Homeಕರ್ನಾಟಕನಾಳೆ ನಡೆಯಬೇಕಿದ್ದ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಇಂದು ಮುಂದೂಡಿಕೆ : ಕೃಷಿ ಸಚಿವರ ವಿರುದ್ಧ...

ನಾಳೆ ನಡೆಯಬೇಕಿದ್ದ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಇಂದು ಮುಂದೂಡಿಕೆ : ಕೃಷಿ ಸಚಿವರ ವಿರುದ್ಧ ಆಕ್ರೋಶ

- Advertisement -
- Advertisement -

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 50 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ನಾಳೆ (ಫೆ.16) ನಡೆಯಬೇಕಿದ್ದ ಪರೀಕ್ಷೆಯನ್ನು ಇಂದು (ಫೆ.15) ಮುಂದೂಡಿಕೆ ಮಾಡಲಾಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹಠಾತ್ ಪರೀಕ್ಷೆ ಮುಂದೂಡಲಾಗಿದೆ. ಇದರಿಂದ ಪರೀಕ್ಷೆಗಾಗಿ ದೂರದ ಊರುಗಳಿಂದ ಆಗಮಿಸಿದ್ದ ಅಭ್ಯರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ರಾಜ್ಯ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ರೈತ ಸಂಘಟನೆಗಳ ಒಕ್ಕೂಟ ಬೆಂಗಳೂರು ಆಕ್ರೋಶ ವ್ಯಕ್ತಪಡಿಸಿದೆ.

ಪರೀಕ್ಷೆಗೆ 950 ಪಿಹೆಚ್‌ಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ ಜಪಾನ್, ಜರ್ಮನಿ, ಚೀನಾ, ಕೊರಿಯಾ, ಯುರೋಪ್ ಮತ್ತು ದೇಶದ ಹಲವೆಡೆಯಿಂದ ಬಂದವರು ಇದ್ದಾರೆ. ಹಲವಾರು ಅಭ್ಯರ್ಥಿಗಳು ತಮ್ಮ ಪೋಷಕರೊಂದಿಗೆ ರೈಲು ಮತ್ತು ವಿಮಾನದ ಮೂಲಕ ಬೆಂಗಳೂರು ತಲುಪಿದ್ದಾರೆ. ಒಂದು ದಿನ ಮೊದಲು ಪರೀಕ್ಷೆ ಮುಂದೂಡುವ ಮೂಲಕ ಈ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದಿದೆ.

ಪರೀಕ್ಷೆ ಮುಂದೂಡಿರುವ ಅಧಿಸೂಚನೆ

ಸರ್ಕಾರದ ನೇಮಕಾತಿ ಮತ್ತು ಮೀಸಲಾತಿ ಆದೇಶಗಳ ಅನುಸಾರ ನ್ಯಾಯ ಸಮ್ಮತವಾಗಿ ನೇಮಕಾತಿಗಳನ್ನು ನಡೆಸಲು ತೀರ್ಮಾನಿಸಿದ್ದು, ಅದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ತನ್ನ ಸ್ವಪ್ರತಿಷ್ಠೆಗೆ ಮತ್ತು ವಿಶ್ರಾಂತ ಕುಲಪತಿ ರಾಜೇಂದ್ರ ಪ್ರಸಾದ್, ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಅರುಣಿಕುಮಾರ್ ಅವರ ಕುತಂತ್ರಗಳಿಗೆ ಕಿವಿಗೊಟ್ಟು ತಡೆಯಾಜ್ಞೆ ನೀಡಿರುವುದು ಸಂವಿಧಾನಬಾಹಿರ ಮತ್ತು ನಿರಂಕುಶವಾದ. ಈ ನಿರ್ಧಾರಗಳು ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಉದ್ಯೋಗವಕಾಶಗಳಲ್ಲಿ ತೀವ್ರ ಅನ್ಯಾಯ ಉಂಟು ಮಾಡಿವೆ ಎಂದು ಒಕ್ಕೂಟ ಆರೋಪಿಸಿದೆ.

ಈಗಾಗಲೇ ನಾಳೆ ನಡೆಯಬೇಕಿದ್ದ ಪರೀಕ್ಷೆಗೆ ದೇಶ-ವಿದೇಶಗಳಿಂದ ಆಗಮಿಸಿರುವ ಅಭ್ಯರ್ಥಿಗಳಿಗೆ ಒಂದೇ ವಾರದೊಳಗೆ ಪರೀಕ್ಷೆಯ ದಿನಾಂಕ ನಿಗದಿಪಡಿಸಿ ಪರೀಕ್ಷೆಯನ್ನು ನಡೆಸಬೇಕು. ಇಲ್ಲವಾದಲ್ಲಿ, ರಾಜ್ಯದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ರೈತ ಸಂಘಟನೆಗಳ ಒಕ್ಕೂಟದಿಂದ ಸರ್ಕಾರದ ವಿರುದ್ಧ ಹಾಗೂ ಸೂತ್ರದಾರರಾದ ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹೋರಾಟ ನಡೆಸಲಾಗುವುದು ಮತ್ತು ಅವರ ರಾಜೀನಾಮೆಗೆ ಆಗ್ರಹಿಸಲಾಗುವುದು ಎಂದು ಒಕ್ಕೂಟ ಎಚ್ಚರಿಸಿದೆ.

ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...