Homeಮುಖಪುಟಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

`ಅಣ್ಣಮ್ಮದೇವಿ ಮೆರವಣಿಗೆ ನೆಪದಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪ್ಲಾನ್‌ ನಡೆದಿದೆಯೇ?' ಎಂಬ ಆತಂಕ ಎದುರಾಗಿದೆ.

- Advertisement -
- Advertisement -

ಏಪ್ರಿಲ್‌ 23ರ ಶನಿವಾರದಂದು ಬೆಂಗಳೂರಿನ ಯಲಚೇನಹಳ್ಳಿಯ ಅಣ್ಣಮ್ಮದೇವಿ ಮೆರವಣಿಗೆಯನ್ನು ಮುಸ್ಲಿಂ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾರ್ಗ ಹಾಗೂ ಸಮಯವನ್ನು ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ.  ಈ ಆಗ್ರಹಕ್ಕೆ ಡಿಸಿಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಜಿಲ್ಲಾ ಮುಖಂಡ ಗುಲಾಬ್‌ ಪಾಷಾ ಅವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, “ಏಪ್ರಿಲ್‌ 23ರಂದು ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅಣ್ಣಮ್ಮದೇವಿ ಮೆರವಣಿಗೆಯನ್ನು ಬಿಬಿಎಂಪಿ ವಾರ್ಡ್ ಯಲಚೇನಹಳ್ಳಿಯಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿರುವುದು ತಿಳಿದಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಸ್ಟೇಷನ್‌ನವರು ಮೆರವಣಿಗೆಗೆ ಅನುಮತಿ ನೀಡಿದ್ದಾರೆಂದು ನಂಬಿದ್ದೇವೆ. ಪ್ರಸ್ತಾಪಿತ ಮಾರ್ಗವನ್ನು ಹಂಚಿಕೊಳ್ಳಲಾಗಿದೆ. ಈ ಮೆರವಣಿಗೆಯ ಸಂಘಟಕರಲ್ಲಿ ಬಿಜೆಪಿ ಮುಖಂಡ, ಯಲಚೇಹಳ್ಳಿ ವಾರ್ಡ್ ಮಾಜಿ ಸದಸ್ಯ ಬಾಲಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಫಯಾದ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ತಿಳಿಯಿತು. ಮಂಜು ಲೇಔಟ್‌ನಿಂದ ಶನಿಮಹಾತ್ಮಾ ದೇವಸ್ಥಾನದ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಿದ್ದಾರೆ. ಅಣ್ಣಮ್ಮದೇವಿಯ ಮೆರವಣಿಗೆಯನ್ನು ಈ ಹಿಂದೆ ಯಾವತ್ತೂ ಹಮ್ಮಿಕೊಂಡಿರಲಿಲ್ಲ. ಕರ್ನಾಟಕ ಹಾಗೂ ದೇಶದ ವಿವಿಧೆಡೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ, ಈ ಮೆರವಣಿಗೆಯ ಕುರಿತು ನಾವು ಅತ್ಯಂತ ಆತಂಕಿತರಾಗಿದ್ದೇವೆ. ಶಾಂತಿ ಮತ್ತು ಕೋಮು ಸೌದಾರ್ಹತೆಯನ್ನು ಈ ಘಟನೆಗಳು ಹಾಳು ಮಾಡಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೀಗಾಗಿ ತಕ್ಷಣವೇ ಮೆರವಣಿಗೆಯ ಮಾರ್ಗವನ್ನು ಬದಲಿಸಬೇಕು. ಫಯಾಜ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವುದು ಸೂಕ್ತವಲ್ಲ. ಈ ಪ್ರದೇಶಗಳಲ್ಲಿ ಮಸೀದಿಗಳಿವೆ. ಮೆರವಣಿಗೆ ಮಾರ್ಗದಲ್ಲೂ ಒಂದು ಮಸೀದಿ ಇದೆ. ರಂಜಾನ್‌ ಮಾಸವಾಗಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಸಂಜೆ ವೇಳೆ ಮಸೀದಿಗೆ ಬರುತ್ತಾರೆ. ಯಾವುದೇ ಕೋಮು ಗಲಭೆಗಳನ್ನು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಜರುಗಿಸಬೇಕು ಎಂದು ಮತ್ತೊಮ್ಮೆ ನಿಮ್ಮಲ್ಲಿ ಕೋರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಗುಲಾಭ್ ಪಾಷಾ ಅವರು, “ಮೆರವಣಿಗೆಗೆ ನಮ್ಮ ವಿರೋಧವಿಲ್ಲ. ಆದರೆ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಜನ ಉಪವಾಸವಿದ್ದು, ಸಂಜೆ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದೇಶದಲ್ಲಿ ನಡೆದಿರುವ ಘಟನೆಗಳು ಆತಂಕ ತಂದಿವೆ. ಹೀಗಾಗಿ ಸಮುದಾಯಗಳ ನಡುವೆ ಶಾಂತಿ ಕಾಪಾಡಬೇಕು” ಎಂದು ತಿಳಿಸಿದರು.

