Homeಕರ್ನಾಟಕಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

- Advertisement -
- Advertisement -

ಘನತೆಯುತ ಬದುಕು, ಗೌರವ, ಕನಿಷ್ಠ ವೇತನ, ಮಕ್ಕಳ ಶಿಕ್ಷಣ, ತಮ್ಮ ಹಕ್ಕುಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಪೌರಕಾರ್ಮಿಕರು 15 ದಿನಗಳ ಪೌರಕಾರ್ಮಿಕರ ಜಾಥಾ ನಡೆಸುತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, AICCTU ಕರ್ನಾಟಕ ಮತ್ತು CPIML ಕರ್ನಾಟಕ ಸಂಘಟನೆಗಳು ಜಂಟಿಯಾಗಿ ಈ ಜಾಥಾಗೆ ಕರೆ ನೀಡಿದೆ. ಅಕ್ಟೋಬರ್‌ 9 ರಿಂದ ಕೆ.ಆರ್.ಪುರಂ ಮಾರುಕಟ್ಟೆಯಿಂದ ಆರಂಭವಾಗಿರುವ ಜಾಥಾ ಮುಂದಿನ 15 ದಿನಗಳು ನಡೆಯಲಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿ ದಿನ ನಡೆಯಲಿದೆ.

Image

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಜಾಥಾವು ಬೆಂಗಳೂರಿನಾದ್ಯಂತ ನಡೆಯಲಿದ್ದು ಪೌರಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಮತ್ತು ಅವರ ಮನೆಗಳಿಗೆ ತೆರಳುತ್ತದೆ. ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಲ್ಲಾರ ಗಮನಕ್ಕೆ ತರಲಾಗುತ್ತದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಮತ್ತು ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ತಕ್ಷಣ ಕ್ರಮಕೈಗೊಳ್ಳುವಂತೆ ಹಾಗೂ ಅವರ ಎಲ್ಲಾ ಹಕ್ಕುಗಳಿಗಾಗಿ ಒತ್ತಾಯಿಸಲಾಗುವುದು ಎಂದು AICCTU ಕರ್ನಾಟಕ ತಿಳಿಸಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ  ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾ “ಪೌರ ಕಾರ್ಮಿಕರಿಗೆ ಕಳೆದ ಆರು ವರ್ಷಗಳಿಂದ ವೇತನ ಹೆಚ್ಚು ಮಾಡಿಲ್ಲ. 35 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಕೇಳುತ್ತಿದ್ದೇವೆ ಅದಿನ್ನು ಆಗಿಲ್ಲ. ಪೌರಕಾರ್ಮಿರರಿಗೆ ಕೆಲಸ ಖಾಯಂ ಮಾಡಬೇಕು. ಅವರಿಗೆ ವಸತಿ ನೀಡಬೇಕು. ಅವರ ಮಕ್ಕಳಿಗೆ ಉಚಿತ ಉತ್ತಮ ಶಿಕ್ಷಣ ನೀಡಬೇಕು. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಉತ್ತಮ ಊಟ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಾದ್ಯಂತ ಜಾಥಾ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದುವರಿದು, “ಪೌರಕಾರ್ಮಿಕರಿಗೆ ಗೌರವ ನೀಡಬೇಕು. ನಗರ ಸ್ವಚ್ಛಗೊಳಿಸಿ, ಆರೋಗ್ಯ ಕಾಪಾಡುವ ಅವರಿಗೆ ಗೌರವ ಸಿಗುತ್ತಿಲ್ಲ. ಕೆಲಸ ಮಾಡುವ ಸ್ಥಳಗಳಲ್ಲಿ ಕುಡಿಯುವ ನೀರು ಕೇಳಿದರೆ ಶೌಚಾಲಯದ ಜಗ್ಗುಗಳಲ್ಲಿ ನೀರು ನೀಡಲಾಗುತ್ತದೆ. ಈ ವಲಯದಲ್ಲಿ ಹೆಚ್ಚಿನ ಜನ ಹೆಣ್ಣುಮಕ್ಕಳು, ದಲಿತರು ಇರುವ ಕಾರಣ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮೇಸ್ತ್ರಿಗಳು ಮಹಿಳೆಯರಿಗೆ ಮರ್ಯಾದೆ ನೀಡುತ್ತಿಲ್ಲ. ನಮಗೂ ಎಲಲ್ರಂತೆ ಬದುಕುವ ಹಕ್ಕಿಲ್ಲವೇ..?” ಎಂದು ಪ್ರಶ್ನಿಸಿದ್ದಾರೆ.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಒಂದೊಂದು ಏರಿಯಾಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಮಾಡುತ್ತಿದ್ದೇವೆ. ಕಾರ್ಮಿಕರು ಕೆಲಸ ಮಾಡುತ್ತಲೇ ಜಾಥಾದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿದಿನ 5 ರಿಂದ 6 ಜನ ರಜೆ ಹಾಕಿಕೊಂಡು ಜಾಥಾ ಮಾಡುತ್ತಾರೆ. ಸಮಸ್ಯೆಗಳು, ಹಕ್ಕುಗಳು, ಬೇಡಿಕೆಗಳ ಬಗ್ಗೆ ಕರ ಪತ್ರಗಳನ್ನು ಮಾಡಿ ಹಂಚಲಾಗುತ್ತಿದೆ. 15 ದಿನದ ಬಳಿಕ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

“ಮನೆಯ ಮಾಲೀಕರು ಮನೆ ಬಾಗಿಲಿಗೆ ನೀರು ಹಾಖುತ್ತಾರೋ ಇಲ್ಲವೋ, ಆದರೆ, ನಾವು ರಸ್ತೆಗಳನ್ನು ಗುಡಿಸುತ್ತೇವೆ. ಆದರೂ ನಮಗೆ ಸಮಾನತೆ, ಘನತೆ, ಸಮಯಕ್ಕೆ ಪಾವತಿ ಕೂಡ ಇಲ್ಲ. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಕುಳಿತು ಊಟ ಮಾಡಲು ಸರಿಯಾದ ಸ್ಥಳ ಕೂಡ ಇಲ್ಲ. ಇನ್ನು ಹೆಚ್ಚಿನ ಮಹಿಳೆಯರೇ ಇರುವ ನಮಗೆ, ನಮ್ಮದೆ ಆದ ಸಮಸ್ಯೆಗಳಿಗೆ ಆದರೆ, ಕೆಲಸದ ಸ್ಥಳಗಳಲ್ಲಿ ಶೌಚಾಲಯ ಇಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ನಾವು ಕೂಡ ಬಯಸುತ್ತೇವೆ. ನಮಗೂ ವಸತಿ ಸಮುಚ್ಛಯ ಬೇಕು. ಸಮಾನತೆಗಾಗಿ ನಾವು ಹೋರಾಡುತ್ತಲೇ ಇರುತ್ತೇವೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ರತ್ನಮ್ಮ ಹೇಳಿದ್ದಾರೆ.

Image

 


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...