Homeಮುಖಪುಟಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

ಬೆಂಗಳೂರು: ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಅಣ್ಣಮ್ಮದೇವಿ ಮೆರೆವಣಿಗೆ ಪ್ರಯತ್ಯ; ಮಾರ್ಗ ಬದಲಿಸಲು ಮನವಿ

`ಅಣ್ಣಮ್ಮದೇವಿ ಮೆರವಣಿಗೆ ನೆಪದಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪ್ಲಾನ್‌ ನಡೆದಿದೆಯೇ?' ಎಂಬ ಆತಂಕ ಎದುರಾಗಿದೆ.

- Advertisement -
- Advertisement -

ಏಪ್ರಿಲ್‌ 23ರ ಶನಿವಾರದಂದು ಬೆಂಗಳೂರಿನ ಯಲಚೇನಹಳ್ಳಿಯ ಅಣ್ಣಮ್ಮದೇವಿ ಮೆರವಣಿಗೆಯನ್ನು ಮುಸ್ಲಿಂ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾರ್ಗ ಹಾಗೂ ಸಮಯವನ್ನು ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ.  ಈ ಆಗ್ರಹಕ್ಕೆ ಡಿಸಿಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಸ್ವರಾಜ್ ಇಂಡಿಯಾ ಪಕ್ಷದ ಬೆಂಗಳೂರು ಜಿಲ್ಲಾ ಮುಖಂಡ ಗುಲಾಬ್‌ ಪಾಷಾ ಅವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಪತ್ರ ಬರೆದಿದ್ದು, “ಏಪ್ರಿಲ್‌ 23ರಂದು ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಅಣ್ಣಮ್ಮದೇವಿ ಮೆರವಣಿಗೆಯನ್ನು ಬಿಬಿಎಂಪಿ ವಾರ್ಡ್ ಯಲಚೇನಹಳ್ಳಿಯಲ್ಲಿ ಹಿಂದೂ ಸಂಘಟನೆ ಹಮ್ಮಿಕೊಂಡಿರುವುದು ತಿಳಿದಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಸ್ಟೇಷನ್‌ನವರು ಮೆರವಣಿಗೆಗೆ ಅನುಮತಿ ನೀಡಿದ್ದಾರೆಂದು ನಂಬಿದ್ದೇವೆ. ಪ್ರಸ್ತಾಪಿತ ಮಾರ್ಗವನ್ನು ಹಂಚಿಕೊಳ್ಳಲಾಗಿದೆ. ಈ ಮೆರವಣಿಗೆಯ ಸಂಘಟಕರಲ್ಲಿ ಬಿಜೆಪಿ ಮುಖಂಡ, ಯಲಚೇಹಳ್ಳಿ ವಾರ್ಡ್ ಮಾಜಿ ಸದಸ್ಯ ಬಾಲಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆಂದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಫಯಾದ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವ ಪ್ರಸ್ತಾವನೆಯನ್ನು ಮಾಡಲಾಗಿದೆ ಎಂದು ತಿಳಿಯಿತು. ಮಂಜು ಲೇಔಟ್‌ನಿಂದ ಶನಿಮಹಾತ್ಮಾ ದೇವಸ್ಥಾನದ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಿದ್ದಾರೆ. ಅಣ್ಣಮ್ಮದೇವಿಯ ಮೆರವಣಿಗೆಯನ್ನು ಈ ಹಿಂದೆ ಯಾವತ್ತೂ ಹಮ್ಮಿಕೊಂಡಿರಲಿಲ್ಲ. ಕರ್ನಾಟಕ ಹಾಗೂ ದೇಶದ ವಿವಿಧೆಡೆ ನಡೆದಿರುವ ಹಲವು ಘಟನೆಗಳ ಹಿನ್ನೆಲೆಯಲ್ಲಿ, ಈ ಮೆರವಣಿಗೆಯ ಕುರಿತು ನಾವು ಅತ್ಯಂತ ಆತಂಕಿತರಾಗಿದ್ದೇವೆ. ಶಾಂತಿ ಮತ್ತು ಕೋಮು ಸೌದಾರ್ಹತೆಯನ್ನು ಈ ಘಟನೆಗಳು ಹಾಳು ಮಾಡಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೀಗಾಗಿ ತಕ್ಷಣವೇ ಮೆರವಣಿಗೆಯ ಮಾರ್ಗವನ್ನು ಬದಲಿಸಬೇಕು. ಫಯಾಜ್‌ಬಾದ್‌ ಮತ್ತು ಕನಕನಗರ ಪ್ರದೇಶದಲ್ಲಿ ಮೆರವಣಿಗೆ ನಡೆಸುವುದು ಸೂಕ್ತವಲ್ಲ. ಈ ಪ್ರದೇಶಗಳಲ್ಲಿ ಮಸೀದಿಗಳಿವೆ. ಮೆರವಣಿಗೆ ಮಾರ್ಗದಲ್ಲೂ ಒಂದು ಮಸೀದಿ ಇದೆ. ರಂಜಾನ್‌ ಮಾಸವಾಗಿರುವ ಕಾರಣ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಸಂಜೆ ವೇಳೆ ಮಸೀದಿಗೆ ಬರುತ್ತಾರೆ. ಯಾವುದೇ ಕೋಮು ಗಲಭೆಗಳನ್ನು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ಕ್ರಮ ಜರುಗಿಸಬೇಕು ಎಂದು ಮತ್ತೊಮ್ಮೆ ನಿಮ್ಮಲ್ಲಿ ಕೋರುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಬಹುತ್ವದ ಮೇಲೆ ಬುಲ್ಡೋಜರ್ ಹರಿಸಿರುವ ಬಾಬಾ-ಮಾಮಾಗಳು

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಗುಲಾಭ್ ಪಾಷಾ ಅವರು, “ಮೆರವಣಿಗೆಗೆ ನಮ್ಮ ವಿರೋಧವಿಲ್ಲ. ಆದರೆ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದ ಜನ ಉಪವಾಸವಿದ್ದು, ಸಂಜೆ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದೇಶದಲ್ಲಿ ನಡೆದಿರುವ ಘಟನೆಗಳು ಆತಂಕ ತಂದಿವೆ. ಹೀಗಾಗಿ ಸಮುದಾಯಗಳ ನಡುವೆ ಶಾಂತಿ ಕಾಪಾಡಬೇಕು” ಎಂದು ತಿಳಿಸಿದರು.

“ಬೆಂಗಳೂರು ದಕ್ಷಿಣದಲ್ಲಿ ಎರಡು ಕೋಮಿನ ಜನರು ಸೌಹಾರ್ದತೆಯಿಂದ ಇದ್ದಾರೆ. ಮುಂದೆಯೂ ಇರುತ್ತಾರೆ. ಆದರೆ ದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ” ಎಂದು ಹೇಳಿದರು.

ಸ್ವರಾಜ್‌ ಪಕ್ಷದ ಮನವಿಗೆ ಬೆಂಗಳೂರು ದಕ್ಷಿಣ ಡಿಸಿಪಿ ಹರೀಶ್ ಪಾಂಡೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ತಿಳಿದು ಬಂದಿದೆ. ಅಣ್ಣಮ್ಮ ಮೆರವಣಿಗೆಯು ಈ ಹಿಂದೆ ಚಲಿಸುತ್ತಿದ್ದ ದಾರಿಯಲ್ಲೇ ತೆರಳುವಂತೆ ಆದೇಶ ನೀಡುವುದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಬೇಕಂತಲೇ ಗಲಭೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಮಸೀದಿ ಮುಂದೆ ಜೈ ಶ್ರೀರಾಮ್ ಕೂಗುವ, ಆಯುಧಗಳನ್ನು ಜಳಪಿಸುವ ದೃಶ್ಯಗಳು ವೈರಲ್ ಆಗುತ್ತಿವೆ. ಪೊಲೀಸರೇ ಮೂಕ ಪ್ರೇಕ್ಷಕರಾಗುತ್ತಿದ್ದಾರೆ. ದೆಹಲಿಯ ಜಹಾಂಗಿರ್‌ಪುರಿಯಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ದೇವರ ಹೆಸರಲ್ಲಿ ಗಲಭೆಗಳನ್ನು ಸೃಷ್ಟಿಸುವ, ಇನ್ನೊಂದು ಕೋಮಿನ ಜನರನ್ನು ಬೇಕಂತಲೇ ಪ್ರಚೋದಿಸುವ ಪ್ರವೃತ್ತಿಗಳು ಎಗ್ಗಿಲ್ಲದೆ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾರ್ಯಕ್ರಮದ ಕುರಿತು ಆತಂಕ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಫಯಾಝಬಾದ್ ಮತ್ತು ಕನಕ ನಗರಗಳು ಭಾರತದಲ್ಲಿಯೇ ಇರುವಂತಹದು ನೆನಪಿರಲಿ ,ಯಾವ ಸಮುದಾಯ ಹೇಗೆ ವರ್ತನೆ ಮಾಡಿದೆ ಎಂಬುವುದು ಎಲ್ಲರಿಗೂ ಇತ್ತೀಚೆಗೆ ತಿಳಿದಿದೆ ಹಿಂದೂಸ್ಥಾನದಲ್ಲಿ ಇದ್ದು ಹಿಂದೂಗಳ ಮೇಲೆ ಗದಪ್ರಹಾರ ಸಹಿಸಲಾಗದು ,ಎಂದಿನಂತೆ ಅಣ್ಣಮ್ಮ ಉತ್ಸವ ನಡೆಯಲಿದೆ

  2. ಹಿಂದೂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸಲ್ಮಾನರು ಮೆರವಣಿಗೆ ಮಾಡಬಹುದಾ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...