Homeಕರೋನಾ ತಲ್ಲಣಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

- Advertisement -
- Advertisement -

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ‘ಬೆಡ್‌ ಬ್ಲಾಕ್‌’ ಹಗರಣ ರಾಜ್ಯದಲ್ಲಿ ಭಾರೀ ಸುದ್ದಿ ಮತ್ತು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಬೆಡ್‌ ಹಗರಣವನ್ನು ಬಯಲಿಗೆಳೆದಿದ್ದಾರೆ! ದಿಢೀರ್ ಆಗಿ ನಡೆದ ಕಾರ್ಯಾಚರಣೆಯಲ್ಲಿ ಬೆಡ್‌ ಹಗರಣ ಹೇಗೆ ನಡೆಯಿತು ಎಂಬುವುದನ್ನು ತೆರೆದಿಟ್ಟಿದ್ದಾರೆ. ಮಾಧ್ಯಮಗಳಲ್ಲೂ ಸಾಕಷ್ಟು ಪ್ರಚಾರವನ್ನು ಪಡೆದುಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕರ ಹೆಸರು ಹೇಳುವ ಮೂಲಕ ಪರೋಕ್ಷವಾಗಿ ಈ ದಂಧೆಯಲ್ಲಿ ಒಂದು ಧರ್ಮದವರ ಪಾಲಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ಈ ಹೆಸರುಗಳನ್ನೇ ಮುಂದಿಟ್ಟುಕೊಂಡು ಬಿಜೆಪಿ ಐಟಿ ಸೆಲ್‌ ಮತೀಯ ನೆಟ್‌ ದಾಳಿ ನಡೆಸಲು ಶುರುಮಾಡಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಡ್‌ ಹಗರಣದ ವಾಸ್ತವವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಬೆಡ್‌ ಹಗರಣ ಮಂಗಳವಾರ ದಿಢೀರ್ ಆಗಿ ಬೆಳಕಿಗೆ ಬಂದಿದ್ದಲ್ಲ. ವಂದೇ ಭಾರತಂ ಎಂಬ ಸಂಘಪರಿವಾರ ಹಿನ್ನಲೆಯನ್ನು ಹೊಂದಿರುವ ತಂಡವೊಂದು ಅಕ್ರಮ ಬೆಡ್‌ ಬ್ಲಾಕ್‌ ಹಾಗೂ ಮೆಡಿಸಿನ್ ಮಾರಾಟದ ಬಗ್ಗೆ ಸುಳಿವು ಪಡೆದುಕೊಂಡಿತ್ತು.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುವ ಪ್ರಯತ್ನ ನಡೆಸಿತ್ತು. ಆದರೆ ಸರ್ಕಾರ ಇದ್ಯಾವುದನ್ನು ಕಿವಿಗೆ ಹಾಕಿಕೊಂಡಿರಲಿಲ್ಲ. ಹೀಗಿದ್ದರೂ ಬೆನ್ನಿಗೆ ಬಿದ್ದ ತಂಡ ಈ ದಂಧೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಆದರೂ ಸರ್ಕಾರ ಈ ಬಗ್ಗೆ ಯಾವುದೇ ರೀತಿಯಲ್ಲಿ ತಲೆಕೆಡಿಸಿಕೊಂಡಿಲ್ಲ.!

