Homeಮುಖಪುಟಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

ಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಬೆಂಗಳೂರಿನಲ್ಲಿ 2016ರ ಮಾರ್ಚ್‌ನಲ್ಲಿ ವರದಿಯಾದ ಕಸ್ಟಡಿ ಸಾವಿನ ಪ್ರಕರಣದಲ್ಲಿ ಹೆಡ್ ಕಾನ್‌ಸ್ಟೆಬಲ್ ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ತಪ್ಪಿತಸ್ಥರೆಂದು 51ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ (ನವೆಂಬರ್ 25) ತೀರ್ಪು ನೀಡಿದೆ. ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹50,000 ದಂಡ ವಿಧಿಸಿದೆ. 2016ರ ಕಸ್ಟಡಿ ಸಾವು

ಜೆಬಿ ನಗರದಲ್ಲಿನ ಉದ್ಯಮಿಯೊಬ್ಬರ ಕಳ್ಳತನಕ್ಕೆ ಸಂಬಂಧಿಸಿ ಅವರ ಮನೆಗೆಲಸದ ವ್ಯಕ್ತಿಯನ್ನು ಆರೋಪಿ ಎಂದು ಶಂಕಿಸಲಾಗಿತ್ತು. ಶಿಕ್ಷೆಗೊಳಗಾದ ಪೊಲೀಸ್ ಸಿಬ್ಬಂದಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಏಜಾಜ್ ಖಾನ್, ಈ ಹಿಂದೆ ಜೆ.ಬಿ.ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಅವರು ಹಲಸೂರು ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ; ಮತ್ತು ಕಾನ್‌ಸ್ಟೆಬಲ್‌ಗಳಾದ ರಾಮಮೂರ್ತಿನಗರ ಠಾಣೆಯ ಕೇಶವ ಮೂರ್ತಿ, ಇಂದಿರಾನಗರ ಸಂಚಾರ ಠಾಣೆಯ ಮೋಹನ್ ರಾಮ್ ಮತ್ತು ಇಂದಿರಾನಗರ ಪೊಲೀಸ್ ಠಾಣೆಯ ಸಿದ್ದಪ್ಪ ಸೇರಿದ್ದಾರೆ. 2016ರ ಕಸ್ಟಡಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳ್ಳತನ ಪ್ರಕರಣದಲ್ಲಿ ಪೊಲೀಸರು 42 ವರ್ಷದ ಮಹೇಂದ್ರ ಸಿಂಗ್ ರಾಥೋಡ್ ಎಂಬ ಮನೆಕೆಲಸಗಾರರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಯಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹಲ್ಲೆಯ ಗಾಯದಿಂದ ಅವರು ನಂತರ ಸಾವನ್ನಪ್ಪಿದ್ದರು.

ಸಂತ್ರಸ್ತ ವ್ಯಕ್ತಿಯು ಮೂಲತಃ ಬಿಹಾರ ಮೂಲದವರಾಗಿದ್ದು, 12 ವರ್ಷಗಳಿಂದ ಎಚ್‌ಎಎಲ್ 2ನೇ ಹಂತದಲ್ಲಿರುವ ಉದ್ಯಮಿಯ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ₹3.5 ಲಕ್ಷ ದೋಚಿದ್ದಾರೆ ಎಂದು ಆರೋಪಿಸಲಾಗಿತ್ತು. ಸ್ಟೇಷನ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೇಂದ್ರ ಅವರು ಸ್ಟೇಷನ್‌ ಒಳಗೆ ನಡೆದುಕೊಂಡು ಹೋಗುತ್ತಿರುವುದು ದಾಖಲಾಗಿತ್ತು. ಆದರೆ ಸಂಜೆಯ ಹೊತ್ತಿಗೆ ಅವರು ಕುಸಿದುಬಿದ್ದಿದ್ದರು ಮತ್ತು ಹತ್ತಿರದ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿತ್ತು.

ಮೃತರ ಕುಟುಂಬಕ್ಕೆ ಪರಿಹಾರವಾಗಿ ₹ 2 ಲಕ್ಷ (ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಿರುವ ದಂಡ) ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ರಾಜ್ಯ ಸರ್ಕಾರದಿಂದ ಪರಿಹಾರವನ್ನು ನಿರ್ಧರಿಸಲು ಜಿಲ್ಲಾ ಕಾನೂನು ಘಟಕದ ಶಿಫಾರಸನ್ನೂ ಕೋರಿದೆ.

ಮಹೇಂದ್ರ ಅವರನ್ನು ಠಾಣೆಗೆ ಕರೆತಂದಾಗ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಕ್ರಿಕೆಟ್ ಪಂದ್ಯವೊಂದರ ಭದ್ರತಾ ಕರ್ತವ್ಯದ ಮೇಲೆ ಹೋಗಿದ್ದರು. ಈ ವೇಳೆ ಆರೋಪಿ ಮಹೇಂದ್ರ ಅವರ ವಿರುದ್ಧ ಲಾಠಿ ಮತ್ತು ರೋಲರ್‌ನಿಂದ ಹಲ್ಲೆ ನಡೆಸಲಾಗಿತ್ತು. ಇದು ಅವರ ಸಾವಿಗೆ ಕಾರಣ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಕೃಷ್ಣವೇಣಿ ಹೇಳಿದ್ದಾರೆ.

ಕಸ್ಟಡಿಯಲ್ ಸಾವು ಕರ್ತವ್ಯಲೋಪಕ್ಕಾಗಿ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಆರಂಭದಲ್ಲಿ, ಅಸ್ವಾಭಾವಿಕ ಸಾವು ಎಂದು ಪ್ರಕರಣವನ್ನು ದಾಖಲಿಸಲಾಯಿತಾದರೂ, ಸಿಐಡಿ ತನಿಖೆಯ ನಂತರ ಆರೋಪಿಗಳ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧದ ನರಹತ್ಯೆಯ ಆರೋಪಗಳನ್ನು ಹೊರಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...