Homeಮುಖಪುಟಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

ಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಬೆಂಗಳೂರಿನಲ್ಲಿ 2016ರ ಮಾರ್ಚ್‌ನಲ್ಲಿ ವರದಿಯಾದ ಕಸ್ಟಡಿ ಸಾವಿನ ಪ್ರಕರಣದಲ್ಲಿ ಹೆಡ್ ಕಾನ್‌ಸ್ಟೆಬಲ್ ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ತಪ್ಪಿತಸ್ಥರೆಂದು 51ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ (ನವೆಂಬರ್ 25) ತೀರ್ಪು ನೀಡಿದೆ. ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹50,000 ದಂಡ ವಿಧಿಸಿದೆ. 2016ರ ಕಸ್ಟಡಿ ಸಾವು

ಜೆಬಿ ನಗರದಲ್ಲಿನ ಉದ್ಯಮಿಯೊಬ್ಬರ ಕಳ್ಳತನಕ್ಕೆ ಸಂಬಂಧಿಸಿ ಅವರ ಮನೆಗೆಲಸದ ವ್ಯಕ್ತಿಯನ್ನು ಆರೋಪಿ ಎಂದು ಶಂಕಿಸಲಾಗಿತ್ತು. ಶಿಕ್ಷೆಗೊಳಗಾದ ಪೊಲೀಸ್ ಸಿಬ್ಬಂದಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಏಜಾಜ್ ಖಾನ್, ಈ ಹಿಂದೆ ಜೆ.ಬಿ.ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಅವರು ಹಲಸೂರು ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ; ಮತ್ತು ಕಾನ್‌ಸ್ಟೆಬಲ್‌ಗಳಾದ ರಾಮಮೂರ್ತಿನಗರ ಠಾಣೆಯ ಕೇಶವ ಮೂರ್ತಿ, ಇಂದಿರಾನಗರ ಸಂಚಾರ ಠಾಣೆಯ ಮೋಹನ್ ರಾಮ್ ಮತ್ತು ಇಂದಿರಾನಗರ ಪೊಲೀಸ್ ಠಾಣೆಯ ಸಿದ್ದಪ್ಪ ಸೇರಿದ್ದಾರೆ. 2016ರ ಕಸ್ಟಡಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳ್ಳತನ ಪ್ರಕರಣದಲ್ಲಿ ಪೊಲೀಸರು 42 ವರ್ಷದ ಮಹೇಂದ್ರ ಸಿಂಗ್ ರಾಥೋಡ್ ಎಂಬ ಮನೆಕೆಲಸಗಾರರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಯಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹಲ್ಲೆಯ ಗಾಯದಿಂದ ಅವರು ನಂತರ ಸಾವನ್ನಪ್ಪಿದ್ದರು.

ಸಂತ್ರಸ್ತ ವ್ಯಕ್ತಿಯು ಮೂಲತಃ ಬಿಹಾರ ಮೂಲದವರಾಗಿದ್ದು, 12 ವರ್ಷಗಳಿಂದ ಎಚ್‌ಎಎಲ್ 2ನೇ ಹಂತದಲ್ಲಿರುವ ಉದ್ಯಮಿಯ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ₹3.5 ಲಕ್ಷ ದೋಚಿದ್ದಾರೆ ಎಂದು ಆರೋಪಿಸಲಾಗಿತ್ತು. ಸ್ಟೇಷನ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೇಂದ್ರ ಅವರು ಸ್ಟೇಷನ್‌ ಒಳಗೆ ನಡೆದುಕೊಂಡು ಹೋಗುತ್ತಿರುವುದು ದಾಖಲಾಗಿತ್ತು. ಆದರೆ ಸಂಜೆಯ ಹೊತ್ತಿಗೆ ಅವರು ಕುಸಿದುಬಿದ್ದಿದ್ದರು ಮತ್ತು ಹತ್ತಿರದ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿತ್ತು.

ಮೃತರ ಕುಟುಂಬಕ್ಕೆ ಪರಿಹಾರವಾಗಿ ₹ 2 ಲಕ್ಷ (ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಿರುವ ದಂಡ) ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ರಾಜ್ಯ ಸರ್ಕಾರದಿಂದ ಪರಿಹಾರವನ್ನು ನಿರ್ಧರಿಸಲು ಜಿಲ್ಲಾ ಕಾನೂನು ಘಟಕದ ಶಿಫಾರಸನ್ನೂ ಕೋರಿದೆ.

ಮಹೇಂದ್ರ ಅವರನ್ನು ಠಾಣೆಗೆ ಕರೆತಂದಾಗ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಕ್ರಿಕೆಟ್ ಪಂದ್ಯವೊಂದರ ಭದ್ರತಾ ಕರ್ತವ್ಯದ ಮೇಲೆ ಹೋಗಿದ್ದರು. ಈ ವೇಳೆ ಆರೋಪಿ ಮಹೇಂದ್ರ ಅವರ ವಿರುದ್ಧ ಲಾಠಿ ಮತ್ತು ರೋಲರ್‌ನಿಂದ ಹಲ್ಲೆ ನಡೆಸಲಾಗಿತ್ತು. ಇದು ಅವರ ಸಾವಿಗೆ ಕಾರಣ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಕೃಷ್ಣವೇಣಿ ಹೇಳಿದ್ದಾರೆ.

ಕಸ್ಟಡಿಯಲ್ ಸಾವು ಕರ್ತವ್ಯಲೋಪಕ್ಕಾಗಿ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಆರಂಭದಲ್ಲಿ, ಅಸ್ವಾಭಾವಿಕ ಸಾವು ಎಂದು ಪ್ರಕರಣವನ್ನು ದಾಖಲಿಸಲಾಯಿತಾದರೂ, ಸಿಐಡಿ ತನಿಖೆಯ ನಂತರ ಆರೋಪಿಗಳ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧದ ನರಹತ್ಯೆಯ ಆರೋಪಗಳನ್ನು ಹೊರಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...