೆ.

Image

 


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...