Homeಕರ್ನಾಟಕ'ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ': ಪೊಲೀಸ್ ಕಮಿಷನರ್ ಬಿ.ದಯಾನಂದ್

‘ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ’: ಪೊಲೀಸ್ ಕಮಿಷನರ್ ಬಿ.ದಯಾನಂದ್

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತ, ಕನ್ನಡ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​​ಗೆ ಕರೆ ನೀಡಿವೆ. ಆದರೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ‘ಬೆಂಗಳೂರು ಬಂದ್‌ಗೆ ಅವಕಾಶವಿಲ್ಲʼ ಎಂದು ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ”ನಾಳೆ ಬಂದ್‌ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಖಚಿತ” ಎಂದು ಎಚ್ಚರಿಕೆ ನೀಡಿದ್ದಾರೆ.

”ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ.25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಇರಲಿದೆ” ಎಂದು ತಿಳಿಸಿದರು.

”2016 ರಲ್ಲಿ ನಡೆದ ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಬಸ್ ಗಳಿಗೆ ಭದ್ರತೆ ನೀಡೋದರ ಬಗ್ಗೆಯೂ ಚರ್ಚೆ ಮಾಡಲಾಗ್ತಾ ಇದೆ, ತಮಿಳುನಾಡು ಬಸ್ ಗಳಿಗೂ ಭದ್ರತೆ ಬೇಕು ಅಂದ್ರೆ ಕೊಡುತ್ತೇವೆ” ಎಂದು ಹೇಳಿದರು.

ಈ ಕುರಿತು ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (ಡಿಡಿಪಿಐ) ಸೂಚನೆ ನೀಡಿರುವ ಜಿಲ್ಲಾಧಿಕಾರಿ ದಯಾನಂದ್‌ ಅವರು, ನಾಳೆ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲು ಶಿಫಾರಸ್ಸು ಮಾಡಿದ್ದರಿಂದ ಶಿಕ್ಷಣ ಇಲಾಖೆಯಿಂದ ಅಧಿಕೃತವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಖಾಸಗಿ ಶಾಲೆಗಳ ಒಕ್ಕೂಟದಿಂದ ಬೆಂಗಳೂರಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಎಲ್​ಕೆಜಿ ಯಿಂದ 10ನೇ ತರಗತಿಯವರೆಗೆ ಈ ಕುರಿತಾಗಿ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ-ಕಾಲೇಜು ಇರಲಿವೆ. ಜೊತೆಗೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಇದನ್ನೂ ಓದಿ: ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

ಇನ್ನು ಬೆಂಗಳೂರು ನಗರ ಬಂದ್​ಗೆ ಬೆಂಬಲಿಸುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ. ಒಕ್ಕೂಟದ 37 ಸಂಘಟನೆಗಳು ನಾಳೆಯ ಬಂದ್​ನಲ್ಲಿ ಭಾಗಿಯಾಗಲಿವೆ. ಬಿಎಂಟಿಸಿ ಕೂಡ ತಮ್ಮ ಬಂದ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಹಾಗಾಗಿ ಸಂಚಾರ ವ್ಯವಸ್ಥೆ ಕೂಡ ಅಸ್ತವ್ಯಸ್ಥವಾಗಲಿದೆ.

ಬೆಂಗಳೂರು ಮತ್ತು ಕರ್ನಾಟಕ ಬಂದ್‌ಗೆ ಬೆಂಬಲ ಇಲ್ಲ: ಕರ್ನಾಟಕ ರಕ್ಷಣಾ ವೇದಿಕೆ

ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮತ್ತು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಎರಡೂ ಬಂದ್‌ಗಳಿಗೆ ನಾವು ಬೆಂಬಲ ಕೊಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಅಧಿಕೃತ ಪತ್ರ ಬರೆದಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, ಕಾವೇರಿ ನೀರು ವಿಚಾರದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ, ಆದರೆ ಯಾವುದೇ ಬಂದ್‌ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ ಸಭೆ ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಉನ್ನತಾಧಿಕಾರ ಸಮಿತಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದು ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅಲ್ಲದೆ ಬಂದ್‌ಗೆ ಬೆಂಬಲ ನೀಡದೇ ಇರಲು ಕಾರಣಗಳನ್ನು ಕೂಡ ಕರವೇ ನೀಡಿದೆ.

ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26 ಮತ್ತು 29ರಂದು ಹಲವು ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್, ಕರ್ನಾಟಕ ಬಂದ್ ಇತ್ಯಾದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುವುದಿಲ್ಲ. ಆದರೆ ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಹೋರಾಟ ಪ್ರತಿದಿನವೂ ನಡೆಯಲಿದ್ದು, ಸೆಪ್ಟೆಂಬರ್ 26ರಂದು ಮಂಗಳವಾರ ವೇದಿಕೆಯ ಗಾಂಧಿನಗರ ಕಚೇರಿ ಆವರಣದಿಂದ ವೇದಿಕೆ ಕಾರ್ಯಕರ್ತರು ಮೆರವಣಿಗೆ ಹೊರಟು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಯಾವುದೇ ಚಳವಳಿ ಕೈಗೆತ್ತಿಕೊಂಡರೂ ಜನಜಾಗೃತಿ ಮೂಡಿಸುವುದನ್ನು ಮೊದಲನೇ ಆದ್ಯತೆಯಾಗಿ ತೆಗೆದುಕೊಳ್ಳುತ್ತದೆ. ದಿಢೀರನೆ ಬಂದ್‌ಗೆ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವುದನ್ನು ಒಪ್ಪಲ್ಲ, ಬಂದ್ ಹೋರಾಟದ ಕೊನೆಯ ಅಸ್ತ್ರವಾಗಿರಬೇಕು ಎಂದು ಹೇಳಿದೆ.

ಎರಡೂ ದಿನಗಳ ಬಂದ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯಾವುದೇ ಪದಾಧಿಕಾರಿ, ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲ್ಲ. ಬಂದ್‌ಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಕಾವೇರಿಗಾಗಿ ನಮ್ಮ ಪ್ರಜಾಸತ್ತಾತ್ಮಕ ಮಾದರಿಯ ಹೋರಾಟಗಳು ಮುಂದುವರೆಯುತ್ತವೆ ಎಂದು ಕರವೇ ಹೇಳಿದೆ. ಸುಮಾರು ಏಳು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶ ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...