Homeಕರ್ನಾಟಕಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

ಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

- Advertisement -
- Advertisement -

ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ರಾಜ್ಯ ಸಮಿತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿವೈಓ ರಾಜ್ಯಾಧ್ಯಕ್ಷ ಕಾ. ಶರಣಪ್ಪ ಉದ್ಬಾಳ್. “ಕೋವಿಡ್ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭದಾಹಕ್ಕಾಗಿ ಖಾಸಗಿ ಟಿಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ದರ ಹಾಗೂ ಡಾಟಾ ಪ್ಲಾನ್ ದರಗಳನ್ನು ಒಂದು ವರ್ಷದಲ್ಲಿ ಪ್ರತಿಶತ 100ರಷ್ಟು ಹೆಚ್ಚಿಸಿವೆ. ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ.  ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ತಮ್ಮ ಜೀವನ ಮತ್ತು ಜೀವನೋಪಾಯಕ್ಕಾಗಿ ಮೊಬೈಲ್ ಬಳಕೆಯನ್ನು ಅಗಾಧವಾಗಿ ಅವಲಂಬಿಸಿದ್ದಾರೆ. ಆನ್‌ಲೈನ್ ತರಗತಿಗಳು, ಆನ್‌ಲೈನ್ ಅಪ್ಲಿಕೇಶನ್‌ಗಳು, ಆನ್‌ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ” ಎಂದಿದ್ದಾರೆ.

“ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಪರಿಸ್ಥಿತಿಯಲ್ಲಿ, ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾದಂತಹ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ 20 ರಿಂದ 25% ವರೆಗೆ ಹೆಚ್ಚಿಸಿವೆ. ಇದು ಸಂಪೂರ್ಣವಾಗಿ ಜನವಿರೋಧಿಯಾಗಿದೆ.  ಈ ಸಂದರ್ಭದಲ್ಲಿ ಸೇವಾ ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ಆಘಾತವಾಗಿದೆ. ಈ ಕೂಡಲೇ ಟ್ರಾಯ್ ಮಧ್ಯ ಪ್ರವೇಶಿಸಿ ಖಾಸಗಿ ಟೆಲಿಕಾಂ ಕಂಪನಿಗಳ ಈ ಹಗಲು ದರೋಡೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.  

ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ಎಐಡಿವೈಓ ರಾಜ್ಯ ಉಪಾಧ್ಯಕ್ಷ ಕಾ. ವಿನಯ್ ಸಾರಥಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, “ಸಾರ್ವಜನಿಕ ಉದ್ಯಮವಾಗಿದ್ದ ಬಿಎಸ್ಎನ್ಎಲ್ ದುರ್ಬಲಗೊಂಡ ನಂತರ, ಖಾಸಗಿ ಮೊಬೈಲ್ ಆಪರೇಟರ್ ಕಂಪನಿಗಳು ದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಮಾರುಕಟ್ಟೆಯ ಗಣನೀಯ ಭಾಗದ ಮೇಲೆ ತಮ್ಮ ಬಿಗಿಹಿಡಿತ ಸಾಧಿಸಿವೆ. ಆದ್ದರಿಂದ  ಈ ಖಾಸಗಿ ಮೊಬೈಲ್ ಕಂಪನಿಗಳು ಭಾರೀ ಲಾಭ ಗಳಿಸಲು ತಮ್ಮ ಮೂಗಿನ ನೇರಕ್ಕೆ ದರಗಳನ್ನು ನಿಗದಿಮಾಡಿ, ಮೊಬೈಲ್ ಬಳಕೆದಾರರು ಅನಿವಾರ್ಯವಾಗಿ ಅಧಿಕ ಹಣ ಪಾವತಿಸುವಂತೆ ಮಾಡಿವೆ. ಖಾಸಗಿ ಮೊಬೈಲ್ ಕಂಪನಿಗಳ ಈ ಕ್ರಮವನ್ನು ನಾವು ವಿರೋಧಿಸುತ್ತೇವೆ. ಹಾಗೂ ಸಾಮಾನ್ಯ ಜನರ ಪರವಾಗಿ ದರಗಳ ಹೆಚ್ಚಳವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ” ಎಂದರು.

ಪ್ರತಿಭಟನೆ ಬಳಿಕ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI)ದ ಕಚೇರಿಗೆ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸಲ್ಲಿಸಲಾಗಿದೆ.

ಹಕ್ಕೊತ್ತಾಯಗಳು

೧. ಅಸಮಂಜಸವಾದ ಪ್ರಿಪೇಯ್ಡ್ ರಿಚಾರ್ಜ್ ದರ ಹೆಚ್ಚಳವನ್ನು ತಕ್ಷಣವೇ ಹಿಂಪಡೆಯಿರಿ.

೨ ಖಾಸಗಿ ಟೆಲಿಕಾಂ ಕಂಪನಿಗಳಲ್ಲಿ ಸಕ್ರಿಯ ಪಾತ್ರ ವಹಿಸಲು ಮತ್ತು ಮೊಬೈಲ್ ಬಳಕೆದಾರರ ಹಿತಾಸಕ್ತಿಗಳನ್ನು ರಕ್ಷಿಸಲುTRAI ಮೂಕ ಪ್ರೇಕ್ಷಕರಾಗಿ ಉಳಿಯದೇ ತಕ್ಷಣವೇ ಕ್ರಮ ಕೈಗೊಳ್ಳಬೇಕು.

3. ಬಿಎಸ್ಎನ್ಎಲ್ ಪುನಶ್ಚೇತನಗೊಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ.

4. ಅತ್ಯಗತ್ಯ ಸೇವೆಯಾಗಿರುವ ಟೆಲಿಕಾಂ ವಲಯದ ಖಾಸಗೀಕರಣವನ್ನು ತಕ್ಷಣವೇ ನಿಲ್ಲಿಸಬೇಕು.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...