Homeಕರ್ನಾಟಕಬೆಂಗಳೂರು | ಶಿಕ್ಷಕನಿಂದ ಥಳಿತ, ಕಿರುಕುಳ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು | ಶಿಕ್ಷಕನಿಂದ ಥಳಿತ, ಕಿರುಕುಳ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರಿನ ಶಾಲೆಯೊಂದರಲ್ಲಿ ಶಿಕ್ಷಕರಿಂದ ಕಿರುಕುಳಕ್ಕೊಳಗಾದ 17 ವರ್ಷದ ದಲಿತ ಬಾಲಕ ಸೆಪ್ಟೆಂಬರ್ 27 ರಂದು ಉಳ್ಳಾಲ ಉಪನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕನನ್ನು ಶ್ರೇಯಸ್‌ ಎಂದು ಗುರುತಿಸಲಾಗಿದ್ದು 10ನೇ ತರಗತಿಯಲ್ಲಿ ಕಲಿಯುತ್ತಿದ್ದರು. ಬಾಲಕ ಮನೆಯಲ್ಲಿ ಪೋಷಕರು ಇರದ ಸಮಯದಲ್ಲಿ ಕೃತ್ಯ ಎಸಗಿದ್ದಾರೆ. ನೆರೆಹೊರೆಯವರು ಅವರ ಶವವನ್ನು ಪತ್ತೆ ಹಚ್ಚಿದ್ದರು. ಮರುದಿನವೇ ಪೋಷಕರಿಗೆ ವಿದ್ಯಾರ್ಥಿ ಬರೆದಿರುವ ಆತ್ಮಹತ್ಯೆ ಪತ್ರ ಪತ್ತೆಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಕರು ಬಾಲಕನಿಗೆ ಥಳಿಸಿ, ಜಾತಿ ನಿಂದನೆ ಮಾಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದಾರೆ ಎಂಬ ಕುಟುಂಬದ ಆರೋಪದ ಮೇಲೆ ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ಪಶ್ಚಿಮದಲ್ಲಿರುವ ಜ್ಞಾನಭಾರತಿ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಿಸಿದೆ.

ಇದನ್ನೂ ಓದಿ: ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ಸೇಂಟ್ ಪ್ಯಾಟ್ರಿಕ್ ಮೆಮೋರಿಯಲ್ ಹೈಸ್ಕೂಲ್ ವಿರುದ್ಧ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ-2015 ರ ಸೆಕ್ಷನ್ 75 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಿರುಕುಳದ ಬಗ್ಗೆ ಮಾತನಾಡಿದ ಶ್ರೇಯಸ್ ತಂದೆ ಮಾರ ಹನುಮಯ್ಯ,“ಒಂದು ದಿನ ಶಾಲೆಗೆ ಬರುವಂತೆ ಶಿಕ್ಷಕರು ನನ್ನನ್ನು ಕೇಳಿದರು. ನಾನು ಅಲ್ಲಿಗೆ ಹೋದಾಗ ನನ್ನ ಮಗ ಸರಿಯಾಗಿ ಓದುತ್ತಿಲ್ಲ ಎಂದು ಅವರು ದೂರಿದ್ದರು. ಇದರ ಎರಡು ದಿನಗಳ ನಂತರ, ಅವರು ನನ್ನ ಮಗನನ್ನು ಹೊಡೆದಿರುವುದನ್ನು ನಾನು ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಮಗನ ಬಾಯಿ ಮತ್ತು ಮೂಗಿನಲ್ಲಿ ರಕ್ತ ಸುರಿಯುತ್ತಿತ್ತು. ನನ್ನ ಮಗ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ ಎಂದು ಶಾಲೆಯವರು ಹೇಳಿದ್ದರು. ಆದರೆ ದಿಲೀಪ್ ಎಂಬ ಗಣಿತ ಶಿಕ್ಷಕ ಅವನನ್ನು ನಿಂದಿಸಿದ್ದಾನೆ ಎಂದು ನನಗೆ ತಿಳಿಯಿತು. ನನ್ನ ಮಗ 10 ನೇ ತರಗತಿಯಲ್ಲಿದ್ದು, ಅವನು ಶಾಲೆ ತೊರೆಯಲು ಇದು ಕಾರಣ ಆಗಬಾರದು ಎಂದು ನಾನು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ದೌರ್ಜನ್ಯ ನಡೆದ ನಂತರ ಹನುಮಯ್ಯ ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದರು. ಇನ್ನು ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಶಾಲಾ ಮಂಡಳಿ ಭರವಸೆ ಕೂಡಾ ನೀಡಿತ್ತು. ಆದರೆ ಗಣಿತ ಶಿಕ್ಷಕ ಮಾತ್ರ ಶಾಲೆಗೆ ದೂರು ನೀಡಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ವಿದ್ಯಾರ್ಥಿಯನ್ನು ನಿಂದಿಸಿದ್ದನು ಎಂದು ಹನುಮಯ್ಯ ಆರೋಪಿಸಿದ್ದಾರೆ.

