Homeಕರೋನಾ ತಲ್ಲಣಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

- Advertisement -
- Advertisement -

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ‘ಬೆಡ್‌ ಬ್ಲಾಕ್‌’ ಹಗರಣ ರಾಜ್ಯದಲ್ಲಿ ಭಾರೀ ಸುದ್ದಿ ಮತ್ತು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಬೆಡ್‌ ಹಗರಣವನ್ನು ಬಯಲಿಗೆಳೆದಿದ್ದಾರೆ! ದಿಢೀರ್ ಆಗಿ ನಡೆದ ಕಾರ್ಯಾಚರಣೆಯಲ್ಲಿ ಬೆಡ್‌ ಹಗರಣ ಹೇಗೆ ನಡೆಯಿತು ಎಂಬುವುದನ್ನು ತೆರೆದಿಟ್ಟಿದ್ದಾರೆ. ಮಾಧ್ಯಮಗಳಲ್ಲೂ ಸಾಕಷ್ಟು ಪ್ರಚಾರವನ್ನು ಪಡೆದುಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕರ ಹೆಸರು ಹೇಳುವ ಮೂಲಕ ಪರೋಕ್ಷವಾಗಿ ಈ ದಂಧೆಯಲ್ಲಿ ಒಂದು ಧರ್ಮದವರ ಪಾಲಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ಈ ಹೆಸರುಗಳನ್ನೇ ಮುಂದಿಟ್ಟುಕೊಂಡು ಬಿಜೆಪಿ ಐಟಿ ಸೆಲ್‌ ಮತೀಯ ನೆಟ್‌ ದಾಳಿ ನಡೆಸಲು ಶುರುಮಾಡಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಡ್‌ ಹಗರಣದ ವಾಸ್ತವವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಬೆಡ್‌ ಹಗರಣ ಮಂಗಳವಾರ ದಿಢೀರ್ ಆಗಿ ಬೆಳಕಿಗೆ ಬಂದಿದ್ದಲ್ಲ. ವಂದೇ ಭಾರತಂ ಎಂಬ ಸಂಘಪರಿವಾರ ಹಿನ್ನಲೆಯನ್ನು ಹೊಂದಿರುವ ತಂಡವೊಂದು ಅಕ್ರಮ ಬೆಡ್‌ ಬ್ಲಾಕ್‌ ಹಾಗೂ ಮೆಡಿಸಿನ್ ಮಾರಾಟದ ಬಗ್ಗೆ ಸುಳಿವು ಪಡೆದುಕೊಂಡಿತ್ತು.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುವ ಪ್ರಯತ್ನ ನಡೆಸಿತ್ತು. ಆದರೆ ಸರ್ಕಾರ ಇದ್ಯಾವುದನ್ನು ಕಿವಿಗೆ ಹಾಕಿಕೊಂಡಿರಲಿಲ್ಲ. ಹೀಗಿದ್ದರೂ ಬೆನ್ನಿಗೆ ಬಿದ್ದ ತಂಡ ಈ ದಂಧೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಆದರೂ ಸರ್ಕಾರ ಈ ಬಗ್ಗೆ ಯಾವುದೇ ರೀತಿಯಲ್ಲಿ ತಲೆಕೆಡಿಸಿಕೊಂಡಿಲ್ಲ.!

