Homeಕರ್ನಾಟಕಬೆಂಗಳೂರು | ಶಿಕ್ಷಕನಿಂದ ಥಳಿತ, ಕಿರುಕುಳ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು | ಶಿಕ್ಷಕನಿಂದ ಥಳಿತ, ಕಿರುಕುಳ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರಿನ ಶಾಲೆಯೊಂದರಲ್ಲಿ ಶಿಕ್ಷಕರಿಂದ ಕಿರುಕುಳಕ್ಕೊಳಗಾದ 17 ವರ್ಷದ ದಲಿತ ಬಾಲಕ ಸೆಪ್ಟೆಂಬರ್ 27 ರಂದು ಉಳ್ಳಾಲ ಉಪನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕನನ್ನು ಶ್ರೇಯಸ್‌ ಎಂದು ಗುರುತಿಸಲಾಗಿದ್ದು 10ನೇ ತರಗತಿಯಲ್ಲಿ ಕಲಿಯುತ್ತಿದ್ದರು. ಬಾಲಕ ಮನೆಯಲ್ಲಿ ಪೋಷಕರು ಇರದ ಸಮಯದಲ್ಲಿ ಕೃತ್ಯ ಎಸಗಿದ್ದಾರೆ. ನೆರೆಹೊರೆಯವರು ಅವರ ಶವವನ್ನು ಪತ್ತೆ ಹಚ್ಚಿದ್ದರು. ಮರುದಿನವೇ ಪೋಷಕರಿಗೆ ವಿದ್ಯಾರ್ಥಿ ಬರೆದಿರುವ ಆತ್ಮಹತ್ಯೆ ಪತ್ರ ಪತ್ತೆಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಕರು ಬಾಲಕನಿಗೆ ಥಳಿಸಿ, ಜಾತಿ ನಿಂದನೆ ಮಾಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದಾರೆ ಎಂಬ ಕುಟುಂಬದ ಆರೋಪದ ಮೇಲೆ ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ಪಶ್ಚಿಮದಲ್ಲಿರುವ ಜ್ಞಾನಭಾರತಿ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಿಸಿದೆ.

ಇದನ್ನೂ ಓದಿ: ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ಸೇಂಟ್ ಪ್ಯಾಟ್ರಿಕ್ ಮೆಮೋರಿಯಲ್ ಹೈಸ್ಕೂಲ್ ವಿರುದ್ಧ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ-2015 ರ ಸೆಕ್ಷನ್ 75 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಿರುಕುಳದ ಬಗ್ಗೆ ಮಾತನಾಡಿದ ಶ್ರೇಯಸ್ ತಂದೆ ಮಾರ ಹನುಮಯ್ಯ,“ಒಂದು ದಿನ ಶಾಲೆಗೆ ಬರುವಂತೆ ಶಿಕ್ಷಕರು ನನ್ನನ್ನು ಕೇಳಿದರು. ನಾನು ಅಲ್ಲಿಗೆ ಹೋದಾಗ ನನ್ನ ಮಗ ಸರಿಯಾಗಿ ಓದುತ್ತಿಲ್ಲ ಎಂದು ಅವರು ದೂರಿದ್ದರು. ಇದರ ಎರಡು ದಿನಗಳ ನಂತರ, ಅವರು ನನ್ನ ಮಗನನ್ನು ಹೊಡೆದಿರುವುದನ್ನು ನಾನು ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಮಗನ ಬಾಯಿ ಮತ್ತು ಮೂಗಿನಲ್ಲಿ ರಕ್ತ ಸುರಿಯುತ್ತಿತ್ತು. ನನ್ನ ಮಗ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ ಎಂದು ಶಾಲೆಯವರು ಹೇಳಿದ್ದರು. ಆದರೆ ದಿಲೀಪ್ ಎಂಬ ಗಣಿತ ಶಿಕ್ಷಕ ಅವನನ್ನು ನಿಂದಿಸಿದ್ದಾನೆ ಎಂದು ನನಗೆ ತಿಳಿಯಿತು. ನನ್ನ ಮಗ 10 ನೇ ತರಗತಿಯಲ್ಲಿದ್ದು, ಅವನು ಶಾಲೆ ತೊರೆಯಲು ಇದು ಕಾರಣ ಆಗಬಾರದು ಎಂದು ನಾನು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ದೌರ್ಜನ್ಯ ನಡೆದ ನಂತರ ಹನುಮಯ್ಯ ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದರು. ಇನ್ನು ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಶಾಲಾ ಮಂಡಳಿ ಭರವಸೆ ಕೂಡಾ ನೀಡಿತ್ತು. ಆದರೆ ಗಣಿತ ಶಿಕ್ಷಕ ಮಾತ್ರ ಶಾಲೆಗೆ ದೂರು ನೀಡಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ವಿದ್ಯಾರ್ಥಿಯನ್ನು ನಿಂದಿಸಿದ್ದನು ಎಂದು ಹನುಮಯ್ಯ ಆರೋಪಿಸಿದ್ದಾರೆ.