“ಶ್ರೇಯಸ್ ಈಗ ಸ್ವಲ್ಪ ಸಮಯದಿಂದ ಒತ್ತಡ ಮತ್ತು ಅಸಮಾಧಾನದಿಂದ ಕಾಣುತ್ತಿದ್ದನು. ಆದರೆ ಅವನು 10 ನೇ ತರಗತಿಯಲ್ಲಿದ್ದಾಗಿನಿಂದ ಅವನು ತನ್ನ ಅಧ್ಯಯನ ಮತ್ತು ಪರೀಕ್ಷೆಗಳ ಬಗ್ಗೆ ಚಿಂತೆ ಮಾಡುತ್ತಿದ್ದಾನೆ ಎಂದು ನಾವು ಭಾವಿಸಿದ್ದೆವು. ಅವನು ಶಾಲೆಯಲ್ಲಿ ಇಷ್ಟು ಕಷ್ಟ ಅನುಭವಿಸುತ್ತಿದ್ದಾರೆ ಎಂದು ನಮಗೆ ತಿಳಿದಿರಲಿಲ್ಲ” ಎಂದು ಹನುಮಯ್ಯ ನೆನಪಿಸಿಕೊಂಡಿದ್ದಾರೆ.

ಹನುಮಯ್ಯ ಅವರು ತಮ್ಮ ದೂರಿನಲ್ಲಿ ಆರಂಭಿಕ ದೌರ್ಜನ್ಯವನ್ನು ಸೆರೆಹಿಡಿದಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುವಂತೆ  ಪೊಲೀಸ್ ಅಧಿಕಾರಿಗಳಿಗೆ ಕೋರಿದ್ದಾರೆ. ಆದರೆ ದೃಶ್ಯಾವಳಿಗಳನ್ನು ಪರಿಶೀಲಿಸಲು ಪೊಲೀಸರು ನಿರಾಕರಿಸಿದ್ದು, ಅದು ಎರಡು ತಿಂಗಳ ಹಿಂದಿನದ್ದಾಗಿರುವುದರಿಂದ ಅದು ಡಿಲೀಟ್ ಆಗಿದೆ ಎಂದು ಹೇಳಿದ್ದಾಗಿ ಹನುಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ | ‘ತನ್ನ ಸಾವಿಗೆ ಶಿಕ್ಷಕರೇ ಕಾರಣ’; ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ವಿದ್ಯಾರ್ಥಿ

ತಮ್ಮ ಮಗನ ಮೇಲೆ ಶಿಕ್ಷಕ ಮೊದಲ ಬಾರಿಗೆ ದೌರ್ಜನ್ಯ ಎಸಗಿದಾಗಲೆ ತಾನು ತಮ್ಮನ್ನು ಸಂಪರ್ಕಿಸಬೇಕಿತ್ತು ಎಂದೂ ಪೊಲೀಸರು ಹೇಳಿದ್ದಾರೆ ಎಂದು ಹನುಮಯ್ಯ ಹೇಳಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...