Homeಮುಖಪುಟಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

`ಅಣ್ಣಮ್ಮದೇವಿ ಮೆರವಣಿಗೆ ನೆಪದಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪ್ಲಾನ್‌ ನಡೆದಿದೆಯೇ?' ಎಂಬ ಆತಂಕ ಎದುರಾಗಿದೆ.

- Advertisement -
- Advertisement -

ಏಪ್ರಿಲ್‌ 23ರ ಶನಿವಾರದಂದು ಬೆಂಗಳೂರಿನ ಯಲಚೇನಹಳ್ಳಿಯ ಅಣ್ಣಮ್ಮದೇವಿ ಮೆರವಣಿಗೆಯನ್ನು ಮುಸ್ಲಿಂ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾರ್ಗ ಹಾಗೂ ಸಮಯವನ್ನು ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ.  ಈ ಆಗ್ರಹಕ್ಕೆ ಡಿಸಿಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಜಿಲ್ಲಾ ಮುಖಂಡ ಗುಲಾಬ್‌ ಪಾಷಾ ಅವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, “ಏಪ್ರಿಲ್‌ 23ರಂದು ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅಣ್ಣಮ್ಮದೇವಿ ಮೆರವಣಿಗೆಯನ್ನು ಬಿಬಿಎಂಪಿ ವಾರ್ಡ್ ಯಲಚೇನಹಳ್ಳಿಯಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿರುವುದು ತಿಳಿದಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಸ್ಟೇಷನ್‌ನವರು ಮೆರವಣಿಗೆಗೆ ಅನುಮತಿ ನೀಡಿದ್ದಾರೆಂದು ನಂಬಿದ್ದೇವೆ. ಪ್ರಸ್ತಾಪಿತ ಮಾರ್ಗವನ್ನು ಹಂಚಿಕೊಳ್ಳಲಾಗಿದೆ. ಈ ಮೆರವಣಿಗೆಯ ಸಂಘಟಕರಲ್ಲಿ ಬಿಜೆಪಿ ಮುಖಂಡ, ಯಲಚೇಹಳ್ಳಿ ವಾರ್ಡ್ ಮಾಜಿ ಸದಸ್ಯ ಬಾಲಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಫಯಾದ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ತಿಳಿಯಿತು. ಮಂಜು ಲೇಔಟ್‌ನಿಂದ ಶನಿಮಹಾತ್ಮಾ ದೇವಸ್ಥಾನದ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಿದ್ದಾರೆ. ಅಣ್ಣಮ್ಮದೇವಿಯ ಮೆರವಣಿಗೆಯನ್ನು ಈ ಹಿಂದೆ ಯಾವತ್ತೂ ಹಮ್ಮಿಕೊಂಡಿರಲಿಲ್ಲ. ಕರ್ನಾಟಕ ಹಾಗೂ ದೇಶದ ವಿವಿಧೆಡೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ, ಈ ಮೆರವಣಿಗೆಯ ಕುರಿತು ನಾವು ಅತ್ಯಂತ ಆತಂಕಿತರಾಗಿದ್ದೇವೆ. ಶಾಂತಿ ಮತ್ತು ಕೋಮು ಸೌದಾರ್ಹತೆಯನ್ನು ಈ ಘಟನೆಗಳು ಹಾಳು ಮಾಡಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೀಗಾಗಿ ತಕ್ಷಣವೇ ಮೆರವಣಿಗೆಯ ಮಾರ್ಗವನ್ನು ಬದಲಿಸಬೇಕು. ಫಯಾಜ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವುದು ಸೂಕ್ತವಲ್ಲ. ಈ ಪ್ರದೇಶಗಳಲ್ಲಿ ಮಸೀದಿಗಳಿವೆ. ಮೆರವಣಿಗೆ ಮಾರ್ಗದಲ್ಲೂ ಒಂದು ಮಸೀದಿ ಇದೆ. ರಂಜಾನ್‌ ಮಾಸವಾಗಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಸಂಜೆ ವೇಳೆ ಮಸೀದಿಗೆ ಬರುತ್ತಾರೆ. ಯಾವುದೇ ಕೋಮು ಗಲಭೆಗಳನ್ನು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಜರುಗಿಸಬೇಕು ಎಂದು ಮತ್ತೊಮ್ಮೆ ನಿಮ್ಮಲ್ಲಿ ಕೋರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಗುಲಾಭ್ ಪಾಷಾ ಅವರು, “ಮೆರವಣಿಗೆಗೆ ನಮ್ಮ ವಿರೋಧವಿಲ್ಲ. ಆದರೆ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಜನ ಉಪವಾಸವಿದ್ದು, ಸಂಜೆ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದೇಶದಲ್ಲಿ ನಡೆದಿರುವ ಘಟನೆಗಳು ಆತಂಕ ತಂದಿವೆ. ಹೀಗಾಗಿ ಸಮುದಾಯಗಳ ನಡುವೆ ಶಾಂತಿ ಕಾಪಾಡಬೇಕು” ಎಂದು ತಿಳಿಸಿದರು.

