Homeಕರ್ನಾಟಕಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

ಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಗೆ ವೀಸಾ ಕೊಡಿಸುವುದಾಗಿ ಭರವಸೆ ನೀಡಿ ₹89 ಲಕ್ಷ ವಂಚಿಸಿದ ಆರೋಪದ ಮೇಲೆ 33 ವರ್ಷದ ಬೆಂಗಳೂರಿನ ನಿವಾಸಿಯೊಬ್ಬನನ್ನು ಬುಧವಾರ ಪೊಲೀಸರು ಬಂಧಿಸಲಾಗಿದೆ.

ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿರುವ ಅರಹಂತ್ ಮೋಹನ್ ಕುಮಾರ್ ಲಕ್ಕವಳ್ಳಿ ಅವರು ಬಿಕಾಂ ಪದವೀಧರರಾಗಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆಯು 2019ರ ಜೂನ್‌ನಲ್ಲಿ ಕೌಲಾಲಂಪುರಕ್ಕೆ ಹೋಗುವಾಗ ವಿಮಾನದಲ್ಲಿ ಮೋಹನ್ ಕುಮಾರ್ ಅವರನ್ನು ಭೇಟಿಯಾಗಿದ್ದರು. ಏಪ್ರಿಲ್ 26 ರಂದು ಬೆಳ್ಳಂದೂರು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

ಇಟಾಲಿಯನ್ ಮತ್ತು ಜೆಕ್ ರಿಪಬ್ಲಿಕ್ ವೀಸಾಗಳಿಗಾಗಿ ಮಹಿಳೆ ಅರ್ಜಿಯನ್ನು ಸಲ್ಲಿಸಿದಾಗ ತಿರಸ್ಕೃತವಾಗಿದ್ದವು. ಜನವರಿ 2020ರಲ್ಲಿ ಅವರು ವೀಸಾವನ್ನು ಪಡೆದರು. ಆದರೆ ಅರ್ಜಿಯನ್ನು ಮೊದಲು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದ್ದರು.

ಮಹಿಳೆಗೆ ಸಹಾಯ ಮಾಡಲು ಮುಂದಾಗಿ ವಿಮಾನದಲ್ಲಿ ಮಹಿಳೆಯನ್ನು ಭೇಟಿಯಾದಾಗ ತನ್ನನ್ನು IB ಅಧಿಕಾರಿ ಎಂದು ಪರಿಚಯಿಸಿಕೊಂಡ ಕುಮಾರ್, ನಿಮ್ಮ ಪಾಸ್‌ಪೋರ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ನಿಮ್ಮನ್ನು “ಶಂಕಿತ ಭಯೋತ್ಪಾದಕ ಚಟುವಟಿಕೆಗಳ ಕಾಯ್ದೆ”ಯಡಿ ಹೆಸರಿಸಲಾಗಿದೆ ಎಂದು ನಂಬಿಸಿದ್ದನು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಪೊಲೀಸರ ಪ್ರಕಾರ, ಮಹಿಳೆ ತನ್ನ ಹೆಸರನ್ನು ತೆರವುಗೊಳಿಸಲು ಕುಮಾರ್‌ನ ಸಹಾಯವನ್ನು ಕೋರಿದ್ದರು. ಆಸ್ಟ್ರಿಯಾ ಮತ್ತು ಜೆಕ್ ರಿಪಬ್ಲಿಕ್‌ನ ಅಧಿಕಾರಿಗಳಿಗೆ 5 ಲಕ್ಷ ಯುರೋ (ಅಂದಾಜು ₹ 4 ಕೋಟಿ) ಮತ್ತು 2 ಲಕ್ಷ ಯೂರೋ (ಅಂದಾಜು ₹ 2 ಕೋಟಿ) ಪಾವತಿಸಬೇಕಾಗುತ್ತದೆ ಎಂದು ಮೋಹನ್‌ ಬಂಬಿಸಿದ್ದನು. 2021ರ ಫೆಬ್ರವರಿ ಮತ್ತು ಸೆಪ್ಟೆಂಬರ್‌ನಲ್ಲಿ, ಈ ಉದ್ದೇಶಕ್ಕಾಗಿ ಮಹಿಳೆ ₹89 ಲಕ್ಷವನ್ನು ಮೋಹನ್‌ಗೆ ವರ್ಗಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆತನಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಸಂತ್ರಸ್ತ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಮರುದಿನ ಪೊಲೀಸರು ಆತನನ್ನು ಬಂಧಿಸಿದ್ದು, ಮಹಿಳೆಯಿಂದ ಸಾಕಷ್ಟು ದಾಖಲೆಗಳನ್ನು ಕೂಡ ಸಂಗ್ರಹಿಸಿರುವುದು ತಿಳಿದುಬಂದಿದೆ ಎಂದು ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ.

ಉಪ ಪೊಲೀಸ್ ಕಮಿಷನರ್ (ವೈಟ್‌ಫೀಲ್ಡ್) ಎಸ್ ಗಿರೀಶ್ ಪ್ರತಿಕ್ರಿಯೆ ನೀಡಿದ್ದು, “ಆತ ಯುರೋಪ್ ಮತ್ತು ಇತರ ದೇಶಗಳಲ್ಲಿ ಪ್ರಯಾಣಿಸಿದ್ದು, ತನಿಖೆಗೆ ಸಹಕರಿಸುತ್ತಿಲ್ಲ. ಇತರರಿಗೆ ಆತ ಮೋಸ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆತನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದೇವೆ. ಹಣವನ್ನು ವಾಪಸ್ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....