Homeಕರೋನಾ ತಲ್ಲಣಬೆಂಗಳೂರು: ಕೊರೊನಾವನ್ನು ಗೆದ್ದ 0.98 ಕೆಜಿ ತೂಕದ ನವಜಾತ ಹೆಣ್ಣುಮಗು!

ಬೆಂಗಳೂರು: ಕೊರೊನಾವನ್ನು ಗೆದ್ದ 0.98 ಕೆಜಿ ತೂಕದ ನವಜಾತ ಹೆಣ್ಣುಮಗು!

ಮಗುವಿಗೆ ಕೊರೊನಾ ಸೋಂಕು ನಿವಾರಣೆಯಾದ ನಂತರ, ಕಡಿಮೆ ತೂಕದ ಜನನಕ್ಕೆ ಚಿಕಿತ್ಸೆ ನೀಡಲು ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು BMCRI ಪೀಡಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ಮಲ್ಲೇಶ್ ಹೇಳಿದರು.

- Advertisement -
- Advertisement -

ಕೊರೊನಾ ಸೋಂಕಿಗೆ ಒಳಗಾಗಿ, ಇತರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದ ಮತ್ತು ಅಕಾಲಿಕವಾಗಿ ಜನಿಸಿದ, ಕೇವಲ 980 ತೂಕದ ಹೆಣ್ಣುಮಗು, ಕೊರೊನಾ ಸೋಂಕನ್ನು ಗೆದ್ದು ಈಗ ಚೇತರಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈಗ ಮಗುವನ್ನು ಡಿಸ್ಚಾರ್ಜ್‌ ಮಾಡಲಾಗಿದೆ.

ಬೆಂಗಳೂರಿನ ಖಾಸಗೀ ನರ್ಸಿಂಗ್‌ ಹೋಂ ನಲ್ಲಿ ಹೆರಿಗಯಾದ ಹೆಣ್ಣುಮಗು ಕೇವಲ 980 ಗ್ರಾಂ ತೂಕವಿತ್ತು (ಸಾಮಾನ್ಯವಾಗಿ ಆರೋಗ್ಯಕರ ಮಗುವಿನ ತೂಕವು 2.8-2.9 ಕಿಲೋಗ್ರಾಂ ಇರಬೇಕು). ಅತ್ಯಂತ ಕಡಿಮೆ ತೂಕವಿದ್ದುದರಿಂದ ಆಗಸ್ಟ್ 13ರಂದು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಈ ಹೆಣ್ಣುಮಗು 5 ದಿನಗಳ ಕಾಲ, ಮಕ್ಕಳ ಪ್ರತ್ಯೇಕ ವಾರ್ಡ್‌ನಲ್ಲಿತ್ತು. ನಂತರ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಆ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಘಾತ ಆರೈಕೆ ಕೇಂದ್ರಕ್ಕೆ (TCC) ಸ್ಥಳಾಂತರಿಸಲಾಯಿತು. ಮಗುವಿಗೆ ತೀವ್ರವಾದ ಆರೋಗ್ಯ ಸಮಸ್ಯೆಗಳಿದ್ದುದರಿಂದ, ಆರೋಗ್ಯ ಚೇತರಿಕೆಯು ಸವಾಲಿನಿಂದ ಕೂಡಿತ್ತು, ಆದರೆ ಮಗುವಿಕೆ ಲಕ್ಷಣರಹಿತ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ ಮಗುವಿಗೆ ಕೊರೊನಾ ಮತ್ತು ನವಜಾಜ ಸೆಪ್ಸಿಸ್‌ಗೆ (ಸೋಂಕು) ಚಿಕಿತ್ಸೆ ನೀಡಲಾಯಿತು. ಮಗುವು TCCನಲ್ಲಿದ್ದಾಗ ಎಕ್ಸ್‌ಪ್ರೆಸ್ ಬ್ರೆಸ್ಟ್ ಫೀಡಿಂಗ್ ಮುಖಾಂತರ ಮಗುವಿಗೆ ಹಾಲುಣಿಸಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ಮಗುವಿಗೆ ಕೊರೊನಾ ಸೋಂಕು ನಿವಾರಣೆಯಾದ ನಂತರ, ಕಡಿಮೆ ತೂಕದ ಜನನಕ್ಕೆ ಚಿಕಿತ್ಸೆ ನೀಡಲು ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (BMCRI) ಪೀಡಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ಮಲ್ಲೇಶ್ ಹೇಳಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಸ್ತನ್ಯಪಾನ ಮತ್ತು ಭಾವನಾತ್ಮಕ ಬೆಂಬಲಕ್ಕಾಗಿ ತಾಯಿಯನ್ನು ಆಸ್ಪತ್ರೆಗೆ ಕರೆಸಲಾಯಿತು. ಮಗುವು, ಹೈಪೊಗ್ಲಿಸಿಮಿಯಾ (ಕಡಿಮೆ ರಕ್ತದ ಸಕ್ಕರೆ) ಮತ್ತು ಹೈಪೋಕಾಲ್ಕೆಮಿಯಾ (ಕಡಿಮೆ ಕ್ಯಾಲ್ಸಿಯಂ ಮಟ್ಟ)ದಿಂದ ಬಳಲುತ್ತಿತ್ತು. ಮಗುವು ಆರಂಭದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಹಾಗಾಗಿ, ಆಮ್ಲಜನಕದ ಸಹಾಯದಲ್ಲಿತ್ತು’ ಎಂದು BMCRI ಸಹಾಯಕ ಪ್ರಾಧ್ಯಾಪಕ ಡಾ.ರವಿಚಂದ್ರ ಹೇಳಿದರು.

ಹಾಗಾಗಿ ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲಾಯಿತು. ಡಿಸ್ಚಾರ್ಜ್ ಸಮಯದಲ್ಲಿ, ಮಗು 1.2 ಕೆಜಿ ತೂಕವಿತ್ತು ಎಂದು ವೈದ್ಯರು ಹೇಳಿದರು.


ಇದನ್ನೂ ಓದಿ: ಭಾರತದಲ್ಲಿ ಕೊರೊನಾ: ಸೋಂಕಿತರ ಚೇತರಿಕೆಯ ಪ್ರಮಾಣ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...