Homeಮುಖಪುಟಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

ಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಬೆಂಗಳೂರಿನಲ್ಲಿ 2016ರ ಮಾರ್ಚ್‌ನಲ್ಲಿ ವರದಿಯಾದ ಕಸ್ಟಡಿ ಸಾವಿನ ಪ್ರಕರಣದಲ್ಲಿ ಹೆಡ್ ಕಾನ್‌ಸ್ಟೆಬಲ್ ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ತಪ್ಪಿತಸ್ಥರೆಂದು 51ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ (ನವೆಂಬರ್ 25) ತೀರ್ಪು ನೀಡಿದೆ. ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹50,000 ದಂಡ ವಿಧಿಸಿದೆ. 2016ರ ಕಸ್ಟಡಿ ಸಾವು

ಜೆಬಿ ನಗರದಲ್ಲಿನ ಉದ್ಯಮಿಯೊಬ್ಬರ ಕಳ್ಳತನಕ್ಕೆ ಸಂಬಂಧಿಸಿ ಅವರ ಮನೆಗೆಲಸದ ವ್ಯಕ್ತಿಯನ್ನು ಆರೋಪಿ ಎಂದು ಶಂಕಿಸಲಾಗಿತ್ತು. ಶಿಕ್ಷೆಗೊಳಗಾದ ಪೊಲೀಸ್ ಸಿಬ್ಬಂದಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಏಜಾಜ್ ಖಾನ್, ಈ ಹಿಂದೆ ಜೆ.ಬಿ.ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಅವರು ಹಲಸೂರು ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ; ಮತ್ತು ಕಾನ್‌ಸ್ಟೆಬಲ್‌ಗಳಾದ ರಾಮಮೂರ್ತಿನಗರ ಠಾಣೆಯ ಕೇಶವ ಮೂರ್ತಿ, ಇಂದಿರಾನಗರ ಸಂಚಾರ ಠಾಣೆಯ ಮೋಹನ್ ರಾಮ್ ಮತ್ತು ಇಂದಿರಾನಗರ ಪೊಲೀಸ್ ಠಾಣೆಯ ಸಿದ್ದಪ್ಪ ಸೇರಿದ್ದಾರೆ. 2016ರ ಕಸ್ಟಡಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳ್ಳತನ ಪ್ರಕರಣದಲ್ಲಿ ಪೊಲೀಸರು 42 ವರ್ಷದ ಮಹೇಂದ್ರ ಸಿಂಗ್ ರಾಥೋಡ್ ಎಂಬ ಮನೆಕೆಲಸಗಾರರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಯಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹಲ್ಲೆಯ ಗಾಯದಿಂದ ಅವರು ನಂತರ ಸಾವನ್ನಪ್ಪಿದ್ದರು.

ಸಂತ್ರಸ್ತ ವ್ಯಕ್ತಿಯು ಮೂಲತಃ ಬಿಹಾರ ಮೂಲದವರಾಗಿದ್ದು, 12 ವರ್ಷಗಳಿಂದ ಎಚ್‌ಎಎಲ್ 2ನೇ ಹಂತದಲ್ಲಿರುವ ಉದ್ಯಮಿಯ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ₹3.5 ಲಕ್ಷ ದೋಚಿದ್ದಾರೆ ಎಂದು ಆರೋಪಿಸಲಾಗಿತ್ತು. ಸ್ಟೇಷನ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೇಂದ್ರ ಅವರು ಸ್ಟೇಷನ್‌ ಒಳಗೆ ನಡೆದುಕೊಂಡು ಹೋಗುತ್ತಿರುವುದು ದಾಖಲಾಗಿತ್ತು. ಆದರೆ ಸಂಜೆಯ ಹೊತ್ತಿಗೆ ಅವರು ಕುಸಿದುಬಿದ್ದಿದ್ದರು ಮತ್ತು ಹತ್ತಿರದ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿತ್ತು.

ಮೃತರ ಕುಟುಂಬಕ್ಕೆ ಪರಿಹಾರವಾಗಿ ₹ 2 ಲಕ್ಷ (ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಿರುವ ದಂಡ) ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ರಾಜ್ಯ ಸರ್ಕಾರದಿಂದ ಪರಿಹಾರವನ್ನು ನಿರ್ಧರಿಸಲು ಜಿಲ್ಲಾ ಕಾನೂನು ಘಟಕದ ಶಿಫಾರಸನ್ನೂ ಕೋರಿದೆ.

ಮಹೇಂದ್ರ ಅವರನ್ನು ಠಾಣೆಗೆ ಕರೆತಂದಾಗ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಕ್ರಿಕೆಟ್ ಪಂದ್ಯವೊಂದರ ಭದ್ರತಾ ಕರ್ತವ್ಯದ ಮೇಲೆ ಹೋಗಿದ್ದರು. ಈ ವೇಳೆ ಆರೋಪಿ ಮಹೇಂದ್ರ ಅವರ ವಿರುದ್ಧ ಲಾಠಿ ಮತ್ತು ರೋಲರ್‌ನಿಂದ ಹಲ್ಲೆ ನಡೆಸಲಾಗಿತ್ತು. ಇದು ಅವರ ಸಾವಿಗೆ ಕಾರಣ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಕೃಷ್ಣವೇಣಿ ಹೇಳಿದ್ದಾರೆ.

ಕಸ್ಟಡಿಯಲ್ ಸಾವು ಕರ್ತವ್ಯಲೋಪಕ್ಕಾಗಿ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಆರಂಭದಲ್ಲಿ, ಅಸ್ವಾಭಾವಿಕ ಸಾವು ಎಂದು ಪ್ರಕರಣವನ್ನು ದಾಖಲಿಸಲಾಯಿತಾದರೂ, ಸಿಐಡಿ ತನಿಖೆಯ ನಂತರ ಆರೋಪಿಗಳ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧದ ನರಹತ್ಯೆಯ ಆರೋಪಗಳನ್ನು ಹೊರಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...