Homeಕರ್ನಾಟಕಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

- Advertisement -
- Advertisement -

ಘನತೆಯುತ ಬದುಕು, ಗೌರವ, ಕನಿಷ್ಠ ವೇತನ, ಮಕ್ಕಳ ಶಿಕ್ಷಣ, ತಮ್ಮ ಹಕ್ಕುಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಪೌರಕಾರ್ಮಿಕರು 15 ದಿನಗಳ ಪೌರಕಾರ್ಮಿಕರ ಜಾಥಾ ನಡೆಸುತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, AICCTU ಕರ್ನಾಟಕ ಮತ್ತು CPIML ಕರ್ನಾಟಕ ಸಂಘಟನೆಗಳು ಜಂಟಿಯಾಗಿ ಈ ಜಾಥಾಗೆ ಕರೆ ನೀಡಿದೆ. ಅಕ್ಟೋಬರ್‌ 9 ರಿಂದ ಕೆ.ಆರ್.ಪುರಂ ಮಾರುಕಟ್ಟೆಯಿಂದ ಆರಂಭವಾಗಿರುವ ಜಾಥಾ ಮುಂದಿನ 15 ದಿನಗಳು ನಡೆಯಲಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿ ದಿನ ನಡೆಯಲಿದೆ.

Image

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಜಾಥಾವು ಬೆಂಗಳೂರಿನಾದ್ಯಂತ ನಡೆಯಲಿದ್ದು ಪೌರಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಮತ್ತು ಅವರ ಮನೆಗಳಿಗೆ ತೆರಳುತ್ತದೆ. ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಲ್ಲಾರ ಗಮನಕ್ಕೆ ತರಲಾಗುತ್ತದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಮತ್ತು ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ತಕ್ಷಣ ಕ್ರಮಕೈಗೊಳ್ಳುವಂತೆ ಹಾಗೂ ಅವರ ಎಲ್ಲಾ ಹಕ್ಕುಗಳಿಗಾಗಿ ಒತ್ತಾಯಿಸಲಾಗುವುದು ಎಂದು AICCTU ಕರ್ನಾಟಕ ತಿಳಿಸಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ  ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾ “ಪೌರ ಕಾರ್ಮಿಕರಿಗೆ ಕಳೆದ ಆರು ವರ್ಷಗಳಿಂದ ವೇತನ ಹೆಚ್ಚು ಮಾಡಿಲ್ಲ. 35 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಕೇಳುತ್ತಿದ್ದೇವೆ ಅದಿನ್ನು ಆಗಿಲ್ಲ. ಪೌರಕಾರ್ಮಿರರಿಗೆ ಕೆಲಸ ಖಾಯಂ ಮಾಡಬೇಕು. ಅವರಿಗೆ ವಸತಿ ನೀಡಬೇಕು. ಅವರ ಮಕ್ಕಳಿಗೆ ಉಚಿತ ಉತ್ತಮ ಶಿಕ್ಷಣ ನೀಡಬೇಕು. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಉತ್ತಮ ಊಟ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಾದ್ಯಂತ ಜಾಥಾ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದುವರಿದು, “ಪೌರಕಾರ್ಮಿಕರಿಗೆ ಗೌರವ ನೀಡಬೇಕು. ನಗರ ಸ್ವಚ್ಛಗೊಳಿಸಿ, ಆರೋಗ್ಯ ಕಾಪಾಡುವ ಅವರಿಗೆ ಗೌರವ ಸಿಗುತ್ತಿಲ್ಲ. ಕೆಲಸ ಮಾಡುವ ಸ್ಥಳಗಳಲ್ಲಿ ಕುಡಿಯುವ ನೀರು ಕೇಳಿದರೆ ಶೌಚಾಲಯದ ಜಗ್ಗುಗಳಲ್ಲಿ ನೀರು ನೀಡಲಾಗುತ್ತದೆ. ಈ ವಲಯದಲ್ಲಿ ಹೆಚ್ಚಿನ ಜನ ಹೆಣ್ಣುಮಕ್ಕಳು, ದಲಿತರು ಇರುವ ಕಾರಣ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮೇಸ್ತ್ರಿಗಳು ಮಹಿಳೆಯರಿಗೆ ಮರ್ಯಾದೆ ನೀಡುತ್ತಿಲ್ಲ. ನಮಗೂ ಎಲಲ್ರಂತೆ ಬದುಕುವ ಹಕ್ಕಿಲ್ಲವೇ..?” ಎಂದು ಪ್ರಶ್ನಿಸಿದ್ದಾರೆ.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಒಂದೊಂದು ಏರಿಯಾಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಮಾಡುತ್ತಿದ್ದೇವೆ. ಕಾರ್ಮಿಕರು ಕೆಲಸ ಮಾಡುತ್ತಲೇ ಜಾಥಾದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿದಿನ 5 ರಿಂದ 6 ಜನ ರಜೆ ಹಾಕಿಕೊಂಡು ಜಾಥಾ ಮಾಡುತ್ತಾರೆ. ಸಮಸ್ಯೆಗಳು, ಹಕ್ಕುಗಳು, ಬೇಡಿಕೆಗಳ ಬಗ್ಗೆ ಕರ ಪತ್ರಗಳನ್ನು ಮಾಡಿ ಹಂಚಲಾಗುತ್ತಿದೆ. 15 ದಿನದ ಬಳಿಕ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

“ಮನೆಯ ಮಾಲೀಕರು ಮನೆ ಬಾಗಿಲಿಗೆ ನೀರು ಹಾಖುತ್ತಾರೋ ಇಲ್ಲವೋ, ಆದರೆ, ನಾವು ರಸ್ತೆಗಳನ್ನು ಗುಡಿಸುತ್ತೇವೆ. ಆದರೂ ನಮಗೆ ಸಮಾನತೆ, ಘನತೆ, ಸಮಯಕ್ಕೆ ಪಾವತಿ ಕೂಡ ಇಲ್ಲ. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಕುಳಿತು ಊಟ ಮಾಡಲು ಸರಿಯಾದ ಸ್ಥಳ ಕೂಡ ಇಲ್ಲ. ಇನ್ನು ಹೆಚ್ಚಿನ ಮಹಿಳೆಯರೇ ಇರುವ ನಮಗೆ, ನಮ್ಮದೆ ಆದ ಸಮಸ್ಯೆಗಳಿಗೆ ಆದರೆ, ಕೆಲಸದ ಸ್ಥಳಗಳಲ್ಲಿ ಶೌಚಾಲಯ ಇಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ನಾವು ಕೂಡ ಬಯಸುತ್ತೇವೆ. ನಮಗೂ ವಸತಿ ಸಮುಚ್ಛಯ ಬೇಕು. ಸಮಾನತೆಗಾಗಿ ನಾವು ಹೋರಾಡುತ್ತಲೇ ಇರುತ್ತೇವೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ರತ್ನಮ್ಮ ಹೇಳಿದ್ದಾರೆ.

Image

 


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...