ಇದರ ಬೆನ್ನಲ್ಲೇ ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರನ್ನು ಈ ತಂಡ ಭೇಟಿ ಮಾಡಿ ದಂಧೆಯ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಎಂ ಅಶ್ವತ್ಥ ನಾರಾಯಣ ಅವರು ದಿನಗಳ ಹಿಂದೆ ವಾರ್‌ ರೂಂ, ಕಂಟ್ರೋಲ್ ರೂಂ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಎರಡು ದಿನಗಳ ಹಿಂದೆಯಷ್ಟೇ ಸಹಾಯವಾಣಿಯಲ್ಲಿ ಆಗುತ್ತಿರುವ ಅವ್ಯವ್ಯಸ್ಥೆ ಬಗ್ಗೆ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನೂ ನಿರ್ದೇಶನವನ್ನೂ ನೀಡಿದ್ದರು. ಹಾಗೂ ಕೇಂದ್ರೀಕೃತ ಬೆಡ್‌ ಹಂಚಿಕೆ ವ್ಯವಸ್ಥೆಯನ್ನು ಮಾಡಿದ್ದರು. ಅದರ ಉಸ್ತುವಾರಿ ನೋಡಿಕೊಳ್ಳಲು ಐಎಎಸ್ ಅಧಿಕಾರಿ ಪೊನ್ನುರಾಜ್‌ ಅವರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ಜನರಿಗೆ ಅನುಕೂಲ ಮಾಡಲು ಸರ್ಕಾರ ಬೆಡ್‌ ಹಂಚಿಕೆಗೆ ಐಎಎಸ್ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿತ್ತು. ಆದರೆ ಕೆಲವು ಐಎಎಸ್ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ತಮಗೆ ಬೇಕಾದವರಿಗೆ ಬೆಡ್‌ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಅಷ್ಟಕ್ಕೂ, ತೇಜಸ್ವಿ ಸೂರ್ಯ ದಾಳಿಯ ಸಂದರ್ಭದಲ್ಲಿ ಕೆಲವು ಮುಸ್ಲಿಮ್ ಯುವಕರ ಹೆಸರುಗಳನ್ನು ಓದಿ ಹೇಳುತ್ತಾರೆ. ಆದರೆ ಇವೆರೆಲ್ಲಾ ಕೇವಲ ಅಲ್ಲಿಯ ಸಿಬ್ಬಂದಿಷ್ಟೇ, ಈ ಯುವಕರ ಬಳಿ ಬೆಡ್ ಹಂಚಿಕೆಯ ಯಾವುದೇ ನಿಯಂತ್ರಣ ಇರುವುದಿಲ್ಲ ಎಂಬುವುದು ಕನಿಷ್ಠ ಜ್ಞಾನ. ಬದಲಾಗಿ ಇದರ ನಿಯಂತ್ರಣ ಇರುವುದು ಐಎಎಸ್ ಅಧಿಕಾರಿಗಳ ಜೊತೆಗೆ.

ಕೆಲವು ಅಧಿಕಾರಿಗಳು ಬೆಡ್‌ ಹಂಚಿಕೆಯಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ಜೊತೆಗೆ ಕೈಜೋಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಪೊಲೀಸರು ಕಾರ್ಯಾಚರಣೆ ನಡೆಸಿ ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ಸದ್ಯಕ್ಕೆ ಇವೆಲ್ಲವೂ ಮುಗಿದು ಹೋಗಿತ್ತು, ಅಷ್ಟಕ್ಕೂ ಇದರ ಕ್ರಿಡಿಟ್ ಸಲ್ಲಬೇಕಾಗಿದ್ದು ವಂದೇ ಭಾರತಂ ಸಂಘಟನೆ ಹಾಗೂ ಅದರ ಸದಸ್ಯರಿಗೆ. ಆದರೆ ದಿಢೀರ್‌ ಆಗಿ ತೇಜಸ್ವಿ ಸೂರ್ಯ ಎಂಟ್ರಿ ಪಡೆದುಕೊಳ್ಳುತ್ತಾರೆ. ಕಂಟ್ರೋಲ್ ರೂಂಗೆ ಹೀಗಿ ಮುಸ್ಲಿಂ ಹುಡುಗರು ಏಕೆ ಇದ್ದಾರೆ ಎಂದು ಹೆಸರು ಓದುತ್ತಾರೆ. ಇದು ಮದರಸವೇ? ಎಂದು ಪ್ರಶ್ನಿಸುತ್ತಾರೆ. ಮಾಧ್ಯಮಗಳಲ್ಲೂ ದೊಡ್ಡ ಪ್ರಚಾರ ಪಡೆದುಕೊಳ್ಳುತ್ತಾರೆ. ದಂಧೆಯಲ್ಲಿ ಭಾಗಿಯಾಗಿದ್ದ ನೇತ್ರಾ ಹಾಗೂ ರೋಹಿತ್ ಬಂಧನ ಆದಾಗಲೂ ಸುದ್ದಿಯಾಗದ ಪ್ರಕರಣ ಸೂರ್ಯ ಎಂಟ್ರಿಯೊಂದಿಗೆ ಭರ್ಜರಿ ಸುದ್ದಿ ಯಾಗುತ್ತದೆ.

ಅಷ್ಟಕ್ಕೂ, ಒಂದು ವೇಳೆ ಅಲ್ಲಿನ ಸಿಬ್ಬಂದಿ ಬೆಡ್‌ ಬ್ಲಾಕ್‌ ಮಾಡಿ ದುಡ್ಡು ಸಂಗ್ರಹ ಮಾಡಿದರೆ ಬಿಬಿಎಂಪಿ ಅಧಿಕಾರಿಗಳು ಏನು ಮಾಡುತ್ತಿದ್ದರು? ಅವರು ಸುಮ್ಮನಿರಲು ಕಾರಣ ಏನು? ಹಾಗಾದರೆ ಇದರಲ್ಲಿ ಪಾಲುದಾರರು ಎಂದು ಅರ್ಥ ಅಲ್ಲವೇ?

