Homeಕರ್ನಾಟಕಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

ಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಗೆ ವೀಸಾ ಕೊಡಿಸುವುದಾಗಿ ಭರವಸೆ ನೀಡಿ ₹89 ಲಕ್ಷ ವಂಚಿಸಿದ ಆರೋಪದ ಮೇಲೆ 33 ವರ್ಷದ ಬೆಂಗಳೂರಿನ ನಿವಾಸಿಯೊಬ್ಬನನ್ನು ಬುಧವಾರ ಪೊಲೀಸರು ಬಂಧಿಸಲಾಗಿದೆ.

ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿರುವ ಅರಹಂತ್ ಮೋಹನ್ ಕುಮಾರ್ ಲಕ್ಕವಳ್ಳಿ ಅವರು ಬಿಕಾಂ ಪದವೀಧರರಾಗಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆಯು 2019ರ ಜೂನ್‌ನಲ್ಲಿ ಕೌಲಾಲಂಪುರಕ್ಕೆ ಹೋಗುವಾಗ ವಿಮಾನದಲ್ಲಿ ಮೋಹನ್ ಕುಮಾರ್ ಅವರನ್ನು ಭೇಟಿಯಾಗಿದ್ದರು. ಏಪ್ರಿಲ್ 26 ರಂದು ಬೆಳ್ಳಂದೂರು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

ಇಟಾಲಿಯನ್ ಮತ್ತು ಜೆಕ್ ರಿಪಬ್ಲಿಕ್ ವೀಸಾಗಳಿಗಾಗಿ ಮಹಿಳೆ ಅರ್ಜಿಯನ್ನು ಸಲ್ಲಿಸಿದಾಗ ತಿರಸ್ಕೃತವಾಗಿದ್ದವು. ಜನವರಿ 2020ರಲ್ಲಿ ಅವರು ವೀಸಾವನ್ನು ಪಡೆದರು. ಆದರೆ ಅರ್ಜಿಯನ್ನು ಮೊದಲು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದ್ದರು.

ಮಹಿಳೆಗೆ ಸಹಾಯ ಮಾಡಲು ಮುಂದಾಗಿ ವಿಮಾನದಲ್ಲಿ ಮಹಿಳೆಯನ್ನು ಭೇಟಿಯಾದಾಗ ತನ್ನನ್ನು IB ಅಧಿಕಾರಿ ಎಂದು ಪರಿಚಯಿಸಿಕೊಂಡ ಕುಮಾರ್, ನಿಮ್ಮ ಪಾಸ್‌ಪೋರ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ನಿಮ್ಮನ್ನು “ಶಂಕಿತ ಭಯೋತ್ಪಾದಕ ಚಟುವಟಿಕೆಗಳ ಕಾಯ್ದೆ”ಯಡಿ ಹೆಸರಿಸಲಾಗಿದೆ ಎಂದು ನಂಬಿಸಿದ್ದನು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಪೊಲೀಸರ ಪ್ರಕಾರ, ಮಹಿಳೆ ತನ್ನ ಹೆಸರನ್ನು ತೆರವುಗೊಳಿಸಲು ಕುಮಾರ್‌ನ ಸಹಾಯವನ್ನು ಕೋರಿದ್ದರು. ಆಸ್ಟ್ರಿಯಾ ಮತ್ತು ಜೆಕ್ ರಿಪಬ್ಲಿಕ್‌ನ ಅಧಿಕಾರಿಗಳಿಗೆ 5 ಲಕ್ಷ ಯುರೋ (ಅಂದಾಜು ₹ 4 ಕೋಟಿ) ಮತ್ತು 2 ಲಕ್ಷ ಯೂರೋ (ಅಂದಾಜು ₹ 2 ಕೋಟಿ) ಪಾವತಿಸಬೇಕಾಗುತ್ತದೆ ಎಂದು ಮೋಹನ್‌ ಬಂಬಿಸಿದ್ದನು. 2021ರ ಫೆಬ್ರವರಿ ಮತ್ತು ಸೆಪ್ಟೆಂಬರ್‌ನಲ್ಲಿ, ಈ ಉದ್ದೇಶಕ್ಕಾಗಿ ಮಹಿಳೆ ₹89 ಲಕ್ಷವನ್ನು ಮೋಹನ್‌ಗೆ ವರ್ಗಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆತನಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಸಂತ್ರಸ್ತ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಮರುದಿನ ಪೊಲೀಸರು ಆತನನ್ನು ಬಂಧಿಸಿದ್ದು, ಮಹಿಳೆಯಿಂದ ಸಾಕಷ್ಟು ದಾಖಲೆಗಳನ್ನು ಕೂಡ ಸಂಗ್ರಹಿಸಿರುವುದು ತಿಳಿದುಬಂದಿದೆ ಎಂದು ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ.

ಉಪ ಪೊಲೀಸ್ ಕಮಿಷನರ್ (ವೈಟ್‌ಫೀಲ್ಡ್) ಎಸ್ ಗಿರೀಶ್ ಪ್ರತಿಕ್ರಿಯೆ ನೀಡಿದ್ದು, “ಆತ ಯುರೋಪ್ ಮತ್ತು ಇತರ ದೇಶಗಳಲ್ಲಿ ಪ್ರಯಾಣಿಸಿದ್ದು, ತನಿಖೆಗೆ ಸಹಕರಿಸುತ್ತಿಲ್ಲ. ಇತರರಿಗೆ ಆತ ಮೋಸ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆತನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದೇವೆ. ಹಣವನ್ನು ವಾಪಸ್ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...