“ಬೆಂಗಳೂರು ದಕ್ಷಿಣದಲ್ಲಿ ಎರಡು ಕೋಮಿನ ಜನರು ಸೌಹಾರ್ದತೆಯಿಂದ ಇದ್ದಾರೆ. ಮುಂದೆಯೂ ಇರುತ್ತಾರೆ. ಆದರೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ” ಎಂದು ಹೇಳಿದರು.

ಸ್ವರಾಜ್‌ ಪಕ್ಷದ ಮನವಿಗೆ ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ತಿಳಿದು ಬಂದಿದೆ. ಅಣ್ಣಮ್ಮ ಮೆರವಣಿಗೆಯು ಈ ಹಿಂದೆ ಚಲಿಸುತ್ತಿದ್ದ ದಾರಿಯಲ್ಲೇ ತೆರಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಬೇಕಂತಲೇ ಗಲಭೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಮಸೀದಿ ಮುಂದೆ ಜೈ ಶ್ರೀರಾಮ್ ಕೂಗುವ, ಆಯುಧಗಳನ್ನು ಜಳಪಿಸುವ ದೃಶ್ಯಗಳು ವೈರಲ್ ಆಗುತ್ತಿವೆ. ಪೊಲೀಸರೇ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ದೇವರ ಹೆಸರಲ್ಲಿ ಗಲಭೆಗಳನ್ನು ಸೃಷ್ಟಿಸುವ, ಇನ್ನೊಂದು ಕೋಮಿನ ಜನರನ್ನು ಬೇಕಂತಲೇ ಪ್ರಚೋದಿಸುವ ಪ್ರವೃತ್ತಿಗಳು ಎಗ್ಗಿಲ್ಲದೆ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮದ ಕುರಿತು ಆತಂಕ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಫಯಾಝಬಾದ್ ಮತ್ತು ಕನಕ ನಗರಗಳು ಭಾರತದಲ್ಲಿಯೇ ಇರುವಂತಹದು ನೆನಪಿರಲಿ ,ಯಾವ ಸಮುದಾಯ ಹೇಗೆ ವರ್ತನೆ ಮಾಡಿದೆ ಎಂಬುವುದು ಎಲ್ಲರಿಗೂ ಇತ್ತೀಚೆಗೆ ತಿಳಿದಿದೆ ಹಿಂದೂಸ್ಥಾನದಲ್ಲಿ ಇದ್ದು ಹಿಂದೂಗಳ ಮೇಲೆ ಗದಪ್ರಹಾರ ಸಹಿಸಲಾಗದು ,ಎಂದಿನಂತೆ ಅಣ್ಣಮ್ಮ ಉತ್ಸವ ನಡೆಯಲಿದೆ

  2. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸಲ್ಮಾನರು ಮೆರವಣಿಗೆ ಮಾಡಬಹುದಾ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...