Homeಕರೋನಾ ತಲ್ಲಣಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

- Advertisement -
- Advertisement -

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ‘ಬೆಡ್‌ ಬ್ಲಾಕ್‌’ ಹಗರಣ ರಾಜ್ಯದಲ್ಲಿ ಭಾರೀ ಸುದ್ದಿ ಮತ್ತು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಬೆಡ್‌ ಹಗರಣವನ್ನು ಬಯಲಿಗೆಳೆದಿದ್ದಾರೆ! ದಿಢೀರ್ ಆಗಿ ನಡೆದ ಕಾರ್ಯಾಚರಣೆಯಲ್ಲಿ ಬೆಡ್‌ ಹಗರಣ ಹೇಗೆ ನಡೆಯಿತು ಎಂಬುವುದನ್ನು ತೆರೆದಿಟ್ಟಿದ್ದಾರೆ. ಮಾಧ್ಯಮಗಳಲ್ಲೂ ಸಾಕಷ್ಟು ಪ್ರಚಾರವನ್ನು ಪಡೆದುಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕರ ಹೆಸರು ಹೇಳುವ ಮೂಲಕ ಪರೋಕ್ಷವಾಗಿ ಈ ದಂಧೆಯಲ್ಲಿ ಒಂದು ಧರ್ಮದವರ ಪಾಲಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ಈ ಹೆಸರುಗಳನ್ನೇ ಮುಂದಿಟ್ಟುಕೊಂಡು ಬಿಜೆಪಿ ಐಟಿ ಸೆಲ್‌ ಮತೀಯ ನೆಟ್‌ ದಾಳಿ ನಡೆಸಲು ಶುರುಮಾಡಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಡ್‌ ಹಗರಣದ ವಾಸ್ತವವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಬೆಡ್‌ ಹಗರಣ ಮಂಗಳವಾರ ದಿಢೀರ್ ಆಗಿ ಬೆಳಕಿಗೆ ಬಂದಿದ್ದಲ್ಲ. ವಂದೇ ಭಾರತಂ ಎಂಬ ಸಂಘಪರಿವಾರ ಹಿನ್ನಲೆಯನ್ನು ಹೊಂದಿರುವ ತಂಡವೊಂದು ಅಕ್ರಮ ಬೆಡ್‌ ಬ್ಲಾಕ್‌ ಹಾಗೂ ಮೆಡಿಸಿನ್ ಮಾರಾಟದ ಬಗ್ಗೆ ಸುಳಿವು ಪಡೆದುಕೊಂಡಿತ್ತು.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುವ ಪ್ರಯತ್ನ ನಡೆಸಿತ್ತು. ಆದರೆ ಸರ್ಕಾರ ಇದ್ಯಾವುದನ್ನು ಕಿವಿಗೆ ಹಾಕಿಕೊಂಡಿರಲಿಲ್ಲ. ಹೀಗಿದ್ದರೂ ಬೆನ್ನಿಗೆ ಬಿದ್ದ ತಂಡ ಈ ದಂಧೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಆದರೂ ಸರ್ಕಾರ ಈ ಬಗ್ಗೆ ಯಾವುದೇ ರೀತಿಯಲ್ಲಿ ತಲೆಕೆಡಿಸಿಕೊಂಡಿಲ್ಲ.!