ಇದರ ಬೆನ್ನಲ್ಲೇ ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರನ್ನು ಈ ತಂಡ ಭೇಟಿ ಮಾಡಿ ದಂಧೆಯ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಎಂ ಅಶ್ವತ್ಥ ನಾರಾಯಣ ಅವರು ದಿನಗಳ ಹಿಂದೆ ವಾರ್‌ ರೂಂ, ಕಂಟ್ರೋಲ್ ರೂಂ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಎರಡು ದಿನಗಳ ಹಿಂದೆಯಷ್ಟೇ ಸಹಾಯವಾಣಿಯಲ್ಲಿ ಆಗುತ್ತಿರುವ ಅವ್ಯವ್ಯಸ್ಥೆ ಬಗ್ಗೆ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನೂ ನಿರ್ದೇಶನವನ್ನೂ ನೀಡಿದ್ದರು. ಹಾಗೂ ಕೇಂದ್ರೀಕೃತ ಬೆಡ್‌ ಹಂಚಿಕೆ ವ್ಯವಸ್ಥೆಯನ್ನು ಮಾಡಿದ್ದರು. ಅದರ ಉಸ್ತುವಾರಿ ನೋಡಿಕೊಳ್ಳಲು ಐಎಎಸ್ ಅಧಿಕಾರಿ ಪೊನ್ನುರಾಜ್‌ ಅವರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ಜನರಿಗೆ ಅನುಕೂಲ ಮಾಡಲು ಸರ್ಕಾರ ಬೆಡ್‌ ಹಂಚಿಕೆಗೆ ಐಎಎಸ್ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿತ್ತು. ಆದರೆ ಕೆಲವು ಐಎಎಸ್ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ತಮಗೆ ಬೇಕಾದವರಿಗೆ ಬೆಡ್‌ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಅಷ್ಟಕ್ಕೂ, ತೇಜಸ್ವಿ ಸೂರ್ಯ ದಾಳಿಯ ಸಂದರ್ಭದಲ್ಲಿ ಕೆಲವು ಮುಸ್ಲಿಮ್ ಯುವಕರ ಹೆಸರುಗಳನ್ನು ಓದಿ ಹೇಳುತ್ತಾರೆ. ಆದರೆ ಇವೆರೆಲ್ಲಾ ಕೇವಲ ಅಲ್ಲಿಯ ಸಿಬ್ಬಂದಿಷ್ಟೇ, ಈ ಯುವಕರ ಬಳಿ ಬೆಡ್ ಹಂಚಿಕೆಯ ಯಾವುದೇ ನಿಯಂತ್ರಣ ಇರುವುದಿಲ್ಲ ಎಂಬುವುದು ಕನಿಷ್ಠ ಜ್ಞಾನ. ಬದಲಾಗಿ ಇದರ ನಿಯಂತ್ರಣ ಇರುವುದು ಐಎಎಸ್ ಅಧಿಕಾರಿಗಳ ಜೊತೆಗೆ.

ಕೆಲವು ಅಧಿಕಾರಿಗಳು ಬೆಡ್‌ ಹಂಚಿಕೆಯಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ಜೊತೆಗೆ ಕೈಜೋಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಪೊಲೀಸರು ಕಾರ್ಯಾಚರಣೆ ನಡೆಸಿ ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ಸದ್ಯಕ್ಕೆ ಇವೆಲ್ಲವೂ ಮುಗಿದು ಹೋಗಿತ್ತು, ಅಷ್ಟಕ್ಕೂ ಇದರ ಕ್ರಿಡಿಟ್ ಸಲ್ಲಬೇಕಾಗಿದ್ದು ವಂದೇ ಭಾರತಂ ಸಂಘಟನೆ ಹಾಗೂ ಅದರ ಸದಸ್ಯರಿಗೆ. ಆದರೆ ದಿಢೀರ್‌ ಆಗಿ ತೇಜಸ್ವಿ ಸೂರ್ಯ ಎಂಟ್ರಿ ಪಡೆದುಕೊಳ್ಳುತ್ತಾರೆ. ಕಂಟ್ರೋಲ್ ರೂಂಗೆ ಹೀಗಿ ಮುಸ್ಲಿಂ ಹುಡುಗರು ಏಕೆ ಇದ್ದಾರೆ ಎಂದು ಹೆಸರು ಓದುತ್ತಾರೆ. ಇದು ಮದರಸವೇ? ಎಂದು ಪ್ರಶ್ನಿಸುತ್ತಾರೆ. ಮಾಧ್ಯಮಗಳಲ್ಲೂ ದೊಡ್ಡ ಪ್ರಚಾರ ಪಡೆದುಕೊಳ್ಳುತ್ತಾರೆ. ದಂಧೆಯಲ್ಲಿ ಭಾಗಿಯಾಗಿದ್ದ ನೇತ್ರಾ ಹಾಗೂ ರೋಹಿತ್ ಬಂಧನ ಆದಾಗಲೂ ಸುದ್ದಿಯಾಗದ ಪ್ರಕರಣ ಸೂರ್ಯ ಎಂಟ್ರಿಯೊಂದಿಗೆ ಭರ್ಜರಿ ಸುದ್ದಿ ಯಾಗುತ್ತದೆ.

ಅಷ್ಟಕ್ಕೂ, ಒಂದು ವೇಳೆ ಅಲ್ಲಿನ ಸಿಬ್ಬಂದಿ ಬೆಡ್‌ ಬ್ಲಾಕ್‌ ಮಾಡಿ ದುಡ್ಡು ಸಂಗ್ರಹ ಮಾಡಿದರೆ ಬಿಬಿಎಂಪಿ ಅಧಿಕಾರಿಗಳು ಏನು ಮಾಡುತ್ತಿದ್ದರು? ಅವರು ಸುಮ್ಮನಿರಲು ಕಾರಣ ಏನು? ಹಾಗಾದರೆ ಇದರಲ್ಲಿ ಪಾಲುದಾರರು ಎಂದು ಅರ್ಥ ಅಲ್ಲವೇ?