ಅವರು ಬಿಡಿ ಅಲ್ಲಿಯ ಉಸ್ತುವಾರಿ ಹೊಣೆ ಹೊತ್ತಿರುವ ಸಚಿವ ಆರ್‌. ಅಶೋಕ್ ಏನು ಮಾಡುತ್ತಿದ್ದರು? ಸ್ಪಷ್ಟವಾಗಿ ಇದು ರಾಜ್ಯ ಸರ್ಕಾರದ ವೈಫಲ್ಯ. ಇದರಲ್ಲಿ ಅಧಿಕಾರಿಗಳು, ಆಸ್ಪತ್ರೆ ಹಾಗೂ ಅಯಕಟ್ಟಿನಲ್ಲಿರುವವರು ಎಲ್ಲರೂ ಭಾಗಿಯಾಗಿದ್ದಾರೆ. ಈ ಬಗ್ಗೆ ಚರ್ಚೆ ಆಗುವ ಬದಲಾಗಿ ಅಲ್ಲಿದ್ದ ನಾಲ್ಕು ಮುಸ್ಲಿಂ ಹುಡುಗರ ಹೆಸರನ್ನು ತೇಲಿಸಿ ಬಿಟ್ಟು ಅವರೇ ಕಾರಣಕರ್ತರು ಎಂಬಂತೆ ಬಿಂಬಿಸಲಾಗುತ್ತಿದೆ.

ಇದನ್ನೂ ಓದಿ: ‘ನಮ್ಮ ಕೈಗಳಿಗೆ ರಕ್ತ ಮೆತ್ತಿಕೊಂಡಿದೆ…’ – ಸಂಪಾದಕರೊಬ್ಬರ ತಪ್ಪೊಪ್ಪಿಗೆ!

ಅಸಲಿಗೆ ಇದರ ಹೊಣೆಯನ್ನು ಸಿಎಂ, ಆರೋಗ್ಯ ಸಚಿವ ಸುಧಾಕರ್‌, ಆರ್‌ ಅಶೋಕ್ ಎಲ್ಲರೂ ಹೊರಬೇಕಾಗಿದೆ. ಚಾಮರಾಜನಗರ ಘಟನೆ, ಕೋವಿಡ್‌ ನಿಯಂತ್ರಣ ವಿಫಲವಾಗಿದ್ದಕ್ಕೆ ಹೈಕೋರ್ಟ್‌ ಛೀಮಾರಿ, ವಿರೋಧ ಪಕ್ಷಗಳ ಆರೋಪ ಇವೆಲ್ಲದರಿಂದ ತಪ್ಪಿಸಿಕೊಳ್ಳಲು ಬೆಡ್‌ ಬ್ಲಾಕ್‌ ಪ್ರಕರಣವನ್ನು ಸಾಬರ ತಲೆಗೆ ಕಟ್ಟುವ ಪ್ರಯತ್ನ ಇದಾಗಿದೆ ಎಂಬುವುದು ಆಳಕ್ಕಿಳಿದು ನೋಡಿದರೆ ಸ್ಪಷ್ಟಗೊಳ್ಳುತ್ತದೆ.

ಇನ್ನೊಂದು ಬಹಳ ಪ್ರಮುಖ ವಿಚಾರ ಏನಂದರೆ, ವಾರ್‌ ರೂಂನಲ್ಲಿ ತೇಜಸ್ವಿ ಸೂರ್ಯ ಭೇಟಿ ಕೊಟ್ಟ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಮುಂದೆ ಒಂದಿಷ್ಟು ಮುಸ್ಲಿಂ ಯುವಕರ ಹೆಸರನ್ನು ಓದಿ ಹೇಳುತ್ತಾರೆ. ಆದರೆ ಸೌತ್ ಝೋನ್ ವಾರ್ ರೂಂನಲ್ಲಿರುವ 205 ಸಿಬ್ಬಂದಿ ಪೈಕಿ 16 ಮಂದಿ ಮಾತ್ರ ಮುಸ್ಲಿಮರು ಇರುವುದು. ಹಾಗಿದ್ದರೂ ಮುಸ್ಲಿಮರ ಹೆಸರನ್ನು ಸಂಸದ ತೇಜಸ್ವಿ ಸೂರ್ಯ ಓದಿ ಹೇಳುವ ಉದ್ದೇಶ ಏನು? ಎಂಬುವುದು ಇಲ್ಲಿ ಕುತೂಹಲ ಕೆರಳಿಸಿರುವ ಬಹುಮುಖ್ಯ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...