“ಶ್ರೇಯಸ್ ಈಗ ಸ್ವಲ್ಪ ಸಮಯದಿಂದ ಒತ್ತಡ ಮತ್ತು ಅಸಮಾಧಾನದಿಂದ ಕಾಣುತ್ತಿದ್ದನು. ಆದರೆ ಅವನು 10 ನೇ ತರಗತಿಯಲ್ಲಿದ್ದಾಗಿನಿಂದ ಅವನು ತನ್ನ ಅಧ್ಯಯನ ಮತ್ತು ಪರೀಕ್ಷೆಗಳ ಬಗ್ಗೆ ಚಿಂತೆ ಮಾಡುತ್ತಿದ್ದಾನೆ ಎಂದು ನಾವು ಭಾವಿಸಿದ್ದೆವು. ಅವನು ಶಾಲೆಯಲ್ಲಿ ಇಷ್ಟು ಕಷ್ಟ ಅನುಭವಿಸುತ್ತಿದ್ದಾರೆ ಎಂದು ನಮಗೆ ತಿಳಿದಿರಲಿಲ್ಲ” ಎಂದು ಹನುಮಯ್ಯ ನೆನಪಿಸಿಕೊಂಡಿದ್ದಾರೆ.

ಹನುಮಯ್ಯ ಅವರು ತಮ್ಮ ದೂರಿನಲ್ಲಿ ಆರಂಭಿಕ ದೌರ್ಜನ್ಯವನ್ನು ಸೆರೆಹಿಡಿದಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುವಂತೆ  ಪೊಲೀಸ್ ಅಧಿಕಾರಿಗಳಿಗೆ ಕೋರಿದ್ದಾರೆ. ಆದರೆ ದೃಶ್ಯಾವಳಿಗಳನ್ನು ಪರಿಶೀಲಿಸಲು ಪೊಲೀಸರು ನಿರಾಕರಿಸಿದ್ದು, ಅದು ಎರಡು ತಿಂಗಳ ಹಿಂದಿನದ್ದಾಗಿರುವುದರಿಂದ ಅದು ಡಿಲೀಟ್ ಆಗಿದೆ ಎಂದು ಹೇಳಿದ್ದಾಗಿ ಹನುಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ | ‘ತನ್ನ ಸಾವಿಗೆ ಶಿಕ್ಷಕರೇ ಕಾರಣ’; ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ವಿದ್ಯಾರ್ಥಿ

ತಮ್ಮ ಮಗನ ಮೇಲೆ ಶಿಕ್ಷಕ ಮೊದಲ ಬಾರಿಗೆ ದೌರ್ಜನ್ಯ ಎಸಗಿದಾಗಲೆ ತಾನು ತಮ್ಮನ್ನು ಸಂಪರ್ಕಿಸಬೇಕಿತ್ತು ಎಂದೂ ಪೊಲೀಸರು ಹೇಳಿದ್ದಾರೆ ಎಂದು ಹನುಮಯ್ಯ ಹೇಳಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...