Homeಮುಖಪುಟಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

`ಅಣ್ಣಮ್ಮದೇವಿ ಮೆರವಣಿಗೆ ನೆಪದಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪ್ಲಾನ್‌ ನಡೆದಿದೆಯೇ?' ಎಂಬ ಆತಂಕ ಎದುರಾಗಿದೆ.

- Advertisement -
- Advertisement -

ಏಪ್ರಿಲ್‌ 23ರ ಶನಿವಾರದಂದು ಬೆಂಗಳೂರಿನ ಯಲಚೇನಹಳ್ಳಿಯ ಅಣ್ಣಮ್ಮದೇವಿ ಮೆರವಣಿಗೆಯನ್ನು ಮುಸ್ಲಿಂ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾರ್ಗ ಹಾಗೂ ಸಮಯವನ್ನು ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ.  ಈ ಆಗ್ರಹಕ್ಕೆ ಡಿಸಿಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಜಿಲ್ಲಾ ಮುಖಂಡ ಗುಲಾಬ್‌ ಪಾಷಾ ಅವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, “ಏಪ್ರಿಲ್‌ 23ರಂದು ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅಣ್ಣಮ್ಮದೇವಿ ಮೆರವಣಿಗೆಯನ್ನು ಬಿಬಿಎಂಪಿ ವಾರ್ಡ್ ಯಲಚೇನಹಳ್ಳಿಯಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿರುವುದು ತಿಳಿದಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಸ್ಟೇಷನ್‌ನವರು ಮೆರವಣಿಗೆಗೆ ಅನುಮತಿ ನೀಡಿದ್ದಾರೆಂದು ನಂಬಿದ್ದೇವೆ. ಪ್ರಸ್ತಾಪಿತ ಮಾರ್ಗವನ್ನು ಹಂಚಿಕೊಳ್ಳಲಾಗಿದೆ. ಈ ಮೆರವಣಿಗೆಯ ಸಂಘಟಕರಲ್ಲಿ ಬಿಜೆಪಿ ಮುಖಂಡ, ಯಲಚೇಹಳ್ಳಿ ವಾರ್ಡ್ ಮಾಜಿ ಸದಸ್ಯ ಬಾಲಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಫಯಾದ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ತಿಳಿಯಿತು. ಮಂಜು ಲೇಔಟ್‌ನಿಂದ ಶನಿಮಹಾತ್ಮಾ ದೇವಸ್ಥಾನದ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಿದ್ದಾರೆ. ಅಣ್ಣಮ್ಮದೇವಿಯ ಮೆರವಣಿಗೆಯನ್ನು ಈ ಹಿಂದೆ ಯಾವತ್ತೂ ಹಮ್ಮಿಕೊಂಡಿರಲಿಲ್ಲ. ಕರ್ನಾಟಕ ಹಾಗೂ ದೇಶದ ವಿವಿಧೆಡೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ, ಈ ಮೆರವಣಿಗೆಯ ಕುರಿತು ನಾವು ಅತ್ಯಂತ ಆತಂಕಿತರಾಗಿದ್ದೇವೆ. ಶಾಂತಿ ಮತ್ತು ಕೋಮು ಸೌದಾರ್ಹತೆಯನ್ನು ಈ ಘಟನೆಗಳು ಹಾಳು ಮಾಡಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೀಗಾಗಿ ತಕ್ಷಣವೇ ಮೆರವಣಿಗೆಯ ಮಾರ್ಗವನ್ನು ಬದಲಿಸಬೇಕು. ಫಯಾಜ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವುದು ಸೂಕ್ತವಲ್ಲ. ಈ ಪ್ರದೇಶಗಳಲ್ಲಿ ಮಸೀದಿಗಳಿವೆ. ಮೆರವಣಿಗೆ ಮಾರ್ಗದಲ್ಲೂ ಒಂದು ಮಸೀದಿ ಇದೆ. ರಂಜಾನ್‌ ಮಾಸವಾಗಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಸಂಜೆ ವೇಳೆ ಮಸೀದಿಗೆ ಬರುತ್ತಾರೆ. ಯಾವುದೇ ಕೋಮು ಗಲಭೆಗಳನ್ನು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಜರುಗಿಸಬೇಕು ಎಂದು ಮತ್ತೊಮ್ಮೆ ನಿಮ್ಮಲ್ಲಿ ಕೋರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಗುಲಾಭ್ ಪಾಷಾ ಅವರು, “ಮೆರವಣಿಗೆಗೆ ನಮ್ಮ ವಿರೋಧವಿಲ್ಲ. ಆದರೆ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಜನ ಉಪವಾಸವಿದ್ದು, ಸಂಜೆ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದೇಶದಲ್ಲಿ ನಡೆದಿರುವ ಘಟನೆಗಳು ಆತಂಕ ತಂದಿವೆ. ಹೀಗಾಗಿ ಸಮುದಾಯಗಳ ನಡುವೆ ಶಾಂತಿ ಕಾಪಾಡಬೇಕು” ಎಂದು ತಿಳಿಸಿದರು.

