Homeಕರ್ನಾಟಕಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಪೋಷಕರು ಚಾಕಲೇಟ್ ಖರೀದಿಸಲು ನೀಡುವ ಹಣವನ್ನು ಮುಖ್ಯಮಂತ್ರಿಯವರಿಗೆ ನೀಡುವುದಾಗಿ ಬಾಲಕಿ ಹೇಳಿದ್ದಾರೆ.

- Advertisement -
- Advertisement -

ಬೆಂಗಳೂರು ನಗರದಲ್ಲಿ ವಿಪರಿತವಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಿಸಿ, ಜನರನ್ನು ಬದುಕಿಸುವಂತೆ ಏಳು ವರ್ಷದ ಪುಟ್ಟ ಬಾಲಕಿಯೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ಬೆಂಗಳೂರಿನ ಹೆಗ್ಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಧವನಿ ಈ ವಿಡಿಯೋ ಮಾಡಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ಕಟ್ಟಡ ಕಾರ್ಮಿಕರ ಮಗಳಾದ  ಧವನಿಯವರ ತಾಯಿ ಎರಡು ವರ್ಷಗಳ ಹಿಂದೆ ಇಂತಹದ್ದೆ ರಸ್ತೆ ಗುಂಡಿಗಳಿಂದಾಗಿಯೇ ಅಪಘಾತಕ್ಕಿಡಾಗಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ‘ತಾತ’  ಎಂದು ಕರೆದಿರುವ ಧವನಿ, ಈ ರಸ್ತೆ ಗುಂಡಿಗಳನ್ನು ಮುಚ್ಚಲು ಮನೆಯಲ್ಲಿ ಚಾಕೊಲೇಟ್‌ಗೆ ನೀಡಲಾಗುವ ತಮ್ಮ ಪಾಕೆಟ್ ಮನಿಯನ್ನು ನೀಡುವುದಾಗಿ ತಿಳಿಸಿದ್ದಾರೆ. ಪಶ್ಚಿಮ ಬೆಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಅಪಘಾತದಿಂದ ಮನನೊಂದ ಪುಟಾಣಿ ಧವನಿ ಮನವಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ರಸ್ತೆ ಗುಂಡಿಗಳಿಂದ ಉಂಟಾಗುವ ಅಪಘಾತಗಳಿಂದ ತಮ್ಮ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾ, ತಾತಾ ದಯವಿಟ್ಟು ಈ ರಸ್ತೆ ಗುಂಡಿಗಳನ್ನು ಮುಚ್ಚಿಸಿ, ಅವರ ಜೀವವನ್ನು ಉಳಿಸಿ ಎಂದು ಕೈ ಮುಗಿದು ಬೇಡಿಕೊಂಡಿದ್ದಾರೆ.

ಎರಡು ವರ್ಷಗಳ ಹಿಂದೆ ಬಾಲಕಿ ಧವನಿ ಅವರ ತಾಯಿ ರೇಖಾ ನವೀನ್ ಇದೇ ರೀತಿಯ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದಾರೆ. “ಧವನಿ ಆಗ ಚಿಕ್ಕ ಮಗುವಾಗಿದ್ದಳು. ಪರಿಸ್ಥಿತಿಯನ್ನು ಹೆಚ್ಚು ಅರ್ಥಮಾಡಿಕೊಳ್ಳಲಿಲ್ಲ. ಆಕೆ ಬೆಳೆದಂತೆ, ಆಕೆಯ ಅನೇಕ ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ಇಂತಹ ಅಪಘಾತಗಳಿಗೆ ಬಲಿಯಾಗುತ್ತಿರುವುದನ್ನು ಆಕೆ ನೋಡಿದ್ದಾಳೆ “ಎಂದು ರೇಖಾ ಹೇಳಿದ್ದಾರೆ.

ವಿಡಿಯೊ ಮಾಡಲು ತಾಯಿಯ ಸಹಾಯವನ್ನು ಧವನಿ ಪಡೆದಿದ್ದಾರೆ. ಇನ್ನು ರಸ್ತೆ ಗುಂಡಿಗಳ ರಿಪರಿಗೆ ಹಣ ನೀಡುವುದಾಗಿ ತಿಳಿಸಿರುವ ಬಾಲಕಿ, ಆಕೆಯ ಪೋಷಕರು ಚಾಕಲೇಟ್ ಖರೀದಿಸಲು ನೀಡುವ ಹಣವನ್ನು ಮುಖ್ಯಮಂತ್ರಿ ಬೊಮ್ಮಾಯಿಗೆ ನೀಡುವುದಾಗಿ ಹೇಳಿದ್ದಾರೆ.

ಕಳೆದ ವಾರ ನಗರದೆಲ್ಲಡೆ ರಸ್ತೆ ಗುಂಡಿಗಳು ವಿಪರೀತ ಹೆಚ್ಚಾಗಿ, ಜೀವ ತೆಗೆಯುವಷ್ಟು ಅಪಾಯಕಾರಿ ಮಟ್ಟ ತಲುಪಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು, ರಸ್ತೆಗಳಲ್ಲಿರುವ ಗುಂಡಿಗಳ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಎತ್ತಿ ಪೂಜೆ ಮಾಡಿ, ಅದರ ಸುತ್ತಮುತ್ತ ಸರ್ಕಾರದ ವಿರುದ್ಧ  ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...