“ಬೆಂಗಳೂರು ದಕ್ಷಿಣದಲ್ಲಿ ಎರಡು ಕೋಮಿನ ಜನರು ಸೌಹಾರ್ದತೆಯಿಂದ ಇದ್ದಾರೆ. ಮುಂದೆಯೂ ಇರುತ್ತಾರೆ. ಆದರೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ” ಎಂದು ಹೇಳಿದರು.

ಸ್ವರಾಜ್‌ ಪಕ್ಷದ ಮನವಿಗೆ ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ತಿಳಿದು ಬಂದಿದೆ. ಅಣ್ಣಮ್ಮ ಮೆರವಣಿಗೆಯು ಈ ಹಿಂದೆ ಚಲಿಸುತ್ತಿದ್ದ ದಾರಿಯಲ್ಲೇ ತೆರಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಬೇಕಂತಲೇ ಗಲಭೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಮಸೀದಿ ಮುಂದೆ ಜೈ ಶ್ರೀರಾಮ್ ಕೂಗುವ, ಆಯುಧಗಳನ್ನು ಜಳಪಿಸುವ ದೃಶ್ಯಗಳು ವೈರಲ್ ಆಗುತ್ತಿವೆ. ಪೊಲೀಸರೇ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ದೇವರ ಹೆಸರಲ್ಲಿ ಗಲಭೆಗಳನ್ನು ಸೃಷ್ಟಿಸುವ, ಇನ್ನೊಂದು ಕೋಮಿನ ಜನರನ್ನು ಬೇಕಂತಲೇ ಪ್ರಚೋದಿಸುವ ಪ್ರವೃತ್ತಿಗಳು ಎಗ್ಗಿಲ್ಲದೆ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮದ ಕುರಿತು ಆತಂಕ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಫಯಾಝಬಾದ್ ಮತ್ತು ಕನಕ ನಗರಗಳು ಭಾರತದಲ್ಲಿಯೇ ಇರುವಂತಹದು ನೆನಪಿರಲಿ ,ಯಾವ ಸಮುದಾಯ ಹೇಗೆ ವರ್ತನೆ ಮಾಡಿದೆ ಎಂಬುವುದು ಎಲ್ಲರಿಗೂ ಇತ್ತೀಚೆಗೆ ತಿಳಿದಿದೆ ಹಿಂದೂಸ್ಥಾನದಲ್ಲಿ ಇದ್ದು ಹಿಂದೂಗಳ ಮೇಲೆ ಗದಪ್ರಹಾರ ಸಹಿಸಲಾಗದು ,ಎಂದಿನಂತೆ ಅಣ್ಣಮ್ಮ ಉತ್ಸವ ನಡೆಯಲಿದೆ

  2. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸಲ್ಮಾನರು ಮೆರವಣಿಗೆ ಮಾಡಬಹುದಾ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...