ಅವರು ಬಿಡಿ ಅಲ್ಲಿಯ ಉಸ್ತುವಾರಿ ಹೊಣೆ ಹೊತ್ತಿರುವ ಸಚಿವ ಆರ್‌. ಅಶೋಕ್ ಏನು ಮಾಡುತ್ತಿದ್ದರು? ಸ್ಪಷ್ಟವಾಗಿ ಇದು ರಾಜ್ಯ ಸರ್ಕಾರದ ವೈಫಲ್ಯ. ಇದರಲ್ಲಿ ಅಧಿಕಾರಿಗಳು, ಆಸ್ಪತ್ರೆ ಹಾಗೂ ಅಯಕಟ್ಟಿನಲ್ಲಿರುವವರು ಎಲ್ಲರೂ ಭಾಗಿಯಾಗಿದ್ದಾರೆ. ಈ ಬಗ್ಗೆ ಚರ್ಚೆ ಆಗುವ ಬದಲಾಗಿ ಅಲ್ಲಿದ್ದ ನಾಲ್ಕು ಮುಸ್ಲಿಂ ಹುಡುಗರ ಹೆಸರನ್ನು ತೇಲಿಸಿ ಬಿಟ್ಟು ಅವರೇ ಕಾರಣಕರ್ತರು ಎಂಬಂತೆ ಬಿಂಬಿಸಲಾಗುತ್ತಿದೆ.

ಇದನ್ನೂ ಓದಿ: ‘ನಮ್ಮ ಕೈಗಳಿಗೆ ರಕ್ತ ಮೆತ್ತಿಕೊಂಡಿದೆ…’ – ಸಂಪಾದಕರೊಬ್ಬರ ತಪ್ಪೊಪ್ಪಿಗೆ!

ಅಸಲಿಗೆ ಇದರ ಹೊಣೆಯನ್ನು ಸಿಎಂ, ಆರೋಗ್ಯ ಸಚಿವ ಸುಧಾಕರ್‌, ಆರ್‌ ಅಶೋಕ್ ಎಲ್ಲರೂ ಹೊರಬೇಕಾಗಿದೆ. ಚಾಮರಾಜನಗರ ಘಟನೆ, ಕೋವಿಡ್‌ ನಿಯಂತ್ರಣ ವಿಫಲವಾಗಿದ್ದಕ್ಕೆ ಹೈಕೋರ್ಟ್‌ ಛೀಮಾರಿ, ವಿರೋಧ ಪಕ್ಷಗಳ ಆರೋಪ ಇವೆಲ್ಲದರಿಂದ ತಪ್ಪಿಸಿಕೊಳ್ಳಲು ಬೆಡ್‌ ಬ್ಲಾಕ್‌ ಪ್ರಕರಣವನ್ನು ಸಾಬರ ತಲೆಗೆ ಕಟ್ಟುವ ಪ್ರಯತ್ನ ಇದಾಗಿದೆ ಎಂಬುವುದು ಆಳಕ್ಕಿಳಿದು ನೋಡಿದರೆ ಸ್ಪಷ್ಟಗೊಳ್ಳುತ್ತದೆ.

ಇನ್ನೊಂದು ಬಹಳ ಪ್ರಮುಖ ವಿಚಾರ ಏನಂದರೆ, ವಾರ್‌ ರೂಂನಲ್ಲಿ ತೇಜಸ್ವಿ ಸೂರ್ಯ ಭೇಟಿ ಕೊಟ್ಟ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಮುಂದೆ ಒಂದಿಷ್ಟು ಮುಸ್ಲಿಂ ಯುವಕರ ಹೆಸರನ್ನು ಓದಿ ಹೇಳುತ್ತಾರೆ. ಆದರೆ ಸೌತ್ ಝೋನ್ ವಾರ್ ರೂಂನಲ್ಲಿರುವ 205 ಸಿಬ್ಬಂದಿ ಪೈಕಿ 16 ಮಂದಿ ಮಾತ್ರ ಮುಸ್ಲಿಮರು ಇರುವುದು. ಹಾಗಿದ್ದರೂ ಮುಸ್ಲಿಮರ ಹೆಸರನ್ನು ಸಂಸದ ತೇಜಸ್ವಿ ಸೂರ್ಯ ಓದಿ ಹೇಳುವ ಉದ್ದೇಶ ಏನು? ಎಂಬುವುದು ಇಲ್ಲಿ ಕುತೂಹಲ ಕೆರಳಿಸಿರುವ ಬಹುಮುಖ್ಯ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...