ಇದರ ಬೆನ್ನಲ್ಲೇ ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರನ್ನು ಈ ತಂಡ ಭೇಟಿ ಮಾಡಿ ದಂಧೆಯ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಎಂ ಅಶ್ವತ್ಥ ನಾರಾಯಣ ಅವರು ದಿನಗಳ ಹಿಂದೆ ವಾರ್‌ ರೂಂ, ಕಂಟ್ರೋಲ್ ರೂಂ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಎರಡು ದಿನಗಳ ಹಿಂದೆಯಷ್ಟೇ ಸಹಾಯವಾಣಿಯಲ್ಲಿ ಆಗುತ್ತಿರುವ ಅವ್ಯವ್ಯಸ್ಥೆ ಬಗ್ಗೆ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನೂ ನಿರ್ದೇಶನವನ್ನೂ ನೀಡಿದ್ದರು. ಹಾಗೂ ಕೇಂದ್ರೀಕೃತ ಬೆಡ್‌ ಹಂಚಿಕೆ ವ್ಯವಸ್ಥೆಯನ್ನು ಮಾಡಿದ್ದರು. ಅದರ ಉಸ್ತುವಾರಿ ನೋಡಿಕೊಳ್ಳಲು ಐಎಎಸ್ ಅಧಿಕಾರಿ ಪೊನ್ನುರಾಜ್‌ ಅವರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ಜನರಿಗೆ ಅನುಕೂಲ ಮಾಡಲು ಸರ್ಕಾರ ಬೆಡ್‌ ಹಂಚಿಕೆಗೆ ಐಎಎಸ್ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿತ್ತು. ಆದರೆ ಕೆಲವು ಐಎಎಸ್ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ತಮಗೆ ಬೇಕಾದವರಿಗೆ ಬೆಡ್‌ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಅಷ್ಟಕ್ಕೂ, ತೇಜಸ್ವಿ ಸೂರ್ಯ ದಾಳಿಯ ಸಂದರ್ಭದಲ್ಲಿ ಕೆಲವು ಮುಸ್ಲಿಮ್ ಯುವಕರ ಹೆಸರುಗಳನ್ನು ಓದಿ ಹೇಳುತ್ತಾರೆ. ಆದರೆ ಇವೆರೆಲ್ಲಾ ಕೇವಲ ಅಲ್ಲಿಯ ಸಿಬ್ಬಂದಿಷ್ಟೇ, ಈ ಯುವಕರ ಬಳಿ ಬೆಡ್ ಹಂಚಿಕೆಯ ಯಾವುದೇ ನಿಯಂತ್ರಣ ಇರುವುದಿಲ್ಲ ಎಂಬುವುದು ಕನಿಷ್ಠ ಜ್ಞಾನ. ಬದಲಾಗಿ ಇದರ ನಿಯಂತ್ರಣ ಇರುವುದು ಐಎಎಸ್ ಅಧಿಕಾರಿಗಳ ಜೊತೆಗೆ.

ಕೆಲವು ಅಧಿಕಾರಿಗಳು ಬೆಡ್‌ ಹಂಚಿಕೆಯಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ಜೊತೆಗೆ ಕೈಜೋಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಪೊಲೀಸರು ಕಾರ್ಯಾಚರಣೆ ನಡೆಸಿ ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ಸದ್ಯಕ್ಕೆ ಇವೆಲ್ಲವೂ ಮುಗಿದು ಹೋಗಿತ್ತು, ಅಷ್ಟಕ್ಕೂ ಇದರ ಕ್ರಿಡಿಟ್ ಸಲ್ಲಬೇಕಾಗಿದ್ದು ವಂದೇ ಭಾರತಂ ಸಂಘಟನೆ ಹಾಗೂ ಅದರ ಸದಸ್ಯರಿಗೆ. ಆದರೆ ದಿಢೀರ್‌ ಆಗಿ ತೇಜಸ್ವಿ ಸೂರ್ಯ ಎಂಟ್ರಿ ಪಡೆದುಕೊಳ್ಳುತ್ತಾರೆ. ಕಂಟ್ರೋಲ್ ರೂಂಗೆ ಹೀಗಿ ಮುಸ್ಲಿಂ ಹುಡುಗರು ಏಕೆ ಇದ್ದಾರೆ ಎಂದು ಹೆಸರು ಓದುತ್ತಾರೆ. ಇದು ಮದರಸವೇ? ಎಂದು ಪ್ರಶ್ನಿಸುತ್ತಾರೆ. ಮಾಧ್ಯಮಗಳಲ್ಲೂ ದೊಡ್ಡ ಪ್ರಚಾರ ಪಡೆದುಕೊಳ್ಳುತ್ತಾರೆ. ದಂಧೆಯಲ್ಲಿ ಭಾಗಿಯಾಗಿದ್ದ ನೇತ್ರಾ ಹಾಗೂ ರೋಹಿತ್ ಬಂಧನ ಆದಾಗಲೂ ಸುದ್ದಿಯಾಗದ ಪ್ರಕರಣ ಸೂರ್ಯ ಎಂಟ್ರಿಯೊಂದಿಗೆ ಭರ್ಜರಿ ಸುದ್ದಿ ಯಾಗುತ್ತದೆ.

ಅಷ್ಟಕ್ಕೂ, ಒಂದು ವೇಳೆ ಅಲ್ಲಿನ ಸಿಬ್ಬಂದಿ ಬೆಡ್‌ ಬ್ಲಾಕ್‌ ಮಾಡಿ ದುಡ್ಡು ಸಂಗ್ರಹ ಮಾಡಿದರೆ ಬಿಬಿಎಂಪಿ ಅಧಿಕಾರಿಗಳು ಏನು ಮಾಡುತ್ತಿದ್ದರು? ಅವರು ಸುಮ್ಮನಿರಲು ಕಾರಣ ಏನು? ಹಾಗಾದರೆ ಇದರಲ್ಲಿ ಪಾಲುದಾರರು ಎಂದು ಅರ್ಥ ಅಲ್ಲವೇ?

