Homeಕರೋನಾ ತಲ್ಲಣಬೆಂಗಳೂರು: ಕೊರೊನಾವನ್ನು ಗೆದ್ದ 0.98 ಕೆಜಿ ತೂಕದ ನವಜಾತ ಹೆಣ್ಣುಮಗು!

ಬೆಂಗಳೂರು: ಕೊರೊನಾವನ್ನು ಗೆದ್ದ 0.98 ಕೆಜಿ ತೂಕದ ನವಜಾತ ಹೆಣ್ಣುಮಗು!

ಮಗುವಿಗೆ ಕೊರೊನಾ ಸೋಂಕು ನಿವಾರಣೆಯಾದ ನಂತರ, ಕಡಿಮೆ ತೂಕದ ಜನನಕ್ಕೆ ಚಿಕಿತ್ಸೆ ನೀಡಲು ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು BMCRI ಪೀಡಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ಮಲ್ಲೇಶ್ ಹೇಳಿದರು.

- Advertisement -
- Advertisement -

ಕೊರೊನಾ ಸೋಂಕಿಗೆ ಒಳಗಾಗಿ, ಇತರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದ ಮತ್ತು ಅಕಾಲಿಕವಾಗಿ ಜನಿಸಿದ, ಕೇವಲ 980 ತೂಕದ ಹೆಣ್ಣುಮಗು, ಕೊರೊನಾ ಸೋಂಕನ್ನು ಗೆದ್ದು ಈಗ ಚೇತರಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈಗ ಮಗುವನ್ನು ಡಿಸ್ಚಾರ್ಜ್‌ ಮಾಡಲಾಗಿದೆ.

ಬೆಂಗಳೂರಿನ ಖಾಸಗೀ ನರ್ಸಿಂಗ್‌ ಹೋಂ ನಲ್ಲಿ ಹೆರಿಗಯಾದ ಹೆಣ್ಣುಮಗು ಕೇವಲ 980 ಗ್ರಾಂ ತೂಕವಿತ್ತು (ಸಾಮಾನ್ಯವಾಗಿ ಆರೋಗ್ಯಕರ ಮಗುವಿನ ತೂಕವು 2.8-2.9 ಕಿಲೋಗ್ರಾಂ ಇರಬೇಕು). ಅತ್ಯಂತ ಕಡಿಮೆ ತೂಕವಿದ್ದುದರಿಂದ ಆಗಸ್ಟ್ 13ರಂದು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಈ ಹೆಣ್ಣುಮಗು 5 ದಿನಗಳ ಕಾಲ, ಮಕ್ಕಳ ಪ್ರತ್ಯೇಕ ವಾರ್ಡ್‌ನಲ್ಲಿತ್ತು. ನಂತರ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಆ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಘಾತ ಆರೈಕೆ ಕೇಂದ್ರಕ್ಕೆ (TCC) ಸ್ಥಳಾಂತರಿಸಲಾಯಿತು. ಮಗುವಿಗೆ ತೀವ್ರವಾದ ಆರೋಗ್ಯ ಸಮಸ್ಯೆಗಳಿದ್ದುದರಿಂದ, ಆರೋಗ್ಯ ಚೇತರಿಕೆಯು ಸವಾಲಿನಿಂದ ಕೂಡಿತ್ತು, ಆದರೆ ಮಗುವಿಕೆ ಲಕ್ಷಣರಹಿತ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ ಮಗುವಿಗೆ ಕೊರೊನಾ ಮತ್ತು ನವಜಾಜ ಸೆಪ್ಸಿಸ್‌ಗೆ (ಸೋಂಕು) ಚಿಕಿತ್ಸೆ ನೀಡಲಾಯಿತು. ಮಗುವು TCCನಲ್ಲಿದ್ದಾಗ ಎಕ್ಸ್‌ಪ್ರೆಸ್ ಬ್ರೆಸ್ಟ್ ಫೀಡಿಂಗ್ ಮುಖಾಂತರ ಮಗುವಿಗೆ ಹಾಲುಣಿಸಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ಮಗುವಿಗೆ ಕೊರೊನಾ ಸೋಂಕು ನಿವಾರಣೆಯಾದ ನಂತರ, ಕಡಿಮೆ ತೂಕದ ಜನನಕ್ಕೆ ಚಿಕಿತ್ಸೆ ನೀಡಲು ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (BMCRI) ಪೀಡಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ಮಲ್ಲೇಶ್ ಹೇಳಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಸ್ತನ್ಯಪಾನ ಮತ್ತು ಭಾವನಾತ್ಮಕ ಬೆಂಬಲಕ್ಕಾಗಿ ತಾಯಿಯನ್ನು ಆಸ್ಪತ್ರೆಗೆ ಕರೆಸಲಾಯಿತು. ಮಗುವು, ಹೈಪೊಗ್ಲಿಸಿಮಿಯಾ (ಕಡಿಮೆ ರಕ್ತದ ಸಕ್ಕರೆ) ಮತ್ತು ಹೈಪೋಕಾಲ್ಕೆಮಿಯಾ (ಕಡಿಮೆ ಕ್ಯಾಲ್ಸಿಯಂ ಮಟ್ಟ)ದಿಂದ ಬಳಲುತ್ತಿತ್ತು. ಮಗುವು ಆರಂಭದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಹಾಗಾಗಿ, ಆಮ್ಲಜನಕದ ಸಹಾಯದಲ್ಲಿತ್ತು’ ಎಂದು BMCRI ಸಹಾಯಕ ಪ್ರಾಧ್ಯಾಪಕ ಡಾ.ರವಿಚಂದ್ರ ಹೇಳಿದರು.

ಹಾಗಾಗಿ ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲಾಯಿತು. ಡಿಸ್ಚಾರ್ಜ್ ಸಮಯದಲ್ಲಿ, ಮಗು 1.2 ಕೆಜಿ ತೂಕವಿತ್ತು ಎಂದು ವೈದ್ಯರು ಹೇಳಿದರು.


ಇದನ್ನೂ ಓದಿ: ಭಾರತದಲ್ಲಿ ಕೊರೊನಾ: ಸೋಂಕಿತರ ಚೇತರಿಕೆಯ ಪ್ರಮಾಣ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...