“ಬೆಂಗಳೂರು ದಕ್ಷಿಣದಲ್ಲಿ ಎರಡು ಕೋಮಿನ ಜನರು ಸೌಹಾರ್ದತೆಯಿಂದ ಇದ್ದಾರೆ. ಮುಂದೆಯೂ ಇರುತ್ತಾರೆ. ಆದರೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ” ಎಂದು ಹೇಳಿದರು.

ಸ್ವರಾಜ್‌ ಪಕ್ಷದ ಮನವಿಗೆ ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ತಿಳಿದು ಬಂದಿದೆ. ಅಣ್ಣಮ್ಮ ಮೆರವಣಿಗೆಯು ಈ ಹಿಂದೆ ಚಲಿಸುತ್ತಿದ್ದ ದಾರಿಯಲ್ಲೇ ತೆರಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಬೇಕಂತಲೇ ಗಲಭೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಮಸೀದಿ ಮುಂದೆ ಜೈ ಶ್ರೀರಾಮ್ ಕೂಗುವ, ಆಯುಧಗಳನ್ನು ಜಳಪಿಸುವ ದೃಶ್ಯಗಳು ವೈರಲ್ ಆಗುತ್ತಿವೆ. ಪೊಲೀಸರೇ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ದೇವರ ಹೆಸರಲ್ಲಿ ಗಲಭೆಗಳನ್ನು ಸೃಷ್ಟಿಸುವ, ಇನ್ನೊಂದು ಕೋಮಿನ ಜನರನ್ನು ಬೇಕಂತಲೇ ಪ್ರಚೋದಿಸುವ ಪ್ರವೃತ್ತಿಗಳು ಎಗ್ಗಿಲ್ಲದೆ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮದ ಕುರಿತು ಆತಂಕ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಫಯಾಝಬಾದ್ ಮತ್ತು ಕನಕ ನಗರಗಳು ಭಾರತದಲ್ಲಿಯೇ ಇರುವಂತಹದು ನೆನಪಿರಲಿ ,ಯಾವ ಸಮುದಾಯ ಹೇಗೆ ವರ್ತನೆ ಮಾಡಿದೆ ಎಂಬುವುದು ಎಲ್ಲರಿಗೂ ಇತ್ತೀಚೆಗೆ ತಿಳಿದಿದೆ ಹಿಂದೂಸ್ಥಾನದಲ್ಲಿ ಇದ್ದು ಹಿಂದೂಗಳ ಮೇಲೆ ಗದಪ್ರಹಾರ ಸಹಿಸಲಾಗದು ,ಎಂದಿನಂತೆ ಅಣ್ಣಮ್ಮ ಉತ್ಸವ ನಡೆಯಲಿದೆ

  2. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸಲ್ಮಾನರು ಮೆರವಣಿಗೆ ಮಾಡಬಹುದಾ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....