ಅವರು ಬಿಡಿ ಅಲ್ಲಿಯ ಉಸ್ತುವಾರಿ ಹೊಣೆ ಹೊತ್ತಿರುವ ಸಚಿವ ಆರ್‌. ಅಶೋಕ್ ಏನು ಮಾಡುತ್ತಿದ್ದರು? ಸ್ಪಷ್ಟವಾಗಿ ಇದು ರಾಜ್ಯ ಸರ್ಕಾರದ ವೈಫಲ್ಯ. ಇದರಲ್ಲಿ ಅಧಿಕಾರಿಗಳು, ಆಸ್ಪತ್ರೆ ಹಾಗೂ ಅಯಕಟ್ಟಿನಲ್ಲಿರುವವರು ಎಲ್ಲರೂ ಭಾಗಿಯಾಗಿದ್ದಾರೆ. ಈ ಬಗ್ಗೆ ಚರ್ಚೆ ಆಗುವ ಬದಲಾಗಿ ಅಲ್ಲಿದ್ದ ನಾಲ್ಕು ಮುಸ್ಲಿಂ ಹುಡುಗರ ಹೆಸರನ್ನು ತೇಲಿಸಿ ಬಿಟ್ಟು ಅವರೇ ಕಾರಣಕರ್ತರು ಎಂಬಂತೆ ಬಿಂಬಿಸಲಾಗುತ್ತಿದೆ.

ಇದನ್ನೂ ಓದಿ: ‘ನಮ್ಮ ಕೈಗಳಿಗೆ ರಕ್ತ ಮೆತ್ತಿಕೊಂಡಿದೆ…’ – ಸಂಪಾದಕರೊಬ್ಬರ ತಪ್ಪೊಪ್ಪಿಗೆ!

ಅಸಲಿಗೆ ಇದರ ಹೊಣೆಯನ್ನು ಸಿಎಂ, ಆರೋಗ್ಯ ಸಚಿವ ಸುಧಾಕರ್‌, ಆರ್‌ ಅಶೋಕ್ ಎಲ್ಲರೂ ಹೊರಬೇಕಾಗಿದೆ. ಚಾಮರಾಜನಗರ ಘಟನೆ, ಕೋವಿಡ್‌ ನಿಯಂತ್ರಣ ವಿಫಲವಾಗಿದ್ದಕ್ಕೆ ಹೈಕೋರ್ಟ್‌ ಛೀಮಾರಿ, ವಿರೋಧ ಪಕ್ಷಗಳ ಆರೋಪ ಇವೆಲ್ಲದರಿಂದ ತಪ್ಪಿಸಿಕೊಳ್ಳಲು ಬೆಡ್‌ ಬ್ಲಾಕ್‌ ಪ್ರಕರಣವನ್ನು ಸಾಬರ ತಲೆಗೆ ಕಟ್ಟುವ ಪ್ರಯತ್ನ ಇದಾಗಿದೆ ಎಂಬುವುದು ಆಳಕ್ಕಿಳಿದು ನೋಡಿದರೆ ಸ್ಪಷ್ಟಗೊಳ್ಳುತ್ತದೆ.

ಇನ್ನೊಂದು ಬಹಳ ಪ್ರಮುಖ ವಿಚಾರ ಏನಂದರೆ, ವಾರ್‌ ರೂಂನಲ್ಲಿ ತೇಜಸ್ವಿ ಸೂರ್ಯ ಭೇಟಿ ಕೊಟ್ಟ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಮುಂದೆ ಒಂದಿಷ್ಟು ಮುಸ್ಲಿಂ ಯುವಕರ ಹೆಸರನ್ನು ಓದಿ ಹೇಳುತ್ತಾರೆ. ಆದರೆ ಸೌತ್ ಝೋನ್ ವಾರ್ ರೂಂನಲ್ಲಿರುವ 205 ಸಿಬ್ಬಂದಿ ಪೈಕಿ 16 ಮಂದಿ ಮಾತ್ರ ಮುಸ್ಲಿಮರು ಇರುವುದು. ಹಾಗಿದ್ದರೂ ಮುಸ್ಲಿಮರ ಹೆಸರನ್ನು ಸಂಸದ ತೇಜಸ್ವಿ ಸೂರ್ಯ ಓದಿ ಹೇಳುವ ಉದ್ದೇಶ ಏನು? ಎಂಬುವುದು ಇಲ್ಲಿ ಕುತೂಹಲ ಕೆರಳಿಸಿರುವ ಬಹುಮುಖ್ಯ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...