Homeಕರ್ನಾಟಕಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಪೋಷಕರು ಚಾಕಲೇಟ್ ಖರೀದಿಸಲು ನೀಡುವ ಹಣವನ್ನು ಮುಖ್ಯಮಂತ್ರಿಯವರಿಗೆ ನೀಡುವುದಾಗಿ ಬಾಲಕಿ ಹೇಳಿದ್ದಾರೆ.

- Advertisement -
- Advertisement -

ಬೆಂಗಳೂರು ನಗರದಲ್ಲಿ ವಿಪರಿತವಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಿಸಿ, ಜನರನ್ನು ಬದುಕಿಸುವಂತೆ ಏಳು ವರ್ಷದ ಪುಟ್ಟ ಬಾಲಕಿಯೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ಬೆಂಗಳೂರಿನ ಹೆಗ್ಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಧವನಿ ಈ ವಿಡಿಯೋ ಮಾಡಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ಕಟ್ಟಡ ಕಾರ್ಮಿಕರ ಮಗಳಾದ  ಧವನಿಯವರ ತಾಯಿ ಎರಡು ವರ್ಷಗಳ ಹಿಂದೆ ಇಂತಹದ್ದೆ ರಸ್ತೆ ಗುಂಡಿಗಳಿಂದಾಗಿಯೇ ಅಪಘಾತಕ್ಕಿಡಾಗಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ತಾತ’  ಎಂದು ಕರೆದಿರುವ ಧವನಿ, ಈ ರಸ್ತೆ ಗುಂಡಿಗಳನ್ನು ಮುಚ್ಚಲು ಮನೆಯಲ್ಲಿ ಚಾಕೊಲೇಟ್‌ಗೆ ನೀಡಲಾಗುವ ತಮ್ಮ ಪಾಕೆಟ್ ಮನಿಯನ್ನು ನೀಡುವುದಾಗಿ ತಿಳಿಸಿದ್ದಾರೆ. ಪಶ್ಚಿಮ ಬೆಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಅಪಘಾತದಿಂದ ಮನನೊಂದ ಪುಟಾಣಿ ಧವನಿ ಮನವಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ರಸ್ತೆ ಗುಂಡಿಗಳಿಂದ ಉಂಟಾಗುವ ಅಪಘಾತಗಳಿಂದ ತಮ್ಮ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾ, ತಾತಾ ದಯವಿಟ್ಟು ಈ ರಸ್ತೆ ಗುಂಡಿಗಳನ್ನು ಮುಚ್ಚಿಸಿ, ಅವರ ಜೀವವನ್ನು ಉಳಿಸಿ ಎಂದು ಕೈ ಮುಗಿದು ಬೇಡಿಕೊಂಡಿದ್ದಾರೆ.

ಎರಡು ವರ್ಷಗಳ ಹಿಂದೆ ಬಾಲಕಿ ಧವನಿ ಅವರ ತಾಯಿ ರೇಖಾ ನವೀನ್ ಇದೇ ರೀತಿಯ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದಾರೆ. “ಧವನಿ ಆಗ ಚಿಕ್ಕ ಮಗುವಾಗಿದ್ದಳು. ಪರಿಸ್ಥಿತಿಯನ್ನು ಹೆಚ್ಚು ಅರ್ಥಮಾಡಿಕೊಳ್ಳಲಿಲ್ಲ. ಆಕೆ ಬೆಳೆದಂತೆ, ಆಕೆಯ ಅನೇಕ ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ಇಂತಹ ಅಪಘಾತಗಳಿಗೆ ಬಲಿಯಾಗುತ್ತಿರುವುದನ್ನು ಆಕೆ ನೋಡಿದ್ದಾಳೆ “ಎಂದು ರೇಖಾ ಹೇಳಿದ್ದಾರೆ.

ವಿಡಿಯೊ ಮಾಡಲು ತಾಯಿಯ ಸಹಾಯವನ್ನು ಧವನಿ ಪಡೆದಿದ್ದಾರೆ. ಇನ್ನು ರಸ್ತೆ ಗುಂಡಿಗಳ ರಿಪರಿಗೆ ಹಣ ನೀಡುವುದಾಗಿ ತಿಳಿಸಿರುವ ಬಾಲಕಿ, ಆಕೆಯ ಪೋಷಕರು ಚಾಕಲೇಟ್ ಖರೀದಿಸಲು ನೀಡುವ ಹಣವನ್ನು ಮುಖ್ಯಮಂತ್ರಿ ಬೊಮ್ಮಾಯಿಗೆ ನೀಡುವುದಾಗಿ ಹೇಳಿದ್ದಾರೆ.

ಕಳೆದ ವಾರ ನಗರದೆಲ್ಲಡೆ ರಸ್ತೆ ಗುಂಡಿಗಳು ವಿಪರೀತ ಹೆಚ್ಚಾಗಿ, ಜೀವ ತೆಗೆಯುವಷ್ಟು ಅಪಾಯಕಾರಿ ಮಟ್ಟ ತಲುಪಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು, ರಸ್ತೆಗಳಲ್ಲಿರುವ ಗುಂಡಿಗಳ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಎತ್ತಿ ಪೂಜೆ ಮಾಡಿ, ಅದರ ಸುತ್ತಮುತ್ತ ಸರ್ಕಾರದ ವಿರುದ್ಧ  ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...