Homeಕರ್ನಾಟಕ'ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ': ಪೊಲೀಸ್ ಕಮಿಷನರ್ ಬಿ.ದಯಾನಂದ್

‘ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ’: ಪೊಲೀಸ್ ಕಮಿಷನರ್ ಬಿ.ದಯಾನಂದ್

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತ, ಕನ್ನಡ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​​ಗೆ ಕರೆ ನೀಡಿವೆ. ಆದರೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ‘ಬೆಂಗಳೂರು ಬಂದ್‌ಗೆ ಅವಕಾಶವಿಲ್ಲʼ ಎಂದು ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ”ನಾಳೆ ಬಂದ್‌ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಖಚಿತ” ಎಂದು ಎಚ್ಚರಿಕೆ ನೀಡಿದ್ದಾರೆ.

”ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ.25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಇರಲಿದೆ” ಎಂದು ತಿಳಿಸಿದರು.

”2016 ರಲ್ಲಿ ನಡೆದ ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಬಸ್ ಗಳಿಗೆ ಭದ್ರತೆ ನೀಡೋದರ ಬಗ್ಗೆಯೂ ಚರ್ಚೆ ಮಾಡಲಾಗ್ತಾ ಇದೆ, ತಮಿಳುನಾಡು ಬಸ್ ಗಳಿಗೂ ಭದ್ರತೆ ಬೇಕು ಅಂದ್ರೆ ಕೊಡುತ್ತೇವೆ” ಎಂದು ಹೇಳಿದರು.

ಈ ಕುರಿತು ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ಸೂಚನೆ ನೀಡಿರುವ ಜಿಲ್ಲಾಧಿಕಾರಿ ದಯಾನಂದ್‌ ಅವರು, ನಾಳೆ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲು ಶಿಫಾರಸ್ಸು ಮಾಡಿದ್ದರಿಂದ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಖಾಸಗಿ ಶಾಲೆಗಳ ಒಕ್ಕೂಟದಿಂದ ಬೆಂಗಳೂರಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಎಲ್​ಕೆಜಿ ಯಿಂದ 10ನೇ ತರಗತಿಯವರೆಗೆ ಈ ಕುರಿತಾಗಿ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ-ಕಾಲೇಜು ಇರಲಿವೆ. ಜೊತೆಗೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಇದನ್ನೂ ಓದಿ: ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

ಇನ್ನು ಬೆಂಗಳೂರು ನಗರ ಬಂದ್​ಗೆ ಬೆಂಬಲಿಸುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ. ಒಕ್ಕೂಟದ 37 ಸಂಘಟನೆಗಳು ನಾಳೆಯ ಬಂದ್​ನಲ್ಲಿ ಭಾಗಿಯಾಗಲಿವೆ. ಬಿಎಂಟಿಸಿ ಕೂಡ ತಮ್ಮ ಬಂದ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಹಾಗಾಗಿ ಸಂಚಾರ ವ್ಯವಸ್ಥೆ ಕೂಡ ಅಸ್ತವ್ಯಸ್ಥವಾಗಲಿದೆ.

ಬೆಂಗಳೂರು ಮತ್ತು ಕರ್ನಾಟಕ ಬಂದ್‌ಗೆ ಬೆಂಬಲ ಇಲ್ಲ: ಕರ್ನಾಟಕ ರಕ್ಷಣಾ ವೇದಿಕೆ

ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮತ್ತು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಎರಡೂ ಬಂದ್‌ಗಳಿಗೆ ನಾವು ಬೆಂಬಲ ಕೊಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಅಧಿಕೃತ ಪತ್ರ ಬರೆದಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, ಕಾವೇರಿ ನೀರು ವಿಚಾರದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ, ಆದರೆ ಯಾವುದೇ ಬಂದ್‌ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ ಸಭೆ ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಉನ್ನತಾಧಿಕಾರ ಸಮಿತಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದು ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅಲ್ಲದೆ ಬಂದ್‌ಗೆ ಬೆಂಬಲ ನೀಡದೇ ಇರಲು ಕಾರಣಗಳನ್ನು ಕೂಡ ಕರವೇ ನೀಡಿದೆ.

ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26 ಮತ್ತು 29ರಂದು ಹಲವು ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್, ಕರ್ನಾಟಕ ಬಂದ್ ಇತ್ಯಾದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುವುದಿಲ್ಲ. ಆದರೆ ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ಪ್ರತಿದಿನವೂ ನಡೆಯಲಿದ್ದು, ಸೆಪ್ಟೆಂಬರ್ 26ರಂದು ಮಂಗಳವಾರ ವೇದಿಕೆಯ ಗಾಂಧಿನಗರ ಕಚೇರಿ ಆವರಣದಿಂದ ವೇದಿಕೆ ಕಾರ್ಯಕರ್ತರು ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಯಾವುದೇ ಚಳವಳಿ ಕೈಗೆತ್ತಿಕೊಂಡರೂ ಜನಜಾಗೃತಿ ಮೂಡಿಸುವುದನ್ನು ಮೊದಲನೇ ಆದ್ಯತೆಯಾಗಿ ತೆಗೆದುಕೊಳ್ಳುತ್ತದೆ. ದಿಢೀರನೆ ಬಂದ್‌ಗೆ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ಒಪ್ಪಲ್ಲ, ಬಂದ್ ಹೋರಾಟದ ಕೊನೆಯ ಅಸ್ತ್ರವಾಗಿರಬೇಕು ಎಂದು ಹೇಳಿದೆ.

ಎರಡೂ ದಿನಗಳ ಬಂದ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿ, ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲ್ಲ. ಬಂದ್‌ಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಕಾವೇರಿಗಾಗಿ ನಮ್ಮ ಪ್ರಜಾಸತ್ತಾತ್ಮಕ ಮಾದರಿಯ ಹೋರಾಟಗಳು ಮುಂದುವರೆಯುತ್ತವೆ ಎಂದು ಕರವೇ ಹೇಳಿದೆ. ಸುಮಾರು ಏಳು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶ ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...