Homeಕರ್ನಾಟಕಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

ಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಗೆ ವೀಸಾ ಕೊಡಿಸುವುದಾಗಿ ಭರವಸೆ ನೀಡಿ ₹89 ಲಕ್ಷ ವಂಚಿಸಿದ ಆರೋಪದ ಮೇಲೆ 33 ವರ್ಷದ ಬೆಂಗಳೂರಿನ ನಿವಾಸಿಯೊಬ್ಬನನ್ನು ಬುಧವಾರ ಪೊಲೀಸರು ಬಂಧಿಸಲಾಗಿದೆ.

ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿರುವ ಅರಹಂತ್ ಮೋಹನ್ ಕುಮಾರ್ ಲಕ್ಕವಳ್ಳಿ ಅವರು ಬಿಕಾಂ ಪದವೀಧರರಾಗಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆಯು 2019ರ ಜೂನ್‌ನಲ್ಲಿ ಕೌಲಾಲಂಪುರಕ್ಕೆ ಹೋಗುವಾಗ ವಿಮಾನದಲ್ಲಿ ಮೋಹನ್ ಕುಮಾರ್ ಅವರನ್ನು ಭೇಟಿಯಾಗಿದ್ದರು. ಏಪ್ರಿಲ್ 26 ರಂದು ಬೆಳ್ಳಂದೂರು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

ಇಟಾಲಿಯನ್ ಮತ್ತು ಜೆಕ್ ರಿಪಬ್ಲಿಕ್ ವೀಸಾಗಳಿಗಾಗಿ ಮಹಿಳೆ ಅರ್ಜಿಯನ್ನು ಸಲ್ಲಿಸಿದಾಗ ತಿರಸ್ಕೃತವಾಗಿದ್ದವು. ಜನವರಿ 2020ರಲ್ಲಿ ಅವರು ವೀಸಾವನ್ನು ಪಡೆದರು. ಆದರೆ ಅರ್ಜಿಯನ್ನು ಮೊದಲು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದ್ದರು.

ಮಹಿಳೆಗೆ ಸಹಾಯ ಮಾಡಲು ಮುಂದಾಗಿ ವಿಮಾನದಲ್ಲಿ ಮಹಿಳೆಯನ್ನು ಭೇಟಿಯಾದಾಗ ತನ್ನನ್ನು IB ಅಧಿಕಾರಿ ಎಂದು ಪರಿಚಯಿಸಿಕೊಂಡ ಕುಮಾರ್, ನಿಮ್ಮ ಪಾಸ್‌ಪೋರ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ನಿಮ್ಮನ್ನು “ಶಂಕಿತ ಭಯೋತ್ಪಾದಕ ಚಟುವಟಿಕೆಗಳ ಕಾಯ್ದೆ”ಯಡಿ ಹೆಸರಿಸಲಾಗಿದೆ ಎಂದು ನಂಬಿಸಿದ್ದನು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಪೊಲೀಸರ ಪ್ರಕಾರ, ಮಹಿಳೆ ತನ್ನ ಹೆಸರನ್ನು ತೆರವುಗೊಳಿಸಲು ಕುಮಾರ್‌ನ ಸಹಾಯವನ್ನು ಕೋರಿದ್ದರು. ಆಸ್ಟ್ರಿಯಾ ಮತ್ತು ಜೆಕ್ ರಿಪಬ್ಲಿಕ್‌ನ ಅಧಿಕಾರಿಗಳಿಗೆ 5 ಲಕ್ಷ ಯುರೋ (ಅಂದಾಜು ₹ 4 ಕೋಟಿ) ಮತ್ತು 2 ಲಕ್ಷ ಯೂರೋ (ಅಂದಾಜು ₹ 2 ಕೋಟಿ) ಪಾವತಿಸಬೇಕಾಗುತ್ತದೆ ಎಂದು ಮೋಹನ್‌ ಬಂಬಿಸಿದ್ದನು. 2021ರ ಫೆಬ್ರವರಿ ಮತ್ತು ಸೆಪ್ಟೆಂಬರ್‌ನಲ್ಲಿ, ಈ ಉದ್ದೇಶಕ್ಕಾಗಿ ಮಹಿಳೆ ₹89 ಲಕ್ಷವನ್ನು ಮೋಹನ್‌ಗೆ ವರ್ಗಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆತನಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಸಂತ್ರಸ್ತ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಮರುದಿನ ಪೊಲೀಸರು ಆತನನ್ನು ಬಂಧಿಸಿದ್ದು, ಮಹಿಳೆಯಿಂದ ಸಾಕಷ್ಟು ದಾಖಲೆಗಳನ್ನು ಕೂಡ ಸಂಗ್ರಹಿಸಿರುವುದು ತಿಳಿದುಬಂದಿದೆ ಎಂದು ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ.

ಉಪ ಪೊಲೀಸ್ ಕಮಿಷನರ್ (ವೈಟ್‌ಫೀಲ್ಡ್) ಎಸ್ ಗಿರೀಶ್ ಪ್ರತಿಕ್ರಿಯೆ ನೀಡಿದ್ದು, “ಆತ ಯುರೋಪ್ ಮತ್ತು ಇತರ ದೇಶಗಳಲ್ಲಿ ಪ್ರಯಾಣಿಸಿದ್ದು, ತನಿಖೆಗೆ ಸಹಕರಿಸುತ್ತಿಲ್ಲ. ಇತರರಿಗೆ ಆತ ಮೋಸ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆತನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದೇವೆ. ಹಣವನ್ನು ವಾಪಸ್ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...