Homeಕರ್ನಾಟಕಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

ಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಗೆ ವೀಸಾ ಕೊಡಿಸುವುದಾಗಿ ಭರವಸೆ ನೀಡಿ ₹89 ಲಕ್ಷ ವಂಚಿಸಿದ ಆರೋಪದ ಮೇಲೆ 33 ವರ್ಷದ ಬೆಂಗಳೂರಿನ ನಿವಾಸಿಯೊಬ್ಬನನ್ನು ಬುಧವಾರ ಪೊಲೀಸರು ಬಂಧಿಸಲಾಗಿದೆ.

ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿರುವ ಅರಹಂತ್ ಮೋಹನ್ ಕುಮಾರ್ ಲಕ್ಕವಳ್ಳಿ ಅವರು ಬಿಕಾಂ ಪದವೀಧರರಾಗಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆಯು 2019ರ ಜೂನ್‌ನಲ್ಲಿ ಕೌಲಾಲಂಪುರಕ್ಕೆ ಹೋಗುವಾಗ ವಿಮಾನದಲ್ಲಿ ಮೋಹನ್ ಕುಮಾರ್ ಅವರನ್ನು ಭೇಟಿಯಾಗಿದ್ದರು. ಏಪ್ರಿಲ್ 26 ರಂದು ಬೆಳ್ಳಂದೂರು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

ಇಟಾಲಿಯನ್ ಮತ್ತು ಜೆಕ್ ರಿಪಬ್ಲಿಕ್ ವೀಸಾಗಳಿಗಾಗಿ ಮಹಿಳೆ ಅರ್ಜಿಯನ್ನು ಸಲ್ಲಿಸಿದಾಗ ತಿರಸ್ಕೃತವಾಗಿದ್ದವು. ಜನವರಿ 2020ರಲ್ಲಿ ಅವರು ವೀಸಾವನ್ನು ಪಡೆದರು. ಆದರೆ ಅರ್ಜಿಯನ್ನು ಮೊದಲು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದ್ದರು.

ಮಹಿಳೆಗೆ ಸಹಾಯ ಮಾಡಲು ಮುಂದಾಗಿ ವಿಮಾನದಲ್ಲಿ ಮಹಿಳೆಯನ್ನು ಭೇಟಿಯಾದಾಗ ತನ್ನನ್ನು IB ಅಧಿಕಾರಿ ಎಂದು ಪರಿಚಯಿಸಿಕೊಂಡ ಕುಮಾರ್, ನಿಮ್ಮ ಪಾಸ್‌ಪೋರ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ನಿಮ್ಮನ್ನು “ಶಂಕಿತ ಭಯೋತ್ಪಾದಕ ಚಟುವಟಿಕೆಗಳ ಕಾಯ್ದೆ”ಯಡಿ ಹೆಸರಿಸಲಾಗಿದೆ ಎಂದು ನಂಬಿಸಿದ್ದನು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಪೊಲೀಸರ ಪ್ರಕಾರ, ಮಹಿಳೆ ತನ್ನ ಹೆಸರನ್ನು ತೆರವುಗೊಳಿಸಲು ಕುಮಾರ್‌ನ ಸಹಾಯವನ್ನು ಕೋರಿದ್ದರು. ಆಸ್ಟ್ರಿಯಾ ಮತ್ತು ಜೆಕ್ ರಿಪಬ್ಲಿಕ್‌ನ ಅಧಿಕಾರಿಗಳಿಗೆ 5 ಲಕ್ಷ ಯುರೋ (ಅಂದಾಜು ₹ 4 ಕೋಟಿ) ಮತ್ತು 2 ಲಕ್ಷ ಯೂರೋ (ಅಂದಾಜು ₹ 2 ಕೋಟಿ) ಪಾವತಿಸಬೇಕಾಗುತ್ತದೆ ಎಂದು ಮೋಹನ್‌ ಬಂಬಿಸಿದ್ದನು. 2021ರ ಫೆಬ್ರವರಿ ಮತ್ತು ಸೆಪ್ಟೆಂಬರ್‌ನಲ್ಲಿ, ಈ ಉದ್ದೇಶಕ್ಕಾಗಿ ಮಹಿಳೆ ₹89 ಲಕ್ಷವನ್ನು ಮೋಹನ್‌ಗೆ ವರ್ಗಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆತನಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಸಂತ್ರಸ್ತ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಮರುದಿನ ಪೊಲೀಸರು ಆತನನ್ನು ಬಂಧಿಸಿದ್ದು, ಮಹಿಳೆಯಿಂದ ಸಾಕಷ್ಟು ದಾಖಲೆಗಳನ್ನು ಕೂಡ ಸಂಗ್ರಹಿಸಿರುವುದು ತಿಳಿದುಬಂದಿದೆ ಎಂದು ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ.

ಉಪ ಪೊಲೀಸ್ ಕಮಿಷನರ್ (ವೈಟ್‌ಫೀಲ್ಡ್) ಎಸ್ ಗಿರೀಶ್ ಪ್ರತಿಕ್ರಿಯೆ ನೀಡಿದ್ದು, “ಆತ ಯುರೋಪ್ ಮತ್ತು ಇತರ ದೇಶಗಳಲ್ಲಿ ಪ್ರಯಾಣಿಸಿದ್ದು, ತನಿಖೆಗೆ ಸಹಕರಿಸುತ್ತಿಲ್ಲ. ಇತರರಿಗೆ ಆತ ಮೋಸ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆತನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದೇವೆ. ಹಣವನ್ನು ವಾಪಸ್ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....