Homeಮುಖಪುಟಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

`ಅಣ್ಣಮ್ಮದೇವಿ ಮೆರವಣಿಗೆ ನೆಪದಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪ್ಲಾನ್‌ ನಡೆದಿದೆಯೇ?' ಎಂಬ ಆತಂಕ ಎದುರಾಗಿದೆ.

- Advertisement -
- Advertisement -

ಏಪ್ರಿಲ್‌ 23ರ ಶನಿವಾರದಂದು ಬೆಂಗಳೂರಿನ ಯಲಚೇನಹಳ್ಳಿಯ ಅಣ್ಣಮ್ಮದೇವಿ ಮೆರವಣಿಗೆಯನ್ನು ಮುಸ್ಲಿಂ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾರ್ಗ ಹಾಗೂ ಸಮಯವನ್ನು ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ.  ಈ ಆಗ್ರಹಕ್ಕೆ ಡಿಸಿಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಜಿಲ್ಲಾ ಮುಖಂಡ ಗುಲಾಬ್‌ ಪಾಷಾ ಅವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, “ಏಪ್ರಿಲ್‌ 23ರಂದು ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅಣ್ಣಮ್ಮದೇವಿ ಮೆರವಣಿಗೆಯನ್ನು ಬಿಬಿಎಂಪಿ ವಾರ್ಡ್ ಯಲಚೇನಹಳ್ಳಿಯಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿರುವುದು ತಿಳಿದಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಸ್ಟೇಷನ್‌ನವರು ಮೆರವಣಿಗೆಗೆ ಅನುಮತಿ ನೀಡಿದ್ದಾರೆಂದು ನಂಬಿದ್ದೇವೆ. ಪ್ರಸ್ತಾಪಿತ ಮಾರ್ಗವನ್ನು ಹಂಚಿಕೊಳ್ಳಲಾಗಿದೆ. ಈ ಮೆರವಣಿಗೆಯ ಸಂಘಟಕರಲ್ಲಿ ಬಿಜೆಪಿ ಮುಖಂಡ, ಯಲಚೇಹಳ್ಳಿ ವಾರ್ಡ್ ಮಾಜಿ ಸದಸ್ಯ ಬಾಲಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಫಯಾದ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ತಿಳಿಯಿತು. ಮಂಜು ಲೇಔಟ್‌ನಿಂದ ಶನಿಮಹಾತ್ಮಾ ದೇವಸ್ಥಾನದ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಿದ್ದಾರೆ. ಅಣ್ಣಮ್ಮದೇವಿಯ ಮೆರವಣಿಗೆಯನ್ನು ಈ ಹಿಂದೆ ಯಾವತ್ತೂ ಹಮ್ಮಿಕೊಂಡಿರಲಿಲ್ಲ. ಕರ್ನಾಟಕ ಹಾಗೂ ದೇಶದ ವಿವಿಧೆಡೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ, ಈ ಮೆರವಣಿಗೆಯ ಕುರಿತು ನಾವು ಅತ್ಯಂತ ಆತಂಕಿತರಾಗಿದ್ದೇವೆ. ಶಾಂತಿ ಮತ್ತು ಕೋಮು ಸೌದಾರ್ಹತೆಯನ್ನು ಈ ಘಟನೆಗಳು ಹಾಳು ಮಾಡಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೀಗಾಗಿ ತಕ್ಷಣವೇ ಮೆರವಣಿಗೆಯ ಮಾರ್ಗವನ್ನು ಬದಲಿಸಬೇಕು. ಫಯಾಜ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವುದು ಸೂಕ್ತವಲ್ಲ. ಈ ಪ್ರದೇಶಗಳಲ್ಲಿ ಮಸೀದಿಗಳಿವೆ. ಮೆರವಣಿಗೆ ಮಾರ್ಗದಲ್ಲೂ ಒಂದು ಮಸೀದಿ ಇದೆ. ರಂಜಾನ್‌ ಮಾಸವಾಗಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಸಂಜೆ ವೇಳೆ ಮಸೀದಿಗೆ ಬರುತ್ತಾರೆ. ಯಾವುದೇ ಕೋಮು ಗಲಭೆಗಳನ್ನು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಜರುಗಿಸಬೇಕು ಎಂದು ಮತ್ತೊಮ್ಮೆ ನಿಮ್ಮಲ್ಲಿ ಕೋರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಗುಲಾಭ್ ಪಾಷಾ ಅವರು, “ಮೆರವಣಿಗೆಗೆ ನಮ್ಮ ವಿರೋಧವಿಲ್ಲ. ಆದರೆ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಜನ ಉಪವಾಸವಿದ್ದು, ಸಂಜೆ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದೇಶದಲ್ಲಿ ನಡೆದಿರುವ ಘಟನೆಗಳು ಆತಂಕ ತಂದಿವೆ. ಹೀಗಾಗಿ ಸಮುದಾಯಗಳ ನಡುವೆ ಶಾಂತಿ ಕಾಪಾಡಬೇಕು” ಎಂದು ತಿಳಿಸಿದರು.

“ಬೆಂಗಳೂರು ದಕ್ಷಿಣದಲ್ಲಿ ಎರಡು ಕೋಮಿನ ಜನರು ಸೌಹಾರ್ದತೆಯಿಂದ ಇದ್ದಾರೆ. ಮುಂದೆಯೂ ಇರುತ್ತಾರೆ. ಆದರೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ” ಎಂದು ಹೇಳಿದರು.

ಸ್ವರಾಜ್‌ ಪಕ್ಷದ ಮನವಿಗೆ ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ತಿಳಿದು ಬಂದಿದೆ. ಅಣ್ಣಮ್ಮ ಮೆರವಣಿಗೆಯು ಈ ಹಿಂದೆ ಚಲಿಸುತ್ತಿದ್ದ ದಾರಿಯಲ್ಲೇ ತೆರಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಬೇಕಂತಲೇ ಗಲಭೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಮಸೀದಿ ಮುಂದೆ ಜೈ ಶ್ರೀರಾಮ್ ಕೂಗುವ, ಆಯುಧಗಳನ್ನು ಜಳಪಿಸುವ ದೃಶ್ಯಗಳು ವೈರಲ್ ಆಗುತ್ತಿವೆ. ಪೊಲೀಸರೇ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ದೇವರ ಹೆಸರಲ್ಲಿ ಗಲಭೆಗಳನ್ನು ಸೃಷ್ಟಿಸುವ, ಇನ್ನೊಂದು ಕೋಮಿನ ಜನರನ್ನು ಬೇಕಂತಲೇ ಪ್ರಚೋದಿಸುವ ಪ್ರವೃತ್ತಿಗಳು ಎಗ್ಗಿಲ್ಲದೆ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮದ ಕುರಿತು ಆತಂಕ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಫಯಾಝಬಾದ್ ಮತ್ತು ಕನಕ ನಗರಗಳು ಭಾರತದಲ್ಲಿಯೇ ಇರುವಂತಹದು ನೆನಪಿರಲಿ ,ಯಾವ ಸಮುದಾಯ ಹೇಗೆ ವರ್ತನೆ ಮಾಡಿದೆ ಎಂಬುವುದು ಎಲ್ಲರಿಗೂ ಇತ್ತೀಚೆಗೆ ತಿಳಿದಿದೆ ಹಿಂದೂಸ್ಥಾನದಲ್ಲಿ ಇದ್ದು ಹಿಂದೂಗಳ ಮೇಲೆ ಗದಪ್ರಹಾರ ಸಹಿಸಲಾಗದು ,ಎಂದಿನಂತೆ ಅಣ್ಣಮ್ಮ ಉತ್ಸವ ನಡೆಯಲಿದೆ

  2. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸಲ್ಮಾನರು ಮೆರವಣಿಗೆ ಮಾಡಬಹುದಾ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...