Homeಕರೋನಾ ತಲ್ಲಣಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

- Advertisement -
- Advertisement -

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ‘ಬೆಡ್‌ ಬ್ಲಾಕ್‌’ ಹಗರಣ ರಾಜ್ಯದಲ್ಲಿ ಭಾರೀ ಸುದ್ದಿ ಮತ್ತು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಬೆಡ್‌ ಹಗರಣವನ್ನು ಬಯಲಿಗೆಳೆದಿದ್ದಾರೆ! ದಿಢೀರ್ ಆಗಿ ನಡೆದ ಕಾರ್ಯಾಚರಣೆಯಲ್ಲಿ ಬೆಡ್‌ ಹಗರಣ ಹೇಗೆ ನಡೆಯಿತು ಎಂಬುವುದನ್ನು ತೆರೆದಿಟ್ಟಿದ್ದಾರೆ. ಮಾಧ್ಯಮಗಳಲ್ಲೂ ಸಾಕಷ್ಟು ಪ್ರಚಾರವನ್ನು ಪಡೆದುಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕರ ಹೆಸರು ಹೇಳುವ ಮೂಲಕ ಪರೋಕ್ಷವಾಗಿ ಈ ದಂಧೆಯಲ್ಲಿ ಒಂದು ಧರ್ಮದವರ ಪಾಲಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ಈ ಹೆಸರುಗಳನ್ನೇ ಮುಂದಿಟ್ಟುಕೊಂಡು ಬಿಜೆಪಿ ಐಟಿ ಸೆಲ್‌ ಮತೀಯ ನೆಟ್‌ ದಾಳಿ ನಡೆಸಲು ಶುರುಮಾಡಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಡ್‌ ಹಗರಣದ ವಾಸ್ತವವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಬೆಡ್‌ ಹಗರಣ ಮಂಗಳವಾರ ದಿಢೀರ್ ಆಗಿ ಬೆಳಕಿಗೆ ಬಂದಿದ್ದಲ್ಲ. ವಂದೇ ಭಾರತಂ ಎಂಬ ಸಂಘಪರಿವಾರ ಹಿನ್ನಲೆಯನ್ನು ಹೊಂದಿರುವ ತಂಡವೊಂದು ಅಕ್ರಮ ಬೆಡ್‌ ಬ್ಲಾಕ್‌ ಹಾಗೂ ಮೆಡಿಸಿನ್ ಮಾರಾಟದ ಬಗ್ಗೆ ಸುಳಿವು ಪಡೆದುಕೊಂಡಿತ್ತು.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುವ ಪ್ರಯತ್ನ ನಡೆಸಿತ್ತು. ಆದರೆ ಸರ್ಕಾರ ಇದ್ಯಾವುದನ್ನು ಕಿವಿಗೆ ಹಾಕಿಕೊಂಡಿರಲಿಲ್ಲ. ಹೀಗಿದ್ದರೂ ಬೆನ್ನಿಗೆ ಬಿದ್ದ ತಂಡ ಈ ದಂಧೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಆದರೂ ಸರ್ಕಾರ ಈ ಬಗ್ಗೆ ಯಾವುದೇ ರೀತಿಯಲ್ಲಿ ತಲೆಕೆಡಿಸಿಕೊಂಡಿಲ್ಲ.!

ಇದರ ಬೆನ್ನಲ್ಲೇ ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರನ್ನು ಈ ತಂಡ ಭೇಟಿ ಮಾಡಿ ದಂಧೆಯ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಎಂ ಅಶ್ವತ್ಥ ನಾರಾಯಣ ಅವರು ದಿನಗಳ ಹಿಂದೆ ವಾರ್‌ ರೂಂ, ಕಂಟ್ರೋಲ್ ರೂಂ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಎರಡು ದಿನಗಳ ಹಿಂದೆಯಷ್ಟೇ ಸಹಾಯವಾಣಿಯಲ್ಲಿ ಆಗುತ್ತಿರುವ ಅವ್ಯವ್ಯಸ್ಥೆ ಬಗ್ಗೆ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನೂ ನಿರ್ದೇಶನವನ್ನೂ ನೀಡಿದ್ದರು. ಹಾಗೂ ಕೇಂದ್ರೀಕೃತ ಬೆಡ್‌ ಹಂಚಿಕೆ ವ್ಯವಸ್ಥೆಯನ್ನು ಮಾಡಿದ್ದರು. ಅದರ ಉಸ್ತುವಾರಿ ನೋಡಿಕೊಳ್ಳಲು ಐಎಎಸ್ ಅಧಿಕಾರಿ ಪೊನ್ನುರಾಜ್‌ ಅವರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ಜನರಿಗೆ ಅನುಕೂಲ ಮಾಡಲು ಸರ್ಕಾರ ಬೆಡ್‌ ಹಂಚಿಕೆಗೆ ಐಎಎಸ್ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿತ್ತು. ಆದರೆ ಕೆಲವು ಐಎಎಸ್ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ತಮಗೆ ಬೇಕಾದವರಿಗೆ ಬೆಡ್‌ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಅಷ್ಟಕ್ಕೂ, ತೇಜಸ್ವಿ ಸೂರ್ಯ ದಾಳಿಯ ಸಂದರ್ಭದಲ್ಲಿ ಕೆಲವು ಮುಸ್ಲಿಮ್ ಯುವಕರ ಹೆಸರುಗಳನ್ನು ಓದಿ ಹೇಳುತ್ತಾರೆ. ಆದರೆ ಇವೆರೆಲ್ಲಾ ಕೇವಲ ಅಲ್ಲಿಯ ಸಿಬ್ಬಂದಿಷ್ಟೇ, ಈ ಯುವಕರ ಬಳಿ ಬೆಡ್ ಹಂಚಿಕೆಯ ಯಾವುದೇ ನಿಯಂತ್ರಣ ಇರುವುದಿಲ್ಲ ಎಂಬುವುದು ಕನಿಷ್ಠ ಜ್ಞಾನ. ಬದಲಾಗಿ ಇದರ ನಿಯಂತ್ರಣ ಇರುವುದು ಐಎಎಸ್ ಅಧಿಕಾರಿಗಳ ಜೊತೆಗೆ.

ಕೆಲವು ಅಧಿಕಾರಿಗಳು ಬೆಡ್‌ ಹಂಚಿಕೆಯಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ಜೊತೆಗೆ ಕೈಜೋಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಪೊಲೀಸರು ಕಾರ್ಯಾಚರಣೆ ನಡೆಸಿ ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ಸದ್ಯಕ್ಕೆ ಇವೆಲ್ಲವೂ ಮುಗಿದು ಹೋಗಿತ್ತು, ಅಷ್ಟಕ್ಕೂ ಇದರ ಕ್ರಿಡಿಟ್ ಸಲ್ಲಬೇಕಾಗಿದ್ದು ವಂದೇ ಭಾರತಂ ಸಂಘಟನೆ ಹಾಗೂ ಅದರ ಸದಸ್ಯರಿಗೆ. ಆದರೆ ದಿಢೀರ್‌ ಆಗಿ ತೇಜಸ್ವಿ ಸೂರ್ಯ ಎಂಟ್ರಿ ಪಡೆದುಕೊಳ್ಳುತ್ತಾರೆ. ಕಂಟ್ರೋಲ್ ರೂಂಗೆ ಹೀಗಿ ಮುಸ್ಲಿಂ ಹುಡುಗರು ಏಕೆ ಇದ್ದಾರೆ ಎಂದು ಹೆಸರು ಓದುತ್ತಾರೆ. ಇದು ಮದರಸವೇ? ಎಂದು ಪ್ರಶ್ನಿಸುತ್ತಾರೆ. ಮಾಧ್ಯಮಗಳಲ್ಲೂ ದೊಡ್ಡ ಪ್ರಚಾರ ಪಡೆದುಕೊಳ್ಳುತ್ತಾರೆ. ದಂಧೆಯಲ್ಲಿ ಭಾಗಿಯಾಗಿದ್ದ ನೇತ್ರಾ ಹಾಗೂ ರೋಹಿತ್ ಬಂಧನ ಆದಾಗಲೂ ಸುದ್ದಿಯಾಗದ ಪ್ರಕರಣ ಸೂರ್ಯ ಎಂಟ್ರಿಯೊಂದಿಗೆ ಭರ್ಜರಿ ಸುದ್ದಿ ಯಾಗುತ್ತದೆ.

ಅಷ್ಟಕ್ಕೂ, ಒಂದು ವೇಳೆ ಅಲ್ಲಿನ ಸಿಬ್ಬಂದಿ ಬೆಡ್‌ ಬ್ಲಾಕ್‌ ಮಾಡಿ ದುಡ್ಡು ಸಂಗ್ರಹ ಮಾಡಿದರೆ ಬಿಬಿಎಂಪಿ ಅಧಿಕಾರಿಗಳು ಏನು ಮಾಡುತ್ತಿದ್ದರು? ಅವರು ಸುಮ್ಮನಿರಲು ಕಾರಣ ಏನು? ಹಾಗಾದರೆ ಇದರಲ್ಲಿ ಪಾಲುದಾರರು ಎಂದು ಅರ್ಥ ಅಲ್ಲವೇ?

ಅವರು ಬಿಡಿ ಅಲ್ಲಿಯ ಉಸ್ತುವಾರಿ ಹೊಣೆ ಹೊತ್ತಿರುವ ಸಚಿವ ಆರ್‌. ಅಶೋಕ್ ಏನು ಮಾಡುತ್ತಿದ್ದರು? ಸ್ಪಷ್ಟವಾಗಿ ಇದು ರಾಜ್ಯ ಸರ್ಕಾರದ ವೈಫಲ್ಯ. ಇದರಲ್ಲಿ ಅಧಿಕಾರಿಗಳು, ಆಸ್ಪತ್ರೆ ಹಾಗೂ ಅಯಕಟ್ಟಿನಲ್ಲಿರುವವರು ಎಲ್ಲರೂ ಭಾಗಿಯಾಗಿದ್ದಾರೆ. ಈ ಬಗ್ಗೆ ಚರ್ಚೆ ಆಗುವ ಬದಲಾಗಿ ಅಲ್ಲಿದ್ದ ನಾಲ್ಕು ಮುಸ್ಲಿಂ ಹುಡುಗರ ಹೆಸರನ್ನು ತೇಲಿಸಿ ಬಿಟ್ಟು ಅವರೇ ಕಾರಣಕರ್ತರು ಎಂಬಂತೆ ಬಿಂಬಿಸಲಾಗುತ್ತಿದೆ.

ಇದನ್ನೂ ಓದಿ: ‘ನಮ್ಮ ಕೈಗಳಿಗೆ ರಕ್ತ ಮೆತ್ತಿಕೊಂಡಿದೆ…’ – ಸಂಪಾದಕರೊಬ್ಬರ ತಪ್ಪೊಪ್ಪಿಗೆ!

ಅಸಲಿಗೆ ಇದರ ಹೊಣೆಯನ್ನು ಸಿಎಂ, ಆರೋಗ್ಯ ಸಚಿವ ಸುಧಾಕರ್‌, ಆರ್‌ ಅಶೋಕ್ ಎಲ್ಲರೂ ಹೊರಬೇಕಾಗಿದೆ. ಚಾಮರಾಜನಗರ ಘಟನೆ, ಕೋವಿಡ್‌ ನಿಯಂತ್ರಣ ವಿಫಲವಾಗಿದ್ದಕ್ಕೆ ಹೈಕೋರ್ಟ್‌ ಛೀಮಾರಿ, ವಿರೋಧ ಪಕ್ಷಗಳ ಆರೋಪ ಇವೆಲ್ಲದರಿಂದ ತಪ್ಪಿಸಿಕೊಳ್ಳಲು ಬೆಡ್‌ ಬ್ಲಾಕ್‌ ಪ್ರಕರಣವನ್ನು ಸಾಬರ ತಲೆಗೆ ಕಟ್ಟುವ ಪ್ರಯತ್ನ ಇದಾಗಿದೆ ಎಂಬುವುದು ಆಳಕ್ಕಿಳಿದು ನೋಡಿದರೆ ಸ್ಪಷ್ಟಗೊಳ್ಳುತ್ತದೆ.

ಇನ್ನೊಂದು ಬಹಳ ಪ್ರಮುಖ ವಿಚಾರ ಏನಂದರೆ, ವಾರ್‌ ರೂಂನಲ್ಲಿ ತೇಜಸ್ವಿ ಸೂರ್ಯ ಭೇಟಿ ಕೊಟ್ಟ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಮುಂದೆ ಒಂದಿಷ್ಟು ಮುಸ್ಲಿಂ ಯುವಕರ ಹೆಸರನ್ನು ಓದಿ ಹೇಳುತ್ತಾರೆ. ಆದರೆ ಸೌತ್ ಝೋನ್ ವಾರ್ ರೂಂನಲ್ಲಿರುವ 205 ಸಿಬ್ಬಂದಿ ಪೈಕಿ 16 ಮಂದಿ ಮಾತ್ರ ಮುಸ್ಲಿಮರು ಇರುವುದು. ಹಾಗಿದ್ದರೂ ಮುಸ್ಲಿಮರ ಹೆಸರನ್ನು ಸಂಸದ ತೇಜಸ್ವಿ ಸೂರ್ಯ ಓದಿ ಹೇಳುವ ಉದ್ದೇಶ ಏನು? ಎಂಬುವುದು ಇಲ್ಲಿ ಕುತೂಹಲ ಕೆರಳಿಸಿರುವ ಬಹುಮುಖ್ಯ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...