Homeಕರ್ನಾಟಕ'ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ': ಪೊಲೀಸ್ ಕಮಿಷನರ್ ಬಿ.ದಯಾನಂದ್

‘ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ’: ಪೊಲೀಸ್ ಕಮಿಷನರ್ ಬಿ.ದಯಾನಂದ್

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತ, ಕನ್ನಡ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​​ಗೆ ಕರೆ ನೀಡಿವೆ. ಆದರೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ‘ಬೆಂಗಳೂರು ಬಂದ್‌ಗೆ ಅವಕಾಶವಿಲ್ಲʼ ಎಂದು ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ”ನಾಳೆ ಬಂದ್‌ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಖಚಿತ” ಎಂದು ಎಚ್ಚರಿಕೆ ನೀಡಿದ್ದಾರೆ.

”ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ.25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಇರಲಿದೆ” ಎಂದು ತಿಳಿಸಿದರು.

”2016 ರಲ್ಲಿ ನಡೆದ ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಬಸ್ ಗಳಿಗೆ ಭದ್ರತೆ ನೀಡೋದರ ಬಗ್ಗೆಯೂ ಚರ್ಚೆ ಮಾಡಲಾಗ್ತಾ ಇದೆ, ತಮಿಳುನಾಡು ಬಸ್ ಗಳಿಗೂ ಭದ್ರತೆ ಬೇಕು ಅಂದ್ರೆ ಕೊಡುತ್ತೇವೆ” ಎಂದು ಹೇಳಿದರು.

ಈ ಕುರಿತು ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ಸೂಚನೆ ನೀಡಿರುವ ಜಿಲ್ಲಾಧಿಕಾರಿ ದಯಾನಂದ್‌ ಅವರು, ನಾಳೆ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲು ಶಿಫಾರಸ್ಸು ಮಾಡಿದ್ದರಿಂದ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಖಾಸಗಿ ಶಾಲೆಗಳ ಒಕ್ಕೂಟದಿಂದ ಬೆಂಗಳೂರಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಎಲ್​ಕೆಜಿ ಯಿಂದ 10ನೇ ತರಗತಿಯವರೆಗೆ ಈ ಕುರಿತಾಗಿ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ-ಕಾಲೇಜು ಇರಲಿವೆ. ಜೊತೆಗೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಇದನ್ನೂ ಓದಿ: ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

ಇನ್ನು ಬೆಂಗಳೂರು ನಗರ ಬಂದ್​ಗೆ ಬೆಂಬಲಿಸುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ. ಒಕ್ಕೂಟದ 37 ಸಂಘಟನೆಗಳು ನಾಳೆಯ ಬಂದ್​ನಲ್ಲಿ ಭಾಗಿಯಾಗಲಿವೆ. ಬಿಎಂಟಿಸಿ ಕೂಡ ತಮ್ಮ ಬಂದ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಹಾಗಾಗಿ ಸಂಚಾರ ವ್ಯವಸ್ಥೆ ಕೂಡ ಅಸ್ತವ್ಯಸ್ಥವಾಗಲಿದೆ.

ಬೆಂಗಳೂರು ಮತ್ತು ಕರ್ನಾಟಕ ಬಂದ್‌ಗೆ ಬೆಂಬಲ ಇಲ್ಲ: ಕರ್ನಾಟಕ ರಕ್ಷಣಾ ವೇದಿಕೆ

ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮತ್ತು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಎರಡೂ ಬಂದ್‌ಗಳಿಗೆ ನಾವು ಬೆಂಬಲ ಕೊಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಅಧಿಕೃತ ಪತ್ರ ಬರೆದಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, ಕಾವೇರಿ ನೀರು ವಿಚಾರದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ, ಆದರೆ ಯಾವುದೇ ಬಂದ್‌ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ ಸಭೆ ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಉನ್ನತಾಧಿಕಾರ ಸಮಿತಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದು ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅಲ್ಲದೆ ಬಂದ್‌ಗೆ ಬೆಂಬಲ ನೀಡದೇ ಇರಲು ಕಾರಣಗಳನ್ನು ಕೂಡ ಕರವೇ ನೀಡಿದೆ.

ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26 ಮತ್ತು 29ರಂದು ಹಲವು ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್, ಕರ್ನಾಟಕ ಬಂದ್ ಇತ್ಯಾದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುವುದಿಲ್ಲ. ಆದರೆ ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ಪ್ರತಿದಿನವೂ ನಡೆಯಲಿದ್ದು, ಸೆಪ್ಟೆಂಬರ್ 26ರಂದು ಮಂಗಳವಾರ ವೇದಿಕೆಯ ಗಾಂಧಿನಗರ ಕಚೇರಿ ಆವರಣದಿಂದ ವೇದಿಕೆ ಕಾರ್ಯಕರ್ತರು ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಯಾವುದೇ ಚಳವಳಿ ಕೈಗೆತ್ತಿಕೊಂಡರೂ ಜನಜಾಗೃತಿ ಮೂಡಿಸುವುದನ್ನು ಮೊದಲನೇ ಆದ್ಯತೆಯಾಗಿ ತೆಗೆದುಕೊಳ್ಳುತ್ತದೆ. ದಿಢೀರನೆ ಬಂದ್‌ಗೆ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ಒಪ್ಪಲ್ಲ, ಬಂದ್ ಹೋರಾಟದ ಕೊನೆಯ ಅಸ್ತ್ರವಾಗಿರಬೇಕು ಎಂದು ಹೇಳಿದೆ.

ಎರಡೂ ದಿನಗಳ ಬಂದ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿ, ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲ್ಲ. ಬಂದ್‌ಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಕಾವೇರಿಗಾಗಿ ನಮ್ಮ ಪ್ರಜಾಸತ್ತಾತ್ಮಕ ಮಾದರಿಯ ಹೋರಾಟಗಳು ಮುಂದುವರೆಯುತ್ತವೆ ಎಂದು ಕರವೇ ಹೇಳಿದೆ. ಸುಮಾರು ಏಳು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶ ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...