Homeಕರ್ನಾಟಕಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

- Advertisement -
- Advertisement -

ಘನತೆಯುತ ಬದುಕು, ಗೌರವ, ಕನಿಷ್ಠ ವೇತನ, ಮಕ್ಕಳ ಶಿಕ್ಷಣ, ತಮ್ಮ ಹಕ್ಕುಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಪೌರಕಾರ್ಮಿಕರು 15 ದಿನಗಳ ಪೌರಕಾರ್ಮಿಕರ ಜಾಥಾ ನಡೆಸುತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, AICCTU ಕರ್ನಾಟಕ ಮತ್ತು CPIML ಕರ್ನಾಟಕ ಸಂಘಟನೆಗಳು ಜಂಟಿಯಾಗಿ ಈ ಜಾಥಾಗೆ ಕರೆ ನೀಡಿದೆ. ಅಕ್ಟೋಬರ್‌ 9 ರಿಂದ ಕೆ.ಆರ್.ಪುರಂ ಮಾರುಕಟ್ಟೆಯಿಂದ ಆರಂಭವಾಗಿರುವ ಜಾಥಾ ಮುಂದಿನ 15 ದಿನಗಳು ನಡೆಯಲಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿ ದಿನ ನಡೆಯಲಿದೆ.

Image

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಜಾಥಾವು ಬೆಂಗಳೂರಿನಾದ್ಯಂತ ನಡೆಯಲಿದ್ದು ಪೌರಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಮತ್ತು ಅವರ ಮನೆಗಳಿಗೆ ತೆರಳುತ್ತದೆ. ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಲ್ಲಾರ ಗಮನಕ್ಕೆ ತರಲಾಗುತ್ತದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಮತ್ತು ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ತಕ್ಷಣ ಕ್ರಮಕೈಗೊಳ್ಳುವಂತೆ ಹಾಗೂ ಅವರ ಎಲ್ಲಾ ಹಕ್ಕುಗಳಿಗಾಗಿ ಒತ್ತಾಯಿಸಲಾಗುವುದು ಎಂದು AICCTU ಕರ್ನಾಟಕ ತಿಳಿಸಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ  ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾ “ಪೌರ ಕಾರ್ಮಿಕರಿಗೆ ಕಳೆದ ಆರು ವರ್ಷಗಳಿಂದ ವೇತನ ಹೆಚ್ಚು ಮಾಡಿಲ್ಲ. 35 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಕೇಳುತ್ತಿದ್ದೇವೆ ಅದಿನ್ನು ಆಗಿಲ್ಲ. ಪೌರಕಾರ್ಮಿರರಿಗೆ ಕೆಲಸ ಖಾಯಂ ಮಾಡಬೇಕು. ಅವರಿಗೆ ವಸತಿ ನೀಡಬೇಕು. ಅವರ ಮಕ್ಕಳಿಗೆ ಉಚಿತ ಉತ್ತಮ ಶಿಕ್ಷಣ ನೀಡಬೇಕು. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಉತ್ತಮ ಊಟ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಾದ್ಯಂತ ಜಾಥಾ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದುವರಿದು, “ಪೌರಕಾರ್ಮಿಕರಿಗೆ ಗೌರವ ನೀಡಬೇಕು. ನಗರ ಸ್ವಚ್ಛಗೊಳಿಸಿ, ಆರೋಗ್ಯ ಕಾಪಾಡುವ ಅವರಿಗೆ ಗೌರವ ಸಿಗುತ್ತಿಲ್ಲ. ಕೆಲಸ ಮಾಡುವ ಸ್ಥಳಗಳಲ್ಲಿ ಕುಡಿಯುವ ನೀರು ಕೇಳಿದರೆ ಶೌಚಾಲಯದ ಜಗ್ಗುಗಳಲ್ಲಿ ನೀರು ನೀಡಲಾಗುತ್ತದೆ. ಈ ವಲಯದಲ್ಲಿ ಹೆಚ್ಚಿನ ಜನ ಹೆಣ್ಣುಮಕ್ಕಳು, ದಲಿತರು ಇರುವ ಕಾರಣ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮೇಸ್ತ್ರಿಗಳು ಮಹಿಳೆಯರಿಗೆ ಮರ್ಯಾದೆ ನೀಡುತ್ತಿಲ್ಲ. ನಮಗೂ ಎಲಲ್ರಂತೆ ಬದುಕುವ ಹಕ್ಕಿಲ್ಲವೇ..?” ಎಂದು ಪ್ರಶ್ನಿಸಿದ್ದಾರೆ.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಒಂದೊಂದು ಏರಿಯಾಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಮಾಡುತ್ತಿದ್ದೇವೆ. ಕಾರ್ಮಿಕರು ಕೆಲಸ ಮಾಡುತ್ತಲೇ ಜಾಥಾದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿದಿನ 5 ರಿಂದ 6 ಜನ ರಜೆ ಹಾಕಿಕೊಂಡು ಜಾಥಾ ಮಾಡುತ್ತಾರೆ. ಸಮಸ್ಯೆಗಳು, ಹಕ್ಕುಗಳು, ಬೇಡಿಕೆಗಳ ಬಗ್ಗೆ ಕರ ಪತ್ರಗಳನ್ನು ಮಾಡಿ ಹಂಚಲಾಗುತ್ತಿದೆ. 15 ದಿನದ ಬಳಿಕ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

“ಮನೆಯ ಮಾಲೀಕರು ಮನೆ ಬಾಗಿಲಿಗೆ ನೀರು ಹಾಖುತ್ತಾರೋ ಇಲ್ಲವೋ, ಆದರೆ, ನಾವು ರಸ್ತೆಗಳನ್ನು ಗುಡಿಸುತ್ತೇವೆ. ಆದರೂ ನಮಗೆ ಸಮಾನತೆ, ಘನತೆ, ಸಮಯಕ್ಕೆ ಪಾವತಿ ಕೂಡ ಇಲ್ಲ. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಕುಳಿತು ಊಟ ಮಾಡಲು ಸರಿಯಾದ ಸ್ಥಳ ಕೂಡ ಇಲ್ಲ. ಇನ್ನು ಹೆಚ್ಚಿನ ಮಹಿಳೆಯರೇ ಇರುವ ನಮಗೆ, ನಮ್ಮದೆ ಆದ ಸಮಸ್ಯೆಗಳಿಗೆ ಆದರೆ, ಕೆಲಸದ ಸ್ಥಳಗಳಲ್ಲಿ ಶೌಚಾಲಯ ಇಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ನಾವು ಕೂಡ ಬಯಸುತ್ತೇವೆ. ನಮಗೂ ವಸತಿ ಸಮುಚ್ಛಯ ಬೇಕು. ಸಮಾನತೆಗಾಗಿ ನಾವು ಹೋರಾಡುತ್ತಲೇ ಇರುತ್ತೇವೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ರತ್ನಮ್ಮ ಹೇಳಿದ್ದಾರೆ.

Image

 


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....