Homeಮುಖಪುಟಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

`ಅಣ್ಣಮ್ಮದೇವಿ ಮೆರವಣಿಗೆ ನೆಪದಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪ್ಲಾನ್‌ ನಡೆದಿದೆಯೇ?' ಎಂಬ ಆತಂಕ ಎದುರಾಗಿದೆ.

- Advertisement -
- Advertisement -

ಏಪ್ರಿಲ್‌ 23ರ ಶನಿವಾರದಂದು ಬೆಂಗಳೂರಿನ ಯಲಚೇನಹಳ್ಳಿಯ ಅಣ್ಣಮ್ಮದೇವಿ ಮೆರವಣಿಗೆಯನ್ನು ಮುಸ್ಲಿಂ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾರ್ಗ ಹಾಗೂ ಸಮಯವನ್ನು ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ.  ಈ ಆಗ್ರಹಕ್ಕೆ ಡಿಸಿಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಜಿಲ್ಲಾ ಮುಖಂಡ ಗುಲಾಬ್‌ ಪಾಷಾ ಅವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, “ಏಪ್ರಿಲ್‌ 23ರಂದು ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅಣ್ಣಮ್ಮದೇವಿ ಮೆರವಣಿಗೆಯನ್ನು ಬಿಬಿಎಂಪಿ ವಾರ್ಡ್ ಯಲಚೇನಹಳ್ಳಿಯಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿರುವುದು ತಿಳಿದಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಸ್ಟೇಷನ್‌ನವರು ಮೆರವಣಿಗೆಗೆ ಅನುಮತಿ ನೀಡಿದ್ದಾರೆಂದು ನಂಬಿದ್ದೇವೆ. ಪ್ರಸ್ತಾಪಿತ ಮಾರ್ಗವನ್ನು ಹಂಚಿಕೊಳ್ಳಲಾಗಿದೆ. ಈ ಮೆರವಣಿಗೆಯ ಸಂಘಟಕರಲ್ಲಿ ಬಿಜೆಪಿ ಮುಖಂಡ, ಯಲಚೇಹಳ್ಳಿ ವಾರ್ಡ್ ಮಾಜಿ ಸದಸ್ಯ ಬಾಲಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಫಯಾದ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ತಿಳಿಯಿತು. ಮಂಜು ಲೇಔಟ್‌ನಿಂದ ಶನಿಮಹಾತ್ಮಾ ದೇವಸ್ಥಾನದ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಿದ್ದಾರೆ. ಅಣ್ಣಮ್ಮದೇವಿಯ ಮೆರವಣಿಗೆಯನ್ನು ಈ ಹಿಂದೆ ಯಾವತ್ತೂ ಹಮ್ಮಿಕೊಂಡಿರಲಿಲ್ಲ. ಕರ್ನಾಟಕ ಹಾಗೂ ದೇಶದ ವಿವಿಧೆಡೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ, ಈ ಮೆರವಣಿಗೆಯ ಕುರಿತು ನಾವು ಅತ್ಯಂತ ಆತಂಕಿತರಾಗಿದ್ದೇವೆ. ಶಾಂತಿ ಮತ್ತು ಕೋಮು ಸೌದಾರ್ಹತೆಯನ್ನು ಈ ಘಟನೆಗಳು ಹಾಳು ಮಾಡಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೀಗಾಗಿ ತಕ್ಷಣವೇ ಮೆರವಣಿಗೆಯ ಮಾರ್ಗವನ್ನು ಬದಲಿಸಬೇಕು. ಫಯಾಜ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವುದು ಸೂಕ್ತವಲ್ಲ. ಈ ಪ್ರದೇಶಗಳಲ್ಲಿ ಮಸೀದಿಗಳಿವೆ. ಮೆರವಣಿಗೆ ಮಾರ್ಗದಲ್ಲೂ ಒಂದು ಮಸೀದಿ ಇದೆ. ರಂಜಾನ್‌ ಮಾಸವಾಗಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಸಂಜೆ ವೇಳೆ ಮಸೀದಿಗೆ ಬರುತ್ತಾರೆ. ಯಾವುದೇ ಕೋಮು ಗಲಭೆಗಳನ್ನು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಜರುಗಿಸಬೇಕು ಎಂದು ಮತ್ತೊಮ್ಮೆ ನಿಮ್ಮಲ್ಲಿ ಕೋರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಗುಲಾಭ್ ಪಾಷಾ ಅವರು, “ಮೆರವಣಿಗೆಗೆ ನಮ್ಮ ವಿರೋಧವಿಲ್ಲ. ಆದರೆ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಜನ ಉಪವಾಸವಿದ್ದು, ಸಂಜೆ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದೇಶದಲ್ಲಿ ನಡೆದಿರುವ ಘಟನೆಗಳು ಆತಂಕ ತಂದಿವೆ. ಹೀಗಾಗಿ ಸಮುದಾಯಗಳ ನಡುವೆ ಶಾಂತಿ ಕಾಪಾಡಬೇಕು” ಎಂದು ತಿಳಿಸಿದರು.

“ಬೆಂಗಳೂರು ದಕ್ಷಿಣದಲ್ಲಿ ಎರಡು ಕೋಮಿನ ಜನರು ಸೌಹಾರ್ದತೆಯಿಂದ ಇದ್ದಾರೆ. ಮುಂದೆಯೂ ಇರುತ್ತಾರೆ. ಆದರೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ” ಎಂದು ಹೇಳಿದರು.

ಸ್ವರಾಜ್‌ ಪಕ್ಷದ ಮನವಿಗೆ ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ತಿಳಿದು ಬಂದಿದೆ. ಅಣ್ಣಮ್ಮ ಮೆರವಣಿಗೆಯು ಈ ಹಿಂದೆ ಚಲಿಸುತ್ತಿದ್ದ ದಾರಿಯಲ್ಲೇ ತೆರಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಬೇಕಂತಲೇ ಗಲಭೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಮಸೀದಿ ಮುಂದೆ ಜೈ ಶ್ರೀರಾಮ್ ಕೂಗುವ, ಆಯುಧಗಳನ್ನು ಜಳಪಿಸುವ ದೃಶ್ಯಗಳು ವೈರಲ್ ಆಗುತ್ತಿವೆ. ಪೊಲೀಸರೇ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ದೇವರ ಹೆಸರಲ್ಲಿ ಗಲಭೆಗಳನ್ನು ಸೃಷ್ಟಿಸುವ, ಇನ್ನೊಂದು ಕೋಮಿನ ಜನರನ್ನು ಬೇಕಂತಲೇ ಪ್ರಚೋದಿಸುವ ಪ್ರವೃತ್ತಿಗಳು ಎಗ್ಗಿಲ್ಲದೆ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮದ ಕುರಿತು ಆತಂಕ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಫಯಾಝಬಾದ್ ಮತ್ತು ಕನಕ ನಗರಗಳು ಭಾರತದಲ್ಲಿಯೇ ಇರುವಂತಹದು ನೆನಪಿರಲಿ ,ಯಾವ ಸಮುದಾಯ ಹೇಗೆ ವರ್ತನೆ ಮಾಡಿದೆ ಎಂಬುವುದು ಎಲ್ಲರಿಗೂ ಇತ್ತೀಚೆಗೆ ತಿಳಿದಿದೆ ಹಿಂದೂಸ್ಥಾನದಲ್ಲಿ ಇದ್ದು ಹಿಂದೂಗಳ ಮೇಲೆ ಗದಪ್ರಹಾರ ಸಹಿಸಲಾಗದು ,ಎಂದಿನಂತೆ ಅಣ್ಣಮ್ಮ ಉತ್ಸವ ನಡೆಯಲಿದೆ

  2. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸಲ್ಮಾನರು ಮೆರವಣಿಗೆ ಮಾಡಬಹುದಾ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...