Homeಮುಖಪುಟಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

- Advertisement -
- Advertisement -

ವಿಕೃತ ದುಷ್ಕರ್ಮಿಗಳ ಗುಂಪೊಂದು ಬುಲ್ಲಿ ಬಾಯ್ ಮತ್ತು ಸುಲ್ಲಿಡೀಲ್ಸ್ ಎಂಬ ಮೊಬೈಲ್ ಆಪ್‌ಗಳ ಮೂಲಕ ಹೆಣ್ಣು ಮಕ್ಕಳ ಚಿತ್ರಗಳನ್ನು ಪ್ರಕಟಿಸಿ ಆಕ್ಷೇಪಾರ್ಹವಾಗಿ ಬರೆಯುತ್ತಿದ್ದ ಪ್ರಕರಣ ಎರಡು ದಿನಗಳಿಂದ ಸದ್ದು ಮಾಡುತ್ತಿದೆ. 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಅಸಭ್ಯ ಟೀಕೆಗಳು ಬುಲ್ಲಿ ಬಾಯ್‌ನಲ್ಲಿ ಪ್ರಕಟಗೊಂಡ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು ಮುಂಬೈ ಪೊಲೀಸರು ಬೆಂಗಳೂರು ಮೂಲದ 21 ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಯುವಕನನ್ನು ಬಂಧಿಸಿದ್ದಾರೆ.

ಏನಿದು ಬುಲ್ಲಿ ಬಾಯ್?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ದೆಹಲಿ ಪೊಲೀಸರು FIR ದಾಖಲಿಸಿದ ನಂತರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು “ಭಾರತ ಸರ್ಕಾರವು ದೆಹಲಿ ಮತ್ತು ಮುಂಬೈನಲ್ಲಿ ಪೊಲೀಸ್ ಸಂಸ್ಥೆಗಳೊಂದಿಗೆ ಈ ವಿಷಯದಲ್ಲಿ ಕೆಲಸ ಮಾಡುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಟ್ವಿಟರ್‌ನಲ್ಲಿ ಬುಲ್ಲಿ ಬಾಯ್ ಖಾತೆಯನ್ನು ಬ್ಲಾಕ್ ಮಾಡುವುದಲ್ಲದೆ, ಆಪ್ ಅನ್ನು ರದ್ದುಗೊಳಿಸಲಾಗಿತ್ತು. ಶಿವಸೇನಾ ನಾಯಕಿ ಪ್ರಿಯಾಂಕ ಚತುರ್ವೇದಿ ಮುಂಬೈ ಪೊಲೀಸರ ಮೇಲೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದ್ದರು. ಆ ನಂತರ ಬೆಂಗಳೂರಿನ ಯುವಕನ ಬಂಧನವಾಗಿದೆ. ಯುವಕನ ವಯಸ್ಸು ಹೊರತುಪಡಿಸಿ ಉಳಿದ ಯಾವುದೇ ಮಾಹಿತಿಯನ್ನು ಪೊಲೀಸರು ಇದುವರೆಗೆ ನೀಡಿಲ್ಲ.

ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಆಧಾರದಲ್ಲಿ ಬುಲ್ಲಿ ಆಪ್ ತಯಾರಕರು, ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡವರು, ಮುಂತಾದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಬಿಜೆಪಿ ಪ್ರಚೋದನೆಯೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಬುಲ್ಲಿ ಬಾಯ್ ಪ್ರಕರಣದಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ಅಸಭ್ಯ ಫೋಟೊಗಳು ಹೊರಬರುತ್ತಿದ್ದಂತೆ ಇದಕ್ಕೆಲ್ಲಾ ಬಿಜೆಪಿ ಪ್ರಚೋದನೆಯೇ ಕಾರಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಮುಸ್ಲಿಂ ಮಹಿಳೆಯರ ಮೇಲಿನ ಈ ಅಸಹ್ಯಕರ ಕಿರುಕುಳವನ್ನು ಬಲವಾಗಿ ಖಂಡಿಸುತ್ತೇನೆ. ಇದು ಬಿಜೆಪಿ ನಾಯಕತ್ವವು ಪದೇ ಪದೇ ಅಲ್ಪಸಂಖ್ಯಾತರ ಮೇಲೆ ಅಮಾನವೀಯವಗಿ ವರ್ತಿಸಿದ್ದರ ಪರಿಣಾಮವಾಗಿದೆ. ಇದೇ ರೀತಿಯ ಕಿರುಕುಳಗಳು ಹಿಂದೆ ಕೇಳಿಬಂದಾಗ ಅವುಗಳನ್ನು ನಿರ್ಲಕ್ಷಿಸಿದ್ದು ಏಕೆ? ಈ ಬಾರಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ದೇಶ ವಿಭಜನೆಯ ವಾಸ್ತವ ಸತ್ಯಗಳು: ಭಾಗ-ಒಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....