Homeಮುಖಪುಟಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

ಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಬೆಂಗಳೂರಿನಲ್ಲಿ 2016ರ ಮಾರ್ಚ್‌ನಲ್ಲಿ ವರದಿಯಾದ ಕಸ್ಟಡಿ ಸಾವಿನ ಪ್ರಕರಣದಲ್ಲಿ ಹೆಡ್ ಕಾನ್‌ಸ್ಟೆಬಲ್ ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ತಪ್ಪಿತಸ್ಥರೆಂದು 51ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ (ನವೆಂಬರ್ 25) ತೀರ್ಪು ನೀಡಿದೆ. ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹50,000 ದಂಡ ವಿಧಿಸಿದೆ. 2016ರ ಕಸ್ಟಡಿ ಸಾವು

ಜೆಬಿ ನಗರದಲ್ಲಿನ ಉದ್ಯಮಿಯೊಬ್ಬರ ಕಳ್ಳತನಕ್ಕೆ ಸಂಬಂಧಿಸಿ ಅವರ ಮನೆಗೆಲಸದ ವ್ಯಕ್ತಿಯನ್ನು ಆರೋಪಿ ಎಂದು ಶಂಕಿಸಲಾಗಿತ್ತು. ಶಿಕ್ಷೆಗೊಳಗಾದ ಪೊಲೀಸ್ ಸಿಬ್ಬಂದಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಏಜಾಜ್ ಖಾನ್, ಈ ಹಿಂದೆ ಜೆ.ಬಿ.ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಅವರು ಹಲಸೂರು ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ; ಮತ್ತು ಕಾನ್‌ಸ್ಟೆಬಲ್‌ಗಳಾದ ರಾಮಮೂರ್ತಿನಗರ ಠಾಣೆಯ ಕೇಶವ ಮೂರ್ತಿ, ಇಂದಿರಾನಗರ ಸಂಚಾರ ಠಾಣೆಯ ಮೋಹನ್ ರಾಮ್ ಮತ್ತು ಇಂದಿರಾನಗರ ಪೊಲೀಸ್ ಠಾಣೆಯ ಸಿದ್ದಪ್ಪ ಸೇರಿದ್ದಾರೆ. 2016ರ ಕಸ್ಟಡಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳ್ಳತನ ಪ್ರಕರಣದಲ್ಲಿ ಪೊಲೀಸರು 42 ವರ್ಷದ ಮಹೇಂದ್ರ ಸಿಂಗ್ ರಾಥೋಡ್ ಎಂಬ ಮನೆಕೆಲಸಗಾರರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಯಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹಲ್ಲೆಯ ಗಾಯದಿಂದ ಅವರು ನಂತರ ಸಾವನ್ನಪ್ಪಿದ್ದರು.

ಸಂತ್ರಸ್ತ ವ್ಯಕ್ತಿಯು ಮೂಲತಃ ಬಿಹಾರ ಮೂಲದವರಾಗಿದ್ದು, 12 ವರ್ಷಗಳಿಂದ ಎಚ್‌ಎಎಲ್ 2ನೇ ಹಂತದಲ್ಲಿರುವ ಉದ್ಯಮಿಯ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ₹3.5 ಲಕ್ಷ ದೋಚಿದ್ದಾರೆ ಎಂದು ಆರೋಪಿಸಲಾಗಿತ್ತು. ಸ್ಟೇಷನ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೇಂದ್ರ ಅವರು ಸ್ಟೇಷನ್‌ ಒಳಗೆ ನಡೆದುಕೊಂಡು ಹೋಗುತ್ತಿರುವುದು ದಾಖಲಾಗಿತ್ತು. ಆದರೆ ಸಂಜೆಯ ಹೊತ್ತಿಗೆ ಅವರು ಕುಸಿದುಬಿದ್ದಿದ್ದರು ಮತ್ತು ಹತ್ತಿರದ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿತ್ತು.

ಮೃತರ ಕುಟುಂಬಕ್ಕೆ ಪರಿಹಾರವಾಗಿ ₹ 2 ಲಕ್ಷ (ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಿರುವ ದಂಡ) ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ರಾಜ್ಯ ಸರ್ಕಾರದಿಂದ ಪರಿಹಾರವನ್ನು ನಿರ್ಧರಿಸಲು ಜಿಲ್ಲಾ ಕಾನೂನು ಘಟಕದ ಶಿಫಾರಸನ್ನೂ ಕೋರಿದೆ.

ಮಹೇಂದ್ರ ಅವರನ್ನು ಠಾಣೆಗೆ ಕರೆತಂದಾಗ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಕ್ರಿಕೆಟ್ ಪಂದ್ಯವೊಂದರ ಭದ್ರತಾ ಕರ್ತವ್ಯದ ಮೇಲೆ ಹೋಗಿದ್ದರು. ಈ ವೇಳೆ ಆರೋಪಿ ಮಹೇಂದ್ರ ಅವರ ವಿರುದ್ಧ ಲಾಠಿ ಮತ್ತು ರೋಲರ್‌ನಿಂದ ಹಲ್ಲೆ ನಡೆಸಲಾಗಿತ್ತು. ಇದು ಅವರ ಸಾವಿಗೆ ಕಾರಣ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಕೃಷ್ಣವೇಣಿ ಹೇಳಿದ್ದಾರೆ.

ಕಸ್ಟಡಿಯಲ್ ಸಾವು ಕರ್ತವ್ಯಲೋಪಕ್ಕಾಗಿ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಆರಂಭದಲ್ಲಿ, ಅಸ್ವಾಭಾವಿಕ ಸಾವು ಎಂದು ಪ್ರಕರಣವನ್ನು ದಾಖಲಿಸಲಾಯಿತಾದರೂ, ಸಿಐಡಿ ತನಿಖೆಯ ನಂತರ ಆರೋಪಿಗಳ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧದ ನರಹತ್ಯೆಯ ಆರೋಪಗಳನ್ನು ಹೊರಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...