Homeಕರ್ನಾಟಕಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

ಬೆಂಗಳೂರು: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಪ್ರತಿಭಟನೆ

- Advertisement -
- Advertisement -

ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ರಾಜ್ಯ ಸಮಿತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿವೈಓ ರಾಜ್ಯಾಧ್ಯಕ್ಷ ಕಾ. ಶರಣಪ್ಪ ಉದ್ಬಾಳ್. “ಕೋವಿಡ್ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭದಾಹಕ್ಕಾಗಿ ಖಾಸಗಿ ಟಿಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ದರ ಹಾಗೂ ಡಾಟಾ ಪ್ಲಾನ್ ದರಗಳನ್ನು ಒಂದು ವರ್ಷದಲ್ಲಿ ಪ್ರತಿಶತ 100ರಷ್ಟು ಹೆಚ್ಚಿಸಿವೆ. ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ.  ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ತಮ್ಮ ಜೀವನ ಮತ್ತು ಜೀವನೋಪಾಯಕ್ಕಾಗಿ ಮೊಬೈಲ್ ಬಳಕೆಯನ್ನು ಅಗಾಧವಾಗಿ ಅವಲಂಬಿಸಿದ್ದಾರೆ. ಆನ್‌ಲೈನ್ ತರಗತಿಗಳು, ಆನ್‌ಲೈನ್ ಅಪ್ಲಿಕೇಶನ್‌ಗಳು, ಆನ್‌ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ” ಎಂದಿದ್ದಾರೆ.

“ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಪರಿಸ್ಥಿತಿಯಲ್ಲಿ, ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾದಂತಹ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ 20 ರಿಂದ 25% ವರೆಗೆ ಹೆಚ್ಚಿಸಿವೆ. ಇದು ಸಂಪೂರ್ಣವಾಗಿ ಜನವಿರೋಧಿಯಾಗಿದೆ.  ಈ ಸಂದರ್ಭದಲ್ಲಿ ಸೇವಾ ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ಆಘಾತವಾಗಿದೆ. ಈ ಕೂಡಲೇ ಟ್ರಾಯ್ ಮಧ್ಯ ಪ್ರವೇಶಿಸಿ ಖಾಸಗಿ ಟೆಲಿಕಾಂ ಕಂಪನಿಗಳ ಈ ಹಗಲು ದರೋಡೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.  

ಇದನ್ನೂ ಓದಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ಎಐಡಿವೈಓ ರಾಜ್ಯ ಉಪಾಧ್ಯಕ್ಷ ಕಾ. ವಿನಯ್ ಸಾರಥಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, “ಸಾರ್ವಜನಿಕ ಉದ್ಯಮವಾಗಿದ್ದ ಬಿಎಸ್ಎನ್ಎಲ್ ದುರ್ಬಲಗೊಂಡ ನಂತರ, ಖಾಸಗಿ ಮೊಬೈಲ್ ಆಪರೇಟರ್ ಕಂಪನಿಗಳು ದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಮಾರುಕಟ್ಟೆಯ ಗಣನೀಯ ಭಾಗದ ಮೇಲೆ ತಮ್ಮ ಬಿಗಿಹಿಡಿತ ಸಾಧಿಸಿವೆ. ಆದ್ದರಿಂದ  ಈ ಖಾಸಗಿ ಮೊಬೈಲ್ ಕಂಪನಿಗಳು ಭಾರೀ ಲಾಭ ಗಳಿಸಲು ತಮ್ಮ ಮೂಗಿನ ನೇರಕ್ಕೆ ದರಗಳನ್ನು ನಿಗದಿಮಾಡಿ, ಮೊಬೈಲ್ ಬಳಕೆದಾರರು ಅನಿವಾರ್ಯವಾಗಿ ಅಧಿಕ ಹಣ ಪಾವತಿಸುವಂತೆ ಮಾಡಿವೆ. ಖಾಸಗಿ ಮೊಬೈಲ್ ಕಂಪನಿಗಳ ಈ ಕ್ರಮವನ್ನು ನಾವು ವಿರೋಧಿಸುತ್ತೇವೆ. ಹಾಗೂ ಸಾಮಾನ್ಯ ಜನರ ಪರವಾಗಿ ದರಗಳ ಹೆಚ್ಚಳವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ” ಎಂದರು.

ಪ್ರತಿಭಟನೆ ಬಳಿಕ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI)ದ ಕಚೇರಿಗೆ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸಲ್ಲಿಸಲಾಗಿದೆ.

ಹಕ್ಕೊತ್ತಾಯಗಳು

೧. ಅಸಮಂಜಸವಾದ ಪ್ರಿಪೇಯ್ಡ್ ರಿಚಾರ್ಜ್ ದರ ಹೆಚ್ಚಳವನ್ನು ತಕ್ಷಣವೇ ಹಿಂಪಡೆಯಿರಿ.

೨ ಖಾಸಗಿ ಟೆಲಿಕಾಂ ಕಂಪನಿಗಳಲ್ಲಿ ಸಕ್ರಿಯ ಪಾತ್ರ ವಹಿಸಲು ಮತ್ತು ಮೊಬೈಲ್ ಬಳಕೆದಾರರ ಹಿತಾಸಕ್ತಿಗಳನ್ನು ರಕ್ಷಿಸಲುTRAI ಮೂಕ ಪ್ರೇಕ್ಷಕರಾಗಿ ಉಳಿಯದೇ ತಕ್ಷಣವೇ ಕ್ರಮ ಕೈಗೊಳ್ಳಬೇಕು.

3. ಬಿಎಸ್ಎನ್ಎಲ್ ಪುನಶ್ಚೇತನಗೊಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ.

4. ಅತ್ಯಗತ್ಯ ಸೇವೆಯಾಗಿರುವ ಟೆಲಿಕಾಂ ವಲಯದ ಖಾಸಗೀಕರಣವನ್ನು ತಕ್ಷಣವೇ ನಿಲ್ಲಿಸಬೇಕು.


ಇದನ್ನೂ ಓದಿ: ವಿದಾಯ 2021: ಕಳೆದ ವರ್ಷ ನಮ್ಮನ್ನಗಲಿದ ಚಿತ್ರರಂಗದ